Breaking News

Laxminews 24x7

ಧಾರವಾಡ: ಕೊಲೆ ಆರೋಪಿಯನ್ನು ಹೆಡೆಮುರಿ ಕಟ್ಟಿದ ಪೊಲೀಸರು

ಧಾರವಾಡ: ಇಲ್ಲಿನ ಮದಿಹಾಳದಲ್ಲಿ ನಿನ್ನೆ ನಡೆದ ಕೊಲೆಗೆ ಸಂಬಂಧಿಸಿದಂತೆ ರೌಡಿಶೀಟರ್ ಶ್ರೀಶೈಲ ಗಾಣಿಗೇರನನ್ನು ಬಂಧಿಸುವಲ್ಲಿ ಶಹರ ಠಾಣೆ ಪೊಲೀಸರ ಯಶಸ್ವಿಯಾಗಿದ್ದಾರೆ. ಶಿವಯೋಗಿ ಭಾವಿಕಟ್ಟಿ ಹಾಗೂ ಆರೋಪಿ ಶ್ರೀಶೈಲ ಗಾಣಿಗೇರ ಮಧ್ಯೆ ಆಸ್ತಿಗೆ ಸಂಬಂಧಿಸಿದ ವ್ಯವಹಾರವಿತ್ತು. ಈ ಸಂಬಂಧ ಮೊನ್ನೆ ತಡರಾತ್ರಿ ಶಿವಯೋಗಿ ಹಾಗೂ ಆತನ ಇನ್ನಿಬ್ಬರು ಸಹಚರರಾದ ಈರಪ್ಪ ಯಂಗಳ್ಳಿ ಹಾಗೂ ಸುನೀಲ ಕೋನಣ್ಣವರ ಅವರು ಶ್ರೀಶೈಲನ ಮನೆಗೆ ಹೋಗಿ ಕ್ಯಾತೆ ತೆಗೆದಿದ್ದರು. ಈ ಜಗಳ ವಿಕೋಪಕ್ಕೆ ಹೋಗಿದ್ದರಿಂದ ಶ್ರೀಶೈಲ …

Read More »

17 ದಿನಗಳ ಮಗುವಿನ ಅಂತ್ಯಕ್ರಿಯೆ ನಡೆಸಿ ಕಣ್ಣೀರು ಹಾಕಿದ್ರು ಆರೋಗ್ಯ ಸಿಬ್ಬಂದಿ…

ಬೆಂಗಳೂರು: ಒಂದು ಮಗುವಿನ ಆಗಮನ ಅಂದ್ರೆ ಆ ಮನೆ ತುಂಬಾ ಸಂತೋಷ ತುಂಬಿರುತ್ತದೆ. ಇನ್ನು ತಾಯಿಗಂತೂ ಅದು ಮರುಜನ್ಮ, ಒಂಬತ್ತು ತಿಂಗಳು ಹೊತ್ತು, ಹೆರಿಗೆ ನೋವು ಸಹಿಸಿಕೊಂಡ ಆಕೆಗೆ, ಬಳಿಕ ಆ ಮಗುವಿನ ಮುಕ ನೋಡಿ, ಒಮ್ಮೆ ಮಗುವನ್ನು ಮುದ್ದಾಡಿದರೇ ಎಲ್ಲ ನೋವು ಶಮನ. ಆದ್ರೆ ದುರಾದೃಷ್ಟವಶಾತ್​ ಈ ತಾಯಿಗೆ ಆ ಸಂತೋಷ ಸಿಗದಂತಾಗಿದೆ. ಈ ಕಥೆ ಓದಿದ್ರೆ ನಿಜಕ್ಕೂ ಕಣ್ಣೀರು ಬರುತ್ತದೆ. ಕೊರೊನಾ ತಂದಿಟ್ಟ ಪರಿಸ್ಥಿತಿ ನೋಡಿದರೆ ನಿಜಕ್ಕೂ …

Read More »

ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ : ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಹವಾಮಾನ ಇಲಾಖೆಯು ಬಹುಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ಇಂದಿನಿಂದ ಜುಲೈ 10 ರವರೆಗೆ ರಾಜ್ಯದ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.     ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ಇಂದಿನಿಂದ ರಾಜ್ಯದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈಗಾಗಲೇ …

Read More »

ಭೀಕರ ಅಪಘಾತದಲ್ಲಿ ವ್ಯಕ್ತಿ ಸಾವು; ಎದೆ ಝಲ್ಲೆನಿಸೋ ದೃಶ್ಯ ಸಿಸಿಟಿವಿಯಲ್ಲಿ ಸೆರೆ…

ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಿನ್ನೆ ಭೀಕರ ಅಪಘಾತಕ್ಕೀಡಾಗಿ, ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ದೈಹಿಕ ಶಿಕ್ಷಕ ಮಹಾಂತೇಶ್ ಮೃತ ದುರ್ದೈವಿ. ಕಡೂರು ತಾಲೂಕಿನ ಬೀರೂರು ಸಮೀಪ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಈ ಘಟನೆ ನಡೆದಿದೆ. ಕಡೂರಿನಿಂದ ಬಿರೂರಿಗೆ ಬರುತ್ತಿದ್ದ ಟಾಟಾ ಏಸ್​ ವಾಹನಕ್ಕೆ, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೈಕ್​ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್​ ಹಾರಿ ಹೋಗಿದ್ದು, ಮಹಂತೇಶ್​​ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಎದೆ ಝಲ್ಲೆನಿಸುವಂತಿದೆ. ಘಟನೆ …

Read More »

ದುಬೈನಲ್ಲಿ ಬಸವಣ್ಣನವರ ಪ್ರತಿಮೆ ಸ್ಥಾಪನೆ, ಮಧ್ಯಪ್ರಾಚ್ಯ ರಾಷ್ಟ್ರಗಳಿಗೂ ಹರಡಿದ ವಿಶ್ವಗುರು ಚಿಂತನೆಗಳು

ಬೆಂಗಳೂರು,ಜು.5- ಇಂಗ್ಲೆಂಡ್ ನಲ್ಲಿರುವ ಲಂಡನ್ ನ ಥೇಮ್ಸ್ ನದಿ ದಂಡೆ ಮೇಲೆ ವಿಶ್ವ ಗುರು ಬಸವಣ್ಣನವರ ಪ್ರತಿಮೆ ಸ್ಥಾಪನೆಯಾಗಿದ್ದು ಇತಿಹಾಸ. ಈಗ ಅರಬ್ ಸಂಯುಕ್ತ ಸಂಸ್ಥಾನದ ದುಬೈನಲ್ಲಿ ಬಸವಣ್ಣನರ ಪ್ರತಿಮೆ ಸ್ಥಾಪನೆಯಾಗುವ ಮೂಲಕ ಮಧ್ಯಪ್ರಾಚ್ಯ ರಾಷ್ಟ್ರಗಳಿಗೂ ಬಸವಣ್ಣನವರ ಚಿಂತನೆಗಳು ಹರಡುವಂತಾಗಿದೆ. ದುಬೈನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ದುಬೈ ಬಸವ ಸಮಿತಿ ವತಿಯಿಂದ ಬಸವಣ್ಣನವರ ಪಂಚಲೋಹದ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ. ಮಾಜಿ ಗೃಹ ಸಚಿವ ಎಂ.ಬಿ.ಪಾಟೀಲ?ಅವರ ಸಹಾಯ ಮತ್ತು ಸಹಕಾರದಿಂದ ದುಬೈ ಬಸವ …

Read More »

ರಾಜ್ಯದ ಹಲವೆಡೆ ಮುಂಗಾರು ಮಳೆ ಆರಂಭ…………….

ರಾಜ್ಯದ ಹಲವೆಡೆ ಮುಂಗಾರು ಮಳೆ ಆರಂಭವಾಗಿದ್ದು, ಮೋಡ ಕವಿದ ವಾತಾವರಣ ಇರಲಿದೆ. ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ …

Read More »

ಪ್ರೀತಿಸಿ ಮದ್ವೆಯಾದ್ರು- ಪ್ರೀತಿಯ ಸಂಕೇತವಾದ ಮಗುವನ್ನೇ ಕೊಂದ ತಂದೆ

ಬೆಂಗಳೂರು: ಪತಿ-ಪತ್ನಿ ಜಗಳದ ಮಧ್ಯೆ ಮಗು ಅತ್ತಿತೆಂದು ಎಸೆದು ತಂದೆಯೇ ತನ್ನ ಮೂರು ತಿಂಗಳ ಹೆಣ್ಣು ಮಗುವನ್ನು ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ನಡೆದಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಯಡವನಹಳ್ಳಿಯಲ್ಲಿ ಘಟನೆ ನಡೆದಿದ್ದು, ಜನನಿ ಮತ್ತು ಶ್ರೀನಿವಾಸ್ ದಂಪತಿಯ ಮಗು ಸ್ಪಂದನ ಸಾವನ್ನಪ್ಪಿದ ದುರ್ದೈವಿ. ಈ ದಂಪತಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ತಾಲೂಕಿನ ನಿವಾಸಿಗಳಾಗಿದ್ದು, ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಪ್ರತಿ ದಿನ …

Read More »

ಮಾಜಿ ಸಚಿವ ಸಾ.ರಾ ಮಹೇಶ್ ಅವರನ್ನು ಕ್ವಾರಂಟೈನ್ ಮಾಡಲಾಗಿದೆ.

ಮೈಸೂರು: ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ ಮಾಜಿ ಸಚಿವ ಸಾ.ರಾ ಮಹೇಶ್ ಅವರನ್ನು ಕ್ವಾರಂಟೈನ್ ಮಾಡಲಾಗಿದೆ. ಹೌದು. ಮೈಸೂರಿನಲ್ಲಿ ತಾಲೂಕುಗಳೀಗೂ ಮಾಹಾಮಾರಿ ವ್ಯಾಪಿಸಿದೆ. ಕೆ.ಆರ್ ನಗರ ತಾಲೂಕಿನ ಮಹಿಳಾ ತಹಶೀಲ್ದಾರ್‍ಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಸಾ.ರಾ ಮಹೇಶ್‍ಗೆ ಆತಂಕ ಹೆಚ್ಚಾಗಿದೆ. ಸಾ.ರಾ ಮಹೇಶ್ ಅವರು ಎರಡು ದಿನಗಳ ಹಿಂದೆ ತಹಶೀಲ್ದಾರ್ ಜೊತೆ ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದ ಸೀಲ್‍ಡೌನ್ ಪ್ರದೇಶಗಳಿಗೆ ಭೇಟಿ …

Read More »

ಬೆಂಗಳೂರಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ಬಿಬಿಎಂಪಿ ಹೊಸ ಪ್ಲಾನ್

ಬೆಂಗಳೂರು : ಬೆಂಗಳೂರಿನಲ್ಲಿ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳು ಸ್ಪಂದಿಸದ ಕಾರಣ ಈಗ ಸರ್ಕಾರವೇ ಮುಂದೆ ಬಂದು ಮಾರ್ಗೋಪಾಯಗಳನ್ನು ಕಂಡು ಹಿಡಿಯುತ್ತಿದೆ. ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರ ಈಗ ಕರೋನಾ ಚಿಕಿತ್ಸೆ ಆಸ್ಪತ್ರೆಯಾಗಿ ಮಾರ್ಪಡಿಸಲಾಗಿದೆ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕೇಂದ್ರದಲ್ಲಿ ಮಕ್ಕಳು ಹಾಗೂ ಅಗತ್ಯವುಳ್ಳವರಿಗೆ ತುರ್ತು ಚಿಕಿತ್ಸೆ ನೀಡಲು ಇದನ್ನು ಬಳಸಲಾಗುತ್ತಿದೆ ಮತ್ತು ಚಿಕಿತ್ಸೆ ನೀಡುವ ವೈದ್ಯರು ಹಾಗೂ …

Read More »

ಕೇರಳದಲ್ಲಿ ಕೊರೋನಾ ಕಂಟ್ರೋಲ್‌ಗೆ ಸ್ಟ್ರಿಕ್ಟ್ ರೂಲ್ಸ್

ಕಾಸರಗೋಡು: ಕೇರಳ ಸರಕಾರ ಕೊರೋನಾ ವಿರುದ್ದ ಹೋರಾಟದಲ್ಲಿ ಹಲವು ಕಟ್ಟುನಿಟ್ಟಿನ ನಿಯಮಗಳನ್ನು ತಂದಿದ್ದು, ಇದೀಗ ರಾಜ್ಯದಲ್ಲಿ ಕೊರೊನಾ ಪ್ರಕರಗಳ ಹೆಚ್ಚಾಗುತ್ತಿರುವ ಹಿನ್ನಲೆ ಕೇರಳ ಸರಕಾರ ಸಾರ್ವಜನಿಕ ಮತ್ತು ಕೆಲಸದ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದ್ದು, ನಿಯಮಗಳನ್ನು ಉಲ್ಲಂಘನೆ ಮಾಡಿದ್ದಲ್ಲಿ 10,000 ರೂ.ವರೆಗೆ ದಂಡ ಮತ್ತು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಸುಗ್ರೀವಾಜ್ಞೆ ಹೊರಡಿಸಿದೆ. ಕೊರೋನಾ ರೋಗದ ವಿರುದ್ಧ ಹೋರಾಡಲು ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಈ ಸುಗ್ರೀವಾಜ್ಞೆಯನ್ನು …

Read More »