Breaking News

Laxminews 24x7

ಇನ್ಮುಂದೆ ಫುಟ್‌ಪಾತ್‌ನಲ್ಲಿ ಬೈಕ್ ಚಲಾಯಿಸಿದ್ರೆ 5,000 ರೂ. ದಂಡ: ಕೃಷ್ಣ ಬೈರೇಗೌಡ

ಬೆಂಗಳೂರು: ಪಾದಾಚಾರಿ ಮಾರ್ಗದಲ್ಲಿ ಮೋಟಾರು ವಾಹನ ಚಲಾಯಿಸುವವರಿಗೆ ವಿಧಿಸುತ್ತಿದ್ದ ದಂಡದ  ಮೊತ್ತವನ್ನು 5,000 ರೂ.ಗಳಿಗೆ ಹೆಚ್ಚಿಸುವಂತೆ ಒತ್ತಾಯಿಸಿ ಸಚಿವ ಕೃಷ್ಣ ಬೈರೇಗೌಡ  ಅವರು ಸಾರಿಗೆ ಸಚಿವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಬುಧವಾರ ಬೆಂಗಳೂರು ನಗರ ಟ್ರಾಫಿಕ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು, ಸಾರ್ವಜನಿಕರ ನಡೆಯುವ ಹಕ್ಕನ್ನ ಖಚಿತಪಡಿಸುವ ಸಲುವಾಗಿ ಸುಪ್ರೀಂ ಕೋರ್ಟ್ ಸೂಚನೆಯ ಮೇರೆಗೆ ನಗರದಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಐದೂ ಪಾಲಿಕೆಯ ವ್ಯಾಪ್ತಿಯಲ್ಲಿ …

Read More »

ಸಾಕು ನಾಯಿ ಹೊತ್ತೊಯ್ದ ಚಿರತೆ

ಮಡಿಕೇರಿ: ಕೊಡಗಿನ ಶನಿವಾರಸಂತೆ ಸಮೀಪದ ಹೊಸಗುತ್ತಿ ಗ್ರಾಮದಲ್ಲಿ ಕಾಣಿಸಿಕೊಂಡ ಚಿರತೆ ಹೊಂಚು ಹಾಕಿ ಸಾಕು ನಾಯಿಯನ್ನು ಹೊತ್ತೊಯ್ದಿರುವ ಘಟನೆ ನಡೆದಿದೆ. ಇಂದು (ಬುಧವಾರ) ಮಧ್ಯಾಹ್ನ 3 ಗಂಟೆ ಸ್ಥಳೀಯ ನಿವಾಸಿ ಅರುಣ್‌ ಎಂಬುವವರ ಮನೆಯ ಸಮೀಪ ಚಿರತೆ  ಕಾಣಿಸಿಕೊಂಡಿದ್ದು, ಸಾಕು ನಾಯಿಯನ್ನು ಎಳೆದೊಯ್ದಿದೆ. ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ  ಸೆರೆಯಾಗಿದೆ. ಆಲೂರು ಸಿದ್ಧಾಪುರ ವ್ಯಾಪ್ತಿಯ ಆಲೂರು, ಮಾಲಂಬಿ, ಹೊಸಗುತ್ತಿ ಭಾಗಗಳಲ್ಲಿ ಕಳೆದ ಕೆಲ ದಿನಗಳಿಂದ ಚಿರತೆ ಒಡಾಟ ನಡೆಯುತ್ತಿದೆ. ರಾತ್ರಿ …

Read More »

ಸಂಪುಟ ವಿಸ್ತರಣೆ ಇನ್ನೊಂದು ವಾರ ಮುಂದೂಡಿಕೆ – ಡಿಕೆಶಿಯಿಂದ 3 ಡಿಸಿಎಂ ಬ್ರಹ್ಮಾಸ್ತ್ರ..!

ನವದೆಹಲಿ: ಸಂಪುಟ ವಿಸ್ತರಣೆ ಇನ್ನೂ ಒಂದು ವಾರ ಮುಂದೂಡಿಕೆ ಆಗಿದೆ. ಇವತ್ತು‌ ನಡೆಯಬೇಕಿದ್ದ ಪ್ರಮಾಣ ವಚನ ರದ್ದಾಗಿದೆ‌‌ ಶನಿವಾರ ಅಥವಾ ಭಾನುವಾರ ಸಚಿವರ ಲಿಸ್ಟ್ ಫೈನಲ್ ಆಗಲಿದ್ದು, ಮುಂದಿನ ಬುಧವಾರದೊಳಗೆ ಪ್ರಮಾಣ ವಚನ ಸಾಧ್ಯತೆ ಹೆಚ್ಚಿದೆ. ಈ ನಡುವೆ ಸಿಎಂ ಡಿಕೆ ಶಿವಕುಮಾರ್‌  ಅವರಿಂದಲೇ ಮೂರು ಡಿಸಿಎಂ ಬ್ರಹ್ಮಾಸ್ತ್ರ ಪ್ರಯೋಗವಾಗಿದ್ದು, ಕುತೂಹಲ ಹೆಚ್ಚಾಗಿದೆ. ಡಿಕೆಶಿ ಸಿಎಂ ಆಗಿ ಎರಡು ತಿಂಗಳು ಹತ್ತಿರ ಬಂತು. ಆದ್ರೆ ಸಂಪುಟ ವಿಸ್ತರಣೆಗೆ ಆಗಾಗ್ಗೆ ಅಡೆತಡೆ …

Read More »

ಶಾಖೋತ್ಪನ್ನ ಸ್ಥಾವರಗಳಲ್ಲಿ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ: ಕೆ.ಜೆ.ಜಾರ್ಜ್

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಜಲ ವಿದ್ಯುತ್ ಉತ್ಪಾದನೆ ಕುಂಠಿತವಾಗಿರುವ ಹಿನ್ನೆಲೆ ಶಾಖೋತ್ಪನ್ನ ಕೇಂದ್ರಗಳಲ್ಲಿ ವಿದ್ಯುತ್ ಉತ್ಪಾದನೆಯನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಜುಲೈ ತಿಂಗಳಲ್ಲಿ ಪ್ರತಿನಿತ್ಯ ಸರಾಸರಿ 84.34 ದಶಲಕ್ಷ ಯೂನಿಟ್ ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ ಎಂದು ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ.ಜಾರ್ಜ್  ತಿಳಿಸಿದ್ದಾರೆ. ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ರಾಜ್ಯದಲ್ಲಿ ಜಲ ವಿದ್ಯುತ್ ಮತ್ತು ಶಾಖೋತ್ಪನ್ನ ವಿದ್ಯುತ್ ಉತ್ಪಾದನಾ ಸ್ಥಾವರಗಳನ್ನು ನಿರ್ವಹಿಸುತ್ತಿದ್ದು, ಜಲಾಶಗಳಲ್ಲಿ ನೀರಿನ ಪ್ರಮಾಣ …

Read More »

ಮೋದಿ ಬಗ್ಗೆ ಮಾತಾಡೋ ಯೋಗ್ಯತೆ ಕಾಂಗ್ರೆಸ್‌ಗಿಲ್ಲ: ಆರ್.ಅಶೋಕ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾತಾಡೋ ಯೋಗ್ಯತೆ ಕಾಂಗ್ರೆಸ್  ಅವರಿಗೆ ಇಲ್ಲ ಅಂತ ವಿಪಕ್ಷ ನಾಯಕ ಆರ್.ಅಶೋಕ್  ಕಾಂಗ್ರೆಸ್ ನಾಯಕರ ವಿರುದ್ದ ಕಿಡಿಕಾರಿದರು. ದೆಹಲಿಯಲ್ಲಿ ಪ್ರಧಾನಿ ಮೋದಿ ನಿವಾಸದ ಮುಂದೆ ರಾಹುಲ್ ಗಾಂಧಿ ಪ್ರತಿಭಟನೆ ಮಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮೋದಿ ಬಗ್ಗೆ ಮಾತಾಡುವ ಯೋಗ್ಯತೆ ಕಾಂಗ್ರೆಸ್‌ಗೆ ಇಲ್ಲ. ಹುಬ್ಬಳ್ಳಿ-ಧಾರವಾಡ ಲಾಠಿ ಚಾರ್ಜ್ಗೆ ಉತ್ತರ ಕೊಡಿ. ಮೋದಿ ಮನೆ ಮುಂದೆ ಪ್ರತಿಭಟನೆ ಮಾಡಿರೋದು ಒಳ್ಳೆಯ ಸಂಪ್ರದಾಯ …

Read More »

ಕೈಕೊಟ್ಟ ಮುಂಗಾರು; ಹೊಲದಲ್ಲೇ ಒಣಗುತ್ತಿರುವ ಹೆಸರು ಬೆಳೆ ಕಂಡು ಕಂಗಾಲಾದ ರೈತರು

ಗದಗ: ಜಿಲ್ಲೆಯಲ್ಲಿ ಮುಂಗಾರು ಮಳೆ  ಕೈಕೊಟ್ಟ ಹೆಸರು ಸೇರಿದಂತೆ ಹಲವು ಬೆಳೆಗಳು ಹೊಲದಲ್ಲೇ ಒಣಗುತ್ತಿವೆ. ರೈತರು ತಾವು ಬೆಳೆದ ಬೆಳೆಯನ್ನ  ಕುಂಟೆ ಹೊಡೆದು ನಾಶ ಮಾಡುವ ಪರಿಸ್ಥಿತಿ ಎದುರಾಗಿದೆ. ಕಳೆದ ವರ್ಷ ಅತಿವೃಷ್ಟಿಯಿಂದ ಬೆಳೆ ಹಾಳಾಗಿದ್ದರೆ, ಈ ವರ್ಷ ಅನಾವೃಷ್ಟಿ ರೈತರನ್ನು ಕಂಗಾಲು ಮಾಡಿದೆ. ಹೆಸರು, ಈರುಳ್ಳಿ, ಮೆಣಸಿನಕಾಯಿ, ಹತ್ತಿ, ಮೆಕ್ಕೆಜೋಳ ಹಾಗೂ ಶೇಂಗಾ ಸೇರಿದಂತೆ ಹಲವು ಬೆಳೆಗಳು ತೇವಾಂಶದ ಕೊರತೆಯಿಂದ ನೆಲಕಚ್ಚಿವೆ. ಹೊಲದಲ್ಲಿ ಹಸಿರು ಕಾಣಬೇಕಾದ ಜಾಗದಲ್ಲಿ ಒಣಗಿದ …

Read More »

ಚೆನ್ನಮ್ಮ ಅವ್ರು ಕೊನೆಯ ದಿನಗಳಲ್ಲಿ ಪ್ರಜ್ವಲ್‌ ರೇವಣ್ಣರನ್ನ ನೋಡಬೇಕೆಂಬ ಆಸೆ ಇಟ್ಟುಕೊಂಡಿದ್ರು: ಕುಮಾರಸ್ವಾಮಿ

ಹಾಸನ: ಚೆನ್ನಮ್ಮ ಅವರು ಕೊನೆಯ ದಿನಗಳಲ್ಲಿ ಪ್ರಜ್ವಲ್‌ ರೇವಣ್ಣ ಅವರನ್ನ ನೋಡಬೇಕೆಂಬ ಆಸೆ ಇಟ್ಟುಕೊಂಡಿದ್ರು ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಭಾವುಕರಾದರು. ಹಾಸನ  ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ, ಹರದನಹಳ್ಳಿ ಗ್ರಾಮದಲ್ಲಿ ಮಾತನಾಡಿದ ಅವರು, ಹಲವು ಭಾವನಾತ್ಮಕ ವಿಚಾರಗಳನ್ನ ಹಂಚಿಕೊಂಡರು. ಚೆನ್ನಮ್ಮ ಅವರು ಬಹುಶಃ ಇನ್ನೂ 3-4 ವರ್ಷಗಳ ಕಾಲ ಬದುಕುತ್ತಿದ್ದರು, ಈ ದಿನ ನೋಡಲು ಸಾಧ್ಯವಾಗುತ್ತಿರಲಿಲ್ಲ. ಆದರೆ, ಇದು ಆ ದೇವರು ತೀರ್ಮಾನ ಮಾಡಿರೋದು ನಾವಲ್ಲ. ದೇವರ ತೀರ್ಮಾನಕ್ಕೆ …

Read More »

ಕಾಂಗ್ರೆಸ್‌ನಿಂದ ಗೂಂಡಾಗಿರಿ – ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ ಬಿಜೆಪಿ ನಿಯೋಗ

ಬೆಂಗಳೂರು: ಕಾಂಗ್ರೆಸ್  ಕಚೇರಿ ಎದುರು ತಮ್ಮ ಮೇಲೆ ನಡೆದ ಹಲ್ಲೆ ಖಂಡಿಸಿ ಬಿಜೆಪಿ  ನಾಯಕರು ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. ಹೈಗ್ರೌಂಡ್ಸ್ ಠಾಣೆಯಿಂದ ಪಾದಯಾತ್ರೆ ಮಾಡಿಕೊಂಡು ಕಮೀಷನರ್ ಕಚೇರಿಗೆ ಆಗಮಿಸಿದ ಬಿಜೆಪಿ ನಾಯಕರು ದೂರು ನೀಡಿದ್ದಾರೆ. ಕಾಂಗ್ರೆಸ್‌ನವರು ಗೂಂಡಾಗಿರಿ ಮಾಡುತ್ತಿದ್ದಾರೆ. ಕಾಂಗ್ರೆಸ್ ಎದುರು ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಕೈಬರಹದಲ್ಲಿಯೇ ದೂರು ನೀಡಿದ್ದಾರೆ. ಈ ವೇಳೆ ಆಯುಕ್ತರ ಕಚೇರಿ ಎದುರು ಧಿಕ್ಕಾರ ಘೋಷಣೆ ಕೂಗಿದ್ದಾರೆ. ಅಶ್ವಥ್ …

Read More »

ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬಿದ್ದ ಮರ – ಐದು ವರ್ಷದ ಬಾಲಕಿ ಸಾವು

ಮಂಗಳೂರು: ಚಲಿಸುತ್ತಿದ್ದ ಶಾಲಾ ವಾಹನದ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದು ಐದು ವರ್ಷದ ಬಾಲಕಿ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಾಯಗೊಂಡಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಚಿರನ್ವಿ (5) ಮೃತಪಟ್ಟ ಮಗು. ಬಂಟ್ವಾಳ ತಾಲೂಕಿನ ಬಿಳಿಯೂರಿನ ಚಂದ್ರಹಾಸ ಅವರ ಪುತ್ರಿ ಚಿರನ್ವಿ. ಕಲ್ಲಡ್ಕ ಶ್ರೀರಾಮ ಶಾಲೆಗೆ ಸೇರಿದ ಶಾಲಾ ವಾಹನದ ಮೇಲೆ ಮರ ಬಿದ್ದು ಈ ಅವಘಡ ಸಂಭವಿಸಿದೆ. ಬಂಟ್ವಾಳ ತಾಲೂಕಿನ ಕಲ್ಲೇಟಿ ಕಾನಲ್ತಾಯ ದೈವಸ್ಥಾನದ ಬಳಿ ದುರ್ಘಟನೆ …

Read More »

ಮಹದಾಯಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಹಿನ್ನಡೆ

ನವದೆಹಲಿ: ಮಹದಾಯಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಯೋಜನೆಗೆ ಅನುಮತಿಯ ನೀರಿಕ್ಷೆಯಲ್ಲಿದ್ದ ರಾಜ್ಯಕ್ಕೆ ಕೇಂದ್ರ ಸರ್ಕಾರ ಶಾಕ್‌ ನೀಡಿದೆ. ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ಇತ್ಯರ್ಥವಾಗುವವರೆಗೂ ಅನುಮತಿ ಇಲ್ಲ ಎಂದು ಕೇಂದ್ರ ಸ್ಪಷ್ಟಪಡಿಸಿದೆ. ಈ ಬಗ್ಗೆ ರಾಜ್ಯ ನೀರಾವರಿ ನಿಗಮಕ್ಕೆ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯ ಮಾಹಿತಿ ನೀಡಿದೆ. ಯೋಜನೆಯನ್ನು ಆಕ್ಷೇಪಿಸಿ ಕೇರಳದ ವನ್ಯಜೀವಿ ವಾರ್ಡನ್‌ ಕರ್ನಾಟಕ ಸರ್ಕಾರಕ್ಕೆ 2023ರ ಮಾರ್ಚ್‌ನಲ್ಲಿ ನೋಟಿಸ್‌ ನೀಡಿತ್ತು. ಈ ನೋಟಿಸ್‌ ಪ್ರಶ್ನಿಸಿ ಕರ್ನಾಟಕ …

Read More »