ನವದೆಹಲಿ/ಮುಂಬೈ, ಮೇ 17-ವಿನಾಶಕಾರಿ ಕೊರೊನಾ ಆಕ್ರಮಣದ ತೀವ್ರತೆ ದೇಶದಲ್ಲಿ ಆಘಾತಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿದೆ. ಹೆಮ್ಮಾರಿ ನಿಗ್ರಹಕ್ಕಾಗಿ ಜಾರಿಯಲ್ಲಿರುವ ಮೂರನೇ ಹಂತದ ಲಾಕ್ಡೌನ್ ಅವಧಿ ಇಂದು ಮಧ್ಯರಾತ್ರಿ ಪೂರ್ಣಗೊಳ್ಳಲಿದ್ದು, ನಾಳೆಯಿಂದ ಹೊಸ ಸ್ವರೂಪದಲ್ಲಿ ವಿಸ್ತರಣೆಯಾಗಲಿದೆ. ದೀರ್ಘಾವಧಿ ಲಾಕ್ಡೌನ್ ಮತ್ತು ಕಠಿಣ ನಿರ್ಬಂಧಗಳ ಅವಧಿಯಲ್ಲಿ ನಿಯಂತ್ರಣಕ್ಕೆ ಬರದಿರುವ ವೈರಸ್ ಅನ್ಲಾಕ್ ವೇಳೆ ತನ್ನ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸುವ ಆತಂಕವೂ ಇದೆ. ಕಿಲ್ಲರ್ ವೈರಸ್ ಆರ್ಭಟ ಲಾಕ್ಡೌನ್ ಸಡಿಲಿಕೆ ನಂತರ ದಿನೇ ದಿನೇ ವ್ಯಾಪಕವಾಗುತ್ತಿರುವುದು …
Read More »ಮುಂಗಾರು ಹಂಗಾಮಿಗೆ ರೈತರಿಗೆ ಬೇಕಾಗುವ ಬೀಜ ರಸಗೊಬ್ಬರವನ್ನು ಸಚಿವರಿಂದ ವಿತರಣೆ
ಗೋಕಾಕ :ಪ್ರಸಕ್ತ ಮುಂಗಾರು ಹಂಗಾಮಿಗೆ ಕೃಷಿಗೆ ಸಂಭಂದಪಟ್ಟ ಬೀಜ ಗೊಬ್ಬರ ಸೇರಿದಂತೆ ಎಲ್ಲ ರೀತಿಯ ಸೌಲಭ್ಯಗಳನ್ನು ಕೃಷಿ ಇಲಾಖೆಯಿಂದ ಕಲ್ಪಿಸಲಾಗಿದ್ದು ರೈತರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ನಗರದ ಸಚಿವರ ಕಾರ್ಯಾಲಯದ ಆವರಣದಲ್ಲಿ ಕೃಷಿ ಇಲಾಖೆಯಿಂದ ನೀಡಲಾದ ಬೀಜಗಳನ್ನು ರೈತರಿಗೆ ವಿತರಿಸಿ ಮಾತನಾಡುತ್ತಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪನವರು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿ ಹಲವಾರು ಯೋಜನೆಗಳನ್ನು ಜನರಿಗೆ ತರುವದರೊಂದಿಗೆ ರೈತರ ಹಿತ …
Read More »ದಲಿತ ಯುವಕನ ಕೊಲೆ ಖಂಡಿಸಿ ಸಚಿವ ರಮೇಶ ಜಾರಕಿಹೊಳಿಯವರಿಗೆ ಮನವಿ
ಗೋಕಾಕ : ಗೋಕಾಕ ನಗರದಲ್ಲಿ 06/05/2020 ರಂದು ದಲಿತ ಯುವಕ ಸಿದ್ದು ಕನಮಡ್ಡಿ ಯವರನ್ನು ಮಾರಕಾಸ್ತ್ರ ದಿಂದ ಕೊಲೆ ಮಾಡಿ ಕೊಲೆಗಾರರು ಪರಾರಿಯಾಗಿದ್ದರು. ಕೊಲೆಯಾದ ವ್ಯಕ್ತಿಯು ಸಾಯುವಾಗ ಅವನಿಗೆ ಜೀವ ಬೆದರಿಕೆ ಹಾಕಿರೋ ವ್ಯಕ್ತಿಗಳ ಹೆಸರು ಹೇಳಿ ಸಾವನ್ನಪಿದನ್ನು ಅದರಿಂದ ಕೊಲೆಗಾರನ್ನು ಬಂಧಿಸಿ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಇಲ್ಲದಿದ್ದರೆ ದಲಿತ ಸಂಘಟನೆಗಳು ಮುಂದಿನ ದಿನಮಾನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಹೇಳಿದರು ಮತ್ತು ಹಲವು ಬೇಡಿಕೆಗಳನ್ನು ರಾಜ್ಯ …
Read More »20.97 ಲಕ್ಷ ಕೋಟಿ ರೂ. ಪ್ಯಾಕೇಜ್ ಲೆಕ್ಕ ಕೊಟ್ಟ ಸೀತಾರಾಮನ್
ನವದೆಹಲಿ: ಕೊರೊನಾ ಪರಿಹಾರ ಪ್ಯಾಕೇಜ್ನ ಐದನೇ ಮತ್ತು ಕೊನೆಯ ಹಂತದ ಘೋಷಣೆಯನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ವಿವರಿಸಿದ್ದಾರೆ. ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ 20 ಲಕ್ಷ ಕೋಟಿ ರೂ. ಪ್ಯಾಕೇಜ್ನಲ್ಲಿ ಯಾವ ಕ್ಷೇತ್ರಕ್ಕೆ ಎಷ್ಟು ಹಣ ನೀಡಲಾಗಿದೆ ಎಂದು ವಿವರಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಇಂದು ನರೇಗಾ, ಆರೋಗ್ಯ, ಶಿಕ್ಷಣ, ವ್ಯವಹಾರ, ಕಂಪನಿಗಳ ಕಾಯ್ದೆಗಳಿಗೆ ಸಂಬಂಧಿಸಿದ ಕೆಲವು ಮಾಹಿತಿ ಪ್ರಕಟಿಸಿದರು. ನರೇಗಾ ಯೋಜನೆಗೆ ಹೆಚ್ಚುವರಿಯಾಗಿ …
Read More »ಮಂಡ್ಯ, ಕಲಬುರಗಿಯಲ್ಲಿ ಕೊರೊನಾ ಆರ್ಭಟ-
ಬೆಂಗಳೂರು: ಮಂಡ್ಯದ ಜೊತೆ ಜೊತೆಗೆ ಹಾಸನಕ್ಕೂ ಮುಂಬೈ ಕಂಟಕ ಹೆಚ್ಚಾಗುತ್ತಲೇ ಇದೆ. ಪರಿಣಾಮ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಸಿಗದೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲಿದೆ. ಇಂದು ಒಂದೇ ದಿನ 54 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1,146ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಧ್ಯಾಹ್ನ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ, ಮಂಡ್ಯ 22, ಕಲಬುರಗಿ 10, ಹಾಸನ 6, ಧಾರವಾಡ 4, ಕೋಲಾರ, ಯಾದಗಿರಿದಲ್ಲಿ ತಲಾ …
Read More »ಆರ್ಥಿಕ ಸಂಕಷ್ಟ – ತಿರುಪತಿ ದೇವಾಲಯದ 500 ಕೋಟಿ ಸ್ಥಿರಾಸ್ತಿ ಮಾರಾಟ?
ಹೈದರಾಬಾದ್: ಕೋವಿಡ್ 19 ಲಾಕ್ಡೌನ್ ನಿಂದ ಸೃಷ್ಟಿಯಾಗಿರುವ ಹಣಕಾಸು ಸಮಸ್ಯೆಯನ್ನು ಪರಿಹಾರ ಮಾಡಲು ತನ್ನ ಕೆಲ ಸ್ಥಿರಾಸ್ತಿಗಳನ್ನು ಮಾರಾಟ ಮಾಡಲು ತಿರುಪತಿ ತಿರುಮಲ ದೇಗುಲ (ಟಿಟಿಡಿ)ದ ಆಡಳಿತ ಮಂಡಳಿ ಚಿಂತನೆ ನಡೆಸಿದೆ. ಹೌದು. ಮಾರ್ಚ್ ಮೂರನೇ ವಾರದಲ್ಲಿ ತಿರುಪತಿ ದೇಗುಲದ ಬಾಗಿಲು ಮುಚ್ಚಿದ್ದು, ಜೂನ್ ತಿಂಗಳಿನಲ್ಲಿ ಬಾಗಿಲು ತೆರೆಯಲು ತೆರೆಯಲು ಅನುಮತಿ ಸಿಗುತ್ತದೆಯೋ ಇಲ್ಲವೋ ಎನ್ನುವುದು ಸ್ಪಷ್ಟವಾಗಿಲ್ಲ. ಒಂದು ವೇಳೆ ಜೂನ್ ತಿಂಗಳಿನಲ್ಲೂ ದೇವಾಲಯದ ಬಾಗಿಲು ತೆರೆಯದಿದ್ದರೆ ಭಕ್ತರು ದೇಣಿಗೆ …
Read More »ಹುಬ್ಬಳ್ಳಿ:ಕೋವಿಡ್-19 ಸೋಂಕಿನಿಂದ ಗುಣಮುಖರಾದ ರೋಗಿಗಳು ರಕ್ತ ನೀಡಲು ಒಪ್ಪುತ್ತಿಲ್ಲ.
ಹುಬ್ಬಳ್ಳಿ: ರಾಜ್ಯದಲ್ಲಿ ಪ್ಲಾಸ್ಮಾ ಥೆರಪಿಗೆ ಹುಬ್ಬಳ್ಳಿಯ ವೈದ್ಯಕೀಯ ಶಿಕ್ಷಣ ಸಂಸ್ಥೆಗೆ ಐಸಿಎಂಆರ್ ನಿಂದ ಅನುಮತಿ ನೀಡಲಾಗಿದ್ದು, ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ಕಿಮ್ಸ್ ವೈದ್ಯರು ಸಿದ್ಧತೆ ಮಾಡಿಕೊಂಡಿದ್ದಾರೆ. ಆದರೆ ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ರಕ್ತವೇ ಸಿಗುತ್ತಿಲ್ಲ. ಕೋವಿಡ್-19 ಸೋಂಕಿನಿಂದ ಗುಣಮುಖರಾದ ರೋಗಿಗಳು ರಕ್ತ ನೀಡಲು ಒಪ್ಪುತ್ತಿಲ್ಲ. ಮೊದಲು ರಕ್ತ ನೀಡಲು ಒಪ್ಪಿಕೊಂಡಿದ್ದ ಕೊರೊನಾ ಸೋಂಕಿನಿಂದ ಗುಣಮುಖರಾದವರು ಈಗ ರಕ್ತ ನೀಡಲು ಸಾಧ್ಯವಿಲ್ಲ ಎನ್ನುತ್ತಿದ್ದಾರೆ. ಹೊರ ಜಿಲ್ಲೆಯಲ್ಲಿ ಸೋಂಕಿನಿಂದ ಗುಣಮುಖರಾದವರ ರಕ್ತಕ್ಕಾಗಿ ಕಿಮ್ಸ್ …
Read More »ಹಮ್ ಮೋದಿ ಕೊ ಮಾರೆಂಗೇ’ – ಕೊರೊನಾ ಗೆದ್ದು ಬಂದ 6ರ ಪೋರ ಮಾತು……
ನವದೆಹಲಿ: ‘ಹಮ್ ಮೋದಿ ಕೊ ಮಾರೆಂಗೇ’ ಎಂದು ಆರು ವರ್ಷದ ಪುಟ್ಟ ಪೋರನೊಬ್ಬ ಕೂಗಿ ಹೇಳಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೊರೊನಾದಿಂದ ಗುಣಮುಖರಾದ ಕುಟುಂಬವೊಂದು ಕೊರೊನಾ ಗೆದ್ದು ಬಂದಿದ್ದೇವೆ ಎಂದು ಕ್ಯಾಮೆರಾಗೆ ಪೋಸ್ ನೀಡುತ್ತಿತ್ತು. ಈ ವೇಳೆ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಿದ ವೈದ್ಯರು ಕೊರೊನಾ ವಾರಿಯರ್ಸ್ ಎಲ್ಲ ನಿಂತುಕೊಂಡು ಸಂಭ್ರಮಾಚರಣೆ ಮಾಡುತ್ತಿರುತ್ತಾರೆ. ಈ ವೇಳೆ ಅಲ್ಲಿ ನಿಂತಿದ್ದ ಪುಟ್ಟಪೋರನೊಬ್ಬ ನಾವು ಮೋದಿಯನ್ನು ಕೊಲ್ಲುತ್ತೇವೆ ಎಂದು ಘೋಷಣೆ …
Read More »ನಾಳೆಯಿಂದ ಬಸ್ ಸಂಚಾರ ಸಾಧ್ಯತೆ – ಏನು ಸೇವೆ ಇರಬಹುದು?
ಬೆಂಗಳೂರು: ಇವತ್ತಿಗೆ ಲಾಕ್ಡೌನ್ 3.0 ಅಂತ್ಯಗೊಳ್ಳಲಿದ್ದು, ನಾಳೆಯಿಂದ ಹೊಸ ಸ್ವರೂಪದಲ್ಲಿ, ಹೊಸ ಆಯಾಮದಲ್ಲಿ ಲಾಕ್ಡೌನ್ ಜಾರಿಯಾಗಲಿದೆ. ಈಗಾಗಲೇ ಲಾಕ್ಡೌನ್ 4.0 ಹೇಗಿರುತ್ತೆ ಅನ್ನೋ ಕುತೂಹಲ ದೇಶದೆಲ್ಲೆಡೆ ಮನೆಮಾಡಿದೆ. ಅಲ್ಲದೇ ರಾಜಧಾನಿ ಬೆಂಗಳೂರಿಗೆ ಬಿಗ್ ರಿಲೀಫ್ ಸಿಗುತ್ತಾ ಅಂತ ಜನ ಕಾಯುತ್ತಿದ್ದಾರೆ. ಲಾಕ್ಡೌನ್ ಟಫ್ ಇದ್ದಷ್ಟು ದಿನ ಸೋಂಕಿತರ ಸಂಖ್ಯೆ ಕಡಿಮೆಯಿತ್ತು. ಆದರೆ ಲಾಕ್ಡೌನ್ ಸಡಿಲಿಕೆಯಾದ ನಂತರ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಿರೋವಾಗ 3ನೇ ಲಾಕ್ಡೌನ್ ಮುಗೀತಾ ಬಂದಿದೆ. ಇದರ ನಡುವೆ …
Read More »ನಾಳೆಯಿಂದ ಹೊಸ ಲಾಕ್ಡೌನ್ – ಪ್ಲ್ಯಾನ್ ಹೇಗಿರಬಹುದು? …..
ನವದೆಹಲಿ: ಕೋವಿಡ್ 19 ಲಾಕ್ಡೌನ್ 3.0 ಇಂದು ಅಂತ್ಯವಾಗಲಿದ್ದು, ಸೋಮವಾರದಿಂದ ಹೊಸ ಲಾಕ್ಡೌನ್ 4.0 ಜಾರಿಯಾಗುತ್ತಿದೆ. ಎಲ್ಲ ರಾಜ್ಯಗಳ ಅಭಿಪ್ರಾಯ ಸಂಗ್ರಹಿಸಿರುವ ಕೇಂದ್ರ ಇಂದು ಹೊಸ ಮಾರ್ಗಸೂಚಿ ಪ್ರಕಟ ಮಾಡಲಿದೆ. ಹೊಸ ಲಾಕ್ಡೌನ್ ಹೊಸ ರೀತಿಯಲ್ಲಿ ಇರಲಿದೆ ಅಂತ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಸುಳಿವು ನೀಡಿದ್ದು, ಕೇಂದ್ರ ಸರ್ಕಾರದ ಲೆಕ್ಕಾಚಾರ ಹೇಗಿರಲಿದೆ ಎನ್ನುವುದೇ ಕುತೂಹಲ. ಯಾಕಂದ್ರೆ, ಈಗಾಗಲೇ 3 ಲಾಕ್ಡೌನ್ಗಳಲ್ಲೂ ಬೇಕಾಬಿಟ್ಟಿ ಓಡಾಡ್ತಿದ್ದಾರೆ. ಜೊತೆಗೆ, ಲಾಕ್ಡೌನ್ 3ರಲ್ಲಿ ಮತ್ತಷ್ಟು …
Read More »
Laxmi News 24×7