ರಾಮನಗರ: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಕುಟುಂಬದಲ್ಲಿ ನಡೆಯಬೇಕಿದ್ದ ಅದ್ಧೂರಿ ಮದುವೆಗೂ ಲಾಕ್ಡೌನ್ ಎಫೆಕ್ಟ್ ತಟ್ಟಿದೆ. ಇಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ವಿವಾಹ ಸರಳವಾಗಿ ನಡೆಯುತ್ತಿದೆ. ರಾಮನಗರ ತಾಲೂಕಿನ ಕೇತಗಾನಹಳ್ಳಿಯಲ್ಲಿನ ಎಚ್ಡಿಕೆ ಫಾರ್ಮ್ಹೌಸ್ನಲ್ಲಿ ವಿವಾಹ ನಡೆಯುತ್ತಿದ್ದು, ಪೂರ್ವ ನಿಗದಿಯಾಗಿದ್ದ ದಿನಾಂಕದಂದೇ ಮದುವೆ ನಡೆಯುತ್ತಿದೆ. ಎರಡು ಕುಟುಂಬದವರು ಹಾಗೂ ಕೆಲವು ಆಪ್ತರ ಸಮ್ಮುಖದಲ್ಲಿ ವಿವಾಹ ನಡೆಯಲಿದ್ದು, ನಿಖಿಲ್ ಮತ್ತು ರೇವತಿ ವಿವಾಹ ಬೆಳಗ್ಗೆ 9.30ರಿಂದ …
Read More »ಸಮಾಜ ಕಲ್ಯಾಣ ಇಲಾಖೆಯ 44 ವಸತಿ ನಿಲಯ ಹಾಗೂ 54 ಮುರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ಒಟ್ಟು 98 ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ 784 ಜನರನ್ನು ಕ್ವಾರಂಟೈನ್ನಲ್ಲಿಡಲಾಗಿದೆ
ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯು ಅನೇಕ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುತ್ತಿದ್ದು, ಸಮಾಜ ಕಲ್ಯಾಣ ಇಲಾಖೆಯ 44 ವಸತಿ ನಿಲಯ ಹಾಗೂ 54 ಮುರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ಒಟ್ಟು 98 ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ 784 ಜನರನ್ನು ಕ್ವಾರಂಟೈನ್ನಲ್ಲಿಡಲಾಗಿದೆ ಎಂದು ಶ್ರೀ ಗೋವಿಂದ ಎಂ ಕಾರಜೋಳ ಅವರು ತಿಳಿಸಿದರು. ಬೆಂಗಳೂರಿನ ಎಂ ಜಿ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಆಶ್ರಯದಲ್ಲಿರುವವರನ್ನು …
Read More »ಬದಾಮಿ:ಪೊಲೀಸ್ ರ ಮೇಲೆ ಹಲ್ಲೆ ಮಾಡಿದ 5ಜನರ್ ಮೇಲೆ F.I.R.
ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆ ರಾಜ್ಯಾದ್ಯಂತ ಲಾಕ್ ಡೌನ್ ಹೇರಲಾಗಿದ್ದು ಅನಾವಶ್ಯಕವಾಗಿ ಓಡಾಡುವರನ್ನ ತಡೆಯಲು ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಆದರೆ ಕರ್ತವ್ಯ ನಿರತರಾದ ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಮುತ್ತಲಗೇರಿ ಗ್ರಾಮದಲ್ಲಿ ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆಗೆ ಯತ್ನ ನಡೆಸಲಾಗಿದೆ. . ಲಾಕ್ ಡೌನ್ ಉಲ್ಲಂಘಿಸಿ ಗ್ರಾಮದಲ್ಲಿ ಬೇಕಾಬಿಟ್ಟಿ ಒಡಾಡುತ್ತಿದ ಜನರಿಗೆ ತಿಳಿ ಹೇಳಿದ ಪೊಲೀಸರ ಜೊತೆ ಗ್ರಾಮಸ್ಥರು …
Read More »ತುಮಕೂರು:ಅಗತ್ಯ ವಿಲ್ಲದೆ ಆಚೆ ಬಂದರೆ ಲಾಠಿ ಚಾರ್ಜ್…..
ತುಮಕೂರು : ಕೇಂದ್ರ ಸರ್ಕಾರವು ಲಾಕ್ ಡೌನ್ ಆದೇಶವನ್ನು ಮೇ 3ರ ರವರೆಗೆ ಮುಂದೂಡಲಾಗಿದೆ, ಹಾಗೆ ರಾಜ್ಯದ ಬಹುತೇಕ ನಗರಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗುತ್ತಿದೆ. ಆದ್ದರಿಂದ ಸಾರ್ವಜನಿಕರು ಮನೆಯಿಂದ ಹೊರಗೆ ಬರದಂತೆ ಅರಿವನ್ನು ಮೂಡಿಸಲು ತುಮಕೂರಿನಲ್ಲಿ ವಿಶೇಷ ತರಬೇತಿ ಪಡೆದ ಡಿಎಆರ್ ಪೊಲೀಸರು ಕರೋನವೈರಸ್ ತಡೆಗಟ್ಟಲು ಯೋಧರಂತೆ ಕೆಲಸ ಮಾಡುತ್ತಿರುವ ಪೊಲೀಸರು, ವೈದ್ಯರು, ಪೌರ ಕಾರ್ಮಿಕರು , ವಿಶೇಷ ತರಬೇತಿ ಪಡೆದ (ಡಿ.ಎ.ಆರ್) ಪೊಲೀಸರು ಓಡಾಡುವವರಿಗೆ ಲಾಠಿ ಏಟು ಖಂಡಿತ… …
Read More »ಚಿಕ್ಕೋಡಿ -ಸದಲಗಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಾಮಗಳಲ್ಲಿ ಮಾಜಿ ಸಚಿವ, ಮಾಜಿ ಸಂಸದ ಪ್ರಕಾಶ ಹುಕ್ಕೇರಿ, ಪರಿಶೀಲನೆ
ಚಿಕ್ಕೋಡಿ – ಚಿಕ್ಕೋಡಿ -ಸದಲಗಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಾಮಗಳಲ್ಲಿ ಮಾಜಿ ಸಚಿವ, ಮಾಜಿ ಸಂಸದ ಪ್ರಕಾಶ ಹುಕ್ಕೇರಿ, ಲಾಕ್ ಡೌನ್ ನಿರ್ವಹಣೆ ಹಾಗೂ ಕೋವಿಡ್ 19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು. ಚಿಕ್ಕಲವಾಳ, ರಾಮಪುರ, ಪಾಂಗೇರಿ ಮೊದಲಾದ ಗ್ರಾಮಗಳಿಗೆ ತೆರಳಿದ ಪ್ರಕಾಶ ಹುಕ್ಕೇರಿ ಅಲ್ಲಿನ ಪರಿಸ್ಥಿತಿಯ ಅವಲೋಕನ ನಡೆಸಿದರು. ಈ ವೇಳೆ ಗ್ರಾಮಸ್ಥರ ಸಭೆ ನಡೆಸಿದ ಅವರು, ಮಹಾಮಾರಿ ಕೊರೋನಾ …
Read More »ಆಸ್ಪತ್ರೆಯಲ್ಲಿ ಶವಗಳ ರಾಶಿ, ವಿಧಿಯಾಟ ಇದೇ ಅಲ್ಲವೇ..? ವಿಶ್ವದ ದೊಡ್ಡಣ್ಣನಿಗೆ ಕೊರೊನಾ ವಕ್ಕಿರಿಸಿ ತಲೆತಿರುಗಿಸಿದೆ
ನ್ಯೂಯಾರ್ಕ್,- ಸಾವು ಹೇಗೆ ಬರುತ್ತದೋ ಗೊತ್ತಾಗದೇ ಇಲ್ಲ. ಆದರೆ ಶವ ಸಂಸ್ಕಾರ ಮಾಡಲು ಆಗದಂತಹ ದಿನಗಳೂ ಬರುತ್ತದೆ ಎಂಬುದನ್ನು ಕೊರೊನಾ ತೋರಿಸುತ್ತಿದೆ. ಶ್ರೀಮಂತ-ಬಡವ ಎಂಬುದಿಲ್ಲ ಎಂಬುದಕ್ಕೆ ಉದಾಹರಣೆ ನ್ಯೂಯಾರ್ಕ್ನಲ್ಲಿ ವರದಿಯಾಗಿದೆ. ವಿಶ್ವದ ಶ್ರೀಮಂತ, ಶಕ್ತಿಯುತ ರಾಷ್ಟ್ರವಾಗಿರುವ ಅಮೆರಿಕ ಕೊರೊನಾ ಹೊಡೆತಕ್ಕೆ ತತ್ತರಿಸಿದೆ. ದಿನೇ ದಿನೇ ಸಾವಿನ ಸಂಖ್ಯೆ ಏರುತ್ತಿದೆ. ಸೋಂಕಿತರು ಲಕ್ಷಗಟ್ಟಲೇ ಏರುತ್ತಿದ್ದಾರೆ. ಉತ್ತಮ ಆರೋಗ್ಯ ಸೇವೆನಗರ ನ್ಯೂಜರ್ಸಿ ರಾಜ್ಯದ ಸಣ್ಣನಗರ ಸೂಸೆಕ್ಸ್ ಎಂಬಲ್ಲಿ ಆಸ್ಪತ್ರೆಯೇ ಶವಾಗಾರವಾಗಿದೆ…! ಇದನ್ನು ಊಹಿಸಿದರೆ …
Read More »ರಂಜಾನ್ ಆಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ವಕ್ಫ್ ಮಂಡಳಿ
ಬೆಂಗಳೂರು : ರಂಜಾನ್ ತಿಂಗಳ ಈ ಸಂದರ್ಭದಲ್ಲಿ ಕೊರೊನಾ ಸೋಂಕು ಹರಡುವ ಭೀತಿಯಿಂದಾಗಿ, ರಾಜ್ಯ ಅಲ್ಪಸಂಖ್ಯಾತ ಮತ್ತು ವಕ್ಫ್ ಮಂಡಳಿ ಹೊಸ ಮಾರ್ಗ ಸೂಚಿಯನ್ನು ಬಿಡುಗಡೆ ಮಾಡಿದೆ. ಈ 6 ಮಾರ್ಗ ಸೂಚಿಯನ್ನು ಕಡ್ಡಾಯವಾಗಿ ರಂಜಾನ್ ದಿನವಾದ ಏಪ್ರಿಲ್ 24ರಿಂದ 25, 2020ರ ವರಗೆ ಎಲ್ಲಾ ಮುಸ್ಲೀಂ ಬಾಂಧವರು ಪಾಲಿಸುವಂತೆ ಸೂಚಿಸಿದೆ. ಅಲ್ಲದೇ ಈ ಮಾರ್ಗ ಸೂಚಿಯ ಅನುಸಾರವೇ ನಡೆದುಕೊಳ್ಳುವಂತೆ ತಿಳಿಸಿದೆ. ಈ ಕುರಿತಂತೆ ಮಾರ್ಗ ಸೂಚಿ ಬಿಡುಗಡೆ ಮಾಡಿರುವ …
Read More »ಎಸ್.ಎಸ್.ಎಲ್.ಸಿ ವೇಳಾಪಟ್ಟಿ ಪ್ರಕಟಿಸಿಲ್ಲ : ಸಚಿವ ಸುರೇಶ್ಕುಮಾರ್ ಸ್ಪಷ್ಟನೆ
ಬೆಂಗಳೂರು : ಶಿಕ್ಷಣ ಇಲಾಖೆ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಿಲ್ಲ ಈ ಕುರಿತ ವರದಿಗಳು ಸುಳ್ಳು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಎಸ್.ಸುರೇಶ್ಕುಮಾರ್ ಹೇಳಿದ್ದಾರೆ. ಈ ಕುರಿತು ಫೇಸ್ಬುಕ್ ಲೈವ್ನಲ್ಲಿ ಸ್ಪಷ್ಟಪಡಿಸಿದ ಸಚಿವರು, ಎಸ್.ಎಸ್.ಎಲ್.ಸಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂಬ ವದಂತಿಗಳ ಸತ್ಯಕ್ಕೆ ದೂರವಾದದ್ದು. ಈ ಸಂಬಂಧ ಇದುವರೆಗೆ ಶಿಕ್ಷಣ ಇಲಾಖೆ ಇದುವರೆಗೆ ಯಾವುದೇ ಪ್ರಕಟಣೆಗಳನ್ನು ಹೊರಡಿಸಿಲ್ಲ. ಈ ಬಗ್ಗೆ ವಿದ್ಯಾರ್ಥಿಗಳು, ಪೋಷಕರು ಗೊಂದಲಕ್ಕೆ ಒಳಗಾಗುವುದು …
Read More »ರಾಜ್ಯದ ರೈತರೇ ಗಮನಿಸಿ : ಸ್ವಯಂಪ್ರೇರಿತರಾಗಿ ಬೆಳೆನಾಶಪಡಿಸಿಕೊಂಡರೆ ಸಿಗಲ್ಲ ಪರಿಹಾರ..!
ದಾವಣಗೆರೆ,: ಯಾವುದೇ ರೈತರು ಆತುರದ ಬುದ್ಧಿಗೆ ಬೆಲೆಕೊಟ್ಟು ತಮ್ಮ ಬೆಳೆಗಳನ್ನು ನಾಶ ಪಡಿಸಿಕೊಳ್ಳಬಾರದು. ಕೊರೊನಾ ಲಾಕ್ಡೌನ್ ಅನಿರೀಕ್ಷಿತವಾಗಿದ್ದು, ಯಾರೂ ಸಹ ಇದನ್ನು ನಿರೀಕ್ಷಿಸಿರಲಿಲ್ಲ.ಲಾಕ್ಡೌನ್ ಮುಗಿದ ಮೇಲೆ ರೈತರ ಫಸಲುಗಳಿಗೆ ಒಳ್ಳೆಯ ಬೆಲೆ ಬಂದೇ ಬರುತ್ತದೆ. ಆತುರಕ್ಕೆ ಸ್ವಯಂಪ್ರೇರಿತರಾಗಿ ಬೆಳೆ ನಾಶ ಪಡಿಸಿಕೊಂಡರೆ ಪರಿಹಾರ ಸಾಧ್ಯವಿಲ್ಲ.ಪ್ರಾಕೃತಿಕ ನಷ್ಟಕ್ಕೆ ಮಾತ್ರ ಪರಿಹಾರ ಒದಗಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಲಾಕ್ಡೌನ್ ಹಿನ್ನಲೆಯಲ್ಲಿ ರೈತರ ಪರಿಸ್ಥಿತಿ,ಕೃಷಿ ಚಟುವಟಿಕೆ ಕುರಿತು ಜಿಲ್ಲೆಯ ಕೃಷಿ,ತೋಟಗಾರಿಕೆ ಅಧಿಕಾರಿಗಳು,ಜನಪ್ರತಿನಿಧಿಗಳ …
Read More »ಮುಂದಿನ 30 ವರ್ಷಗಳ ನೀರಾವರಿ ಯೋಜನೆಗಳ ಅನುಷ್ಠಾನಕ್ಕಾಗಿ ನೀರಾವರಿ ಆಯೋಗ ಸ್ಥಾಪನೆ
ಬೆಂಗಳೂರು : ಮುಂದಿನ 30 ವರ್ಷಗಳ ನೀರಾವರಿ ಯೋಜನೆಗಳ ಅನುಷ್ಠಾನದ ಉದ್ದೇಶದಿಂದ ಕರ್ನಾಟಕ ರಾಜ್ಯ ನೀರಾವರಿ ಆಯೋಗ ಸ್ಥಾಪನೆ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡುವುದಾಗಿ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ನಿವೃತ್ತ ಕಾರ್ಯದರ್ಶಿ ಕ್ಯಾ ರಾಜಾರಾವ್ ಅವರೊಂದಿಗೆ ಕರ್ನಾಟಕ ರಾಜ್ಯದ ನೀರಾವರಿ ಯೋಜನೆಗಳ ಕುರಿತು ಚರ್ಚಿಸಿದ ನಂತರ ಮಾತನಾಡಿದ ಸಚಿವರು, ಕುಡಿಯುವ ನೀರು, ಅಂತರ್ಜಲ ಮತ್ತು ಔದ್ಯೋಗಿಕ ಕ್ಷೇತ್ರದಲ್ಲಿ ನೀರಿನ ಬಳಕೆ ಕುರಿತಂತೆ ದೂರದೃಷ್ಟಿಯ ನೀಲನಕ್ಷೆ …
Read More »
Laxmi News 24×7