ಮಂಗಳೂರು: ನೋಡ ನೋಡುತ್ತಿದ್ದಂತೆಯೇ ನಡು ರಸ್ತೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟವಾದ ಘಟನೆ ಮಂಗಳೂರಿನ ಜೆಪ್ಪು ಮಾರುಕಟ್ಟೆ ಬಳಿ ನಡೆದಿದೆ. ಮಾರ್ಕೆಟ್ ನ ಗ್ಯಾಸ್ ಸಿಲಿಂಡರ್ ಏಜೆನ್ಸಿ ಅಂಗಡಿಯಲ್ಲಿ ಲೀಕ್ ಆಗಿದ್ದ ಗ್ಯಾಸ್ ಸಿಲಿಂಡರನ್ನು ಸ್ಥಳೀಯರು ಅಂಗಡಿಯಿಂದ ಹೊರಗೆ ತಂದಿದ್ದರು. ಅಷ್ಟರಲ್ಲೇ ಸಿಲಿಂಡರ್ ಗೆ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ಕ್ಷಣದಲ್ಲಿ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಸಿಲಿಂಡರ್ 50 ಮೀಟರ್ ಎತ್ತರಕ್ಕೆ ಚಿಮ್ಮಿದೆ. ಅದೃಷ್ಟವಶಾತ್ ಯಾರಿಗೂ ಗಾಯ ಸಂಭವಿಸಿಲ್ಲ. ಸಿಲಿಂಡರ್ ನಲ್ಲಿ ಬೆಂಕಿಯಿದ್ದರೂ …
Read More »ಕೊರೊನಾ ತೊಲಗಿಸಲು ಅರ್ಚಕನೋರ್ವ ನರ ಬಲಿ ನೀಡಿರುವ ಆಘಾತಕಾರಿ ಘಟನೆ ನಡೆದಿದೆ.
ಭುವನೇಶ್ವರ: ಕೊರೊನಾ ತೊಲಗಿಸಲು ಅರ್ಚಕನೋರ್ವ ನರ ಬಲಿ ನೀಡಿರುವ ಆಘಾತಕಾರಿ ಘಟನೆ ನಡೆದಿದೆ. ಒಡಿಶಾದ ಕಟಕ್ ಜಿಲ್ಲೆಯ ನರಸಿಂಗ್ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಧಾಹೂಡಾದ ಬಳಿಯ ಬಂಧಾ ಮಾ ಬುಧ ಬ್ರಾಹ್ಮಿಣಿ ದಿ ದೇವಸ್ಥಾನದ ಹಿರಿಯ ಅರ್ಚಕ ಸನ್ಸಾರಿ ಓಝಾ(72) ಈ ಕೃತ್ಯ ಎಸಗಿದ್ದಾನೆ. ಬುಧವಾರ ರಾತ್ರಿ ಘಟನೆ ನಡೆದಿದ್ದು, ಕೊರೊನಾ ವೈರಸ್ ತೊಲಗಿಸುವಂತೆ ಮನುಷ್ಯನನ್ನು ಬಲಿ ಕೊಟ್ಟಿದ್ದಾನೆ. ಸ್ಥಳೀಯ ವ್ಯಕ್ತಿಯ ರುಂಡವನ್ನೇ ಕತ್ತರಸಿ, ಪೂಜೆ ಸಲ್ಲಿಸಿದ್ದಾನೆ. ಕೃತ್ಯ ಎಸಗುತ್ತಿದ್ದಂತೆ …
Read More »ಲಕ್ಷ ದ್ವೀಪದಿಂದ ಹಡಗಿನಲ್ಲಿ ಬಂದ ಮಂಗ್ಳೂರು ಕಾರ್ಮಿಕರು………..
ಮಂಗಳೂರು: ಕಡಲಾಚೆಯಲ್ಲಿ ಅತಂತ್ರರಾಗಿದ್ದ ಕಾರ್ಮಿಕರನ್ನ ರಕ್ಷಿಸುವಲ್ಲಿ ಇಂಡಿಯನ್ ಕೋಸ್ಟ್ ಗಾರ್ಡ್ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಲಕ್ಷ ದ್ವೀಪದಲ್ಲಿ ಸಿಲುಕಿದ್ದ ಮೂರು ಮಹಿಳೆಯರು ಸೇರಿದಂತೆ 19 ಮಂದಿಯನ್ನ ಗುರುವಾರ ಅಮಿನ್ ದೀವಿ ಹೆಸರಿನ ನೌಕೆ ಮುಖಾಂತರ ಮಂಗಳೂರಿಗೆ ಕರೆ ತರಲಾಯಿತು. ಬಳಿಕ ಎಲ್ಲ ಕಾರ್ಮಿಕರ ಆರೋಗ್ಯ ತಪಾಸಣೆಯನ್ನು ಮಾಡಲಾಯಿತು. ನೌಕರರು ಬಂದಿಳಿಯುತ್ತಿದ್ದಂತೆ ಜನಪ್ರತಿನಿಧಿಗಳು ಕಾರ್ಮಿಕರ ರಕ್ಷಣೆಗೆ ಮುಗಿಬಿದ್ದಿದ್ದರು. ಸಾಮಾಜಿಕ ಅಂತರ ಮರೆತ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಹಾಗೂ ಕಾಂಗ್ರೆಸ್ ಎಂ.ಎಲ್.ಸಿ ಐವಾನ್ …
Read More »ಶೃಂಗೇರಿ ತಾಲೂಕಿನ ಆರೋಗ್ಯ ಅಧಿಕಾರಿಗಳು ಮಾಡಿರೋ ಎಡವಟ್ಟಿಗೆ ಇಡೀ ಶೃಂಗೇರಿ ತಾಲೂಕಿನಾದ್ಯಂತ ಆತಂಕ
ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲೂಕಿನ ಆರೋಗ್ಯ ಅಧಿಕಾರಿಗಳು ಮಾಡಿರೋ ಎಡವಟ್ಟಿಗೆ ಇಡೀ ಶೃಂಗೇರಿ ತಾಲೂಕಿನಾದ್ಯಂತ ಆತಂಕ ಹೆಚ್ಚಾಗಿದೆ. ಮೇ 17ರಂದು ದೆಹಲಿಯಿಂದ ಬಂದು ಕ್ವಾರಂಟೈನ್ನಲ್ಲಿದ್ದ ವ್ಯಕ್ತಿಯ ಕೊರೊನಾ ಪರೀಕ್ಷೆಯ ವರದಿ ಬರುವ ಮುನ್ನವೇ ಅಧಿಕಾರಿಗಳು ಆತನನ್ನ ಮನೆಗೆ ಕಳಿಸಿ ಮಹಾ ಎಡವಟ್ಟು ಮಾಡಿದ್ದಾರೆ. ಇದರಿಂದ ಇಡೀ ಶೃಂಗೇರಿ ತಾಲೂಕಿನಾದ್ಯಂತ ಆತಂಕ ಹೆಚ್ಚಾಗಿದೆ. ಕ್ವಾರಂಟೈನ್ನಲ್ಲಿದ್ದ ವ್ಯಕ್ತಿಗೆ ಕೊರೊನಾ ನೆಗೆಟಿವ್ ಎಂದು ಅಧಿಕಾರಿಗಳು ಆತನನ್ನ ಮನೆಗೆ ಕಳುಹಿಸಿದ್ದರು. ಆದರೆ ಗುರುವಾರದ ಹೆಲ್ತ್ ಬುಲೆಟಿನ್ನಲ್ಲಿ …
Read More »ಲಾಕ್ಡೌನ್ 4.0 ಮುಗಿಯಲು ಇನ್ನೂ ಮೂರು ದಿನ ಮಾತ್ರ ಬಾಕಿ ಇದೆ. ಹೀಗಾಗಿ ಜೂನ್ 1 ರಿಂದ ಹೊಸ ಲಾಕ್ಡೌನ್ ಮತ್ತಷ್ಟು ಸಡಿಲಿಕೆ?………
ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಮಾಡಲಾಗಿದ್ದ ಲಾಕ್ಡೌನ್ 4.0 ಮುಗಿಯಲು ಇನ್ನೂ ಮೂರು ದಿನ ಮಾತ್ರ ಬಾಕಿ ಇದೆ. ಹೀಗಾಗಿ ಜೂನ್ 1 ರಿಂದ ಹೊಸ ಲಾಕ್ಡೌನ್ ಮತ್ತಷ್ಟು ಸಡಿಲಿಕೆಯಾಗುವ ಸಾಧ್ಯತೆ ಇದೆ. ಈಗಾಗಲೇ ಎಲ್ಲ ರಾಜ್ಯಗಳ ಸಿಎಂಗಳ ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚರ್ಚೆ ನಡೆಸುತ್ತಿದ್ದು, ಲಾಕ್ಡೌನ್ ಸ್ವರೂಪದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಅಲ್ಲದೇ ಲಾಕ್ಡೌನ್ ರಿಲೀಫ್ ಬಗ್ಗೆ ರಾಜ್ಯಗಳ ಅಭಿಪ್ರಾಯ ಪಡೆದಿದ್ದಾರೆ. ಹೀಗಾಗಿ ಜನರಿಗೆ ಜೂನ್ …
Read More »ಮಂಡ್ಯದ ಗಂಡು’, ‘ಕಲಿಯುವಗದ ಕರ್ಣ’ ಅಂಬರೀಶ್ ಅವರು ಜನ್ಮದಿನೋತ್ಸವ.
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ರೆಬೆಲ್ ಸ್ಟಾರ್ ಎಂದೇ ಖ್ಯಾತಿ ಗಳಿಸಿದ್ದ ‘ಮಂಡ್ಯದ ಗಂಡು’, ‘ಕಲಿಯುವಗದ ಕರ್ಣ’ ಅಂಬರೀಶ್ ಅವರು ಜನ್ಮದಿನೋತ್ಸವ. ಈ ಹಿನ್ನೆಲೆಯಲ್ಲಿ ಪತ್ನಿ ಸುಮಲತಾ ಅಂಬರೀಶ್ ಸೇರಿದಂತೆ ಅನೇಕರು ಸೋಶಿಯಲ್ ಮೀಡಿಯಾದ ಮೂಲಕ ಶುಭಾಶಯ ಕೋರುತ್ತಿದ್ದಾರೆ. ಇಂದು ಅಂಬರೀಶ್ ಅವರ 68ನೇ ಜನ್ಮದಿನವಾಗಿದ್ದು, ಈ ಹಿಂದೆ ಅವರ ಅಭಿಮಾನಿಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಅಂಬಿ ನಿಧನದ ನಂತರ ಅಭಿಮಾನಿಗಳು ಅವರ …
Read More »ಕೊರೋನಾ ಯುದ್ಶದಲ್ಲಿ ಗೆದ್ದು ಗುಣಮುಖರಾಗಿ ಮನೆಗಳಿಗೆ ತೆರಳಿದ ಮುಂಬೈ ಕನ್ನಡಿಗರು ತಾಲ್ಲೂಕು ಮತ್ತು ಜಿಲ್ಲಾಡಳಿತಕ್ಕೆ ಧನ್ಯವಾದಗಳನ್ನು ಸಮರ್ಪಿಸಿ ತಮ್ಮ ಮನೆಗಳಿಗೆ ತೆರಳಿದರು.
ಮಂಡ್ಯ ಕೃಷ್ಣರಾಜಪೇಟೆಯ ಗವಿಮಠದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹೋಂ ಕ್ವಾರಂಟೈನ್ ಆಗಿದ್ದು ಗುಣಮುಖರಾಗಿರುವ ಮುಂಬೈ ಕನ್ನಡಿಗರಿಗೆ ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಬಿಡುಗಡೆ ಪತ್ರವನ್ನು ನೀಡಿ ಅಗತ್ಯ ಆರೋಗ್ಯ ಮುನ್ಸೂಚನೆಯನ್ನು ನೀಡಿ ಶುಭ ಹಾರೈಸಿ ಬೀಳ್ಕೊಟ್ಟರು. ಕಳೆದ 14ದಿನಗಳಿಂದಲೂ ಹೋಂ ಕ್ವಾರಂಟೈನ್ ನಲ್ಲಿದ್ದು ಕೊರೋನಾ ಟೆಸ್ಟಿಂಗ್ ಪರೀಕ್ಷೆಯಲ್ಲಿ ನೆಗೆಟಿವ್ ಫಲಿತಾಂಶದಲ್ಲಿ ಗೆದ್ದು ಬಂದಿರುವ ಮುಂಬೈ ಕನ್ನಡಿಗರಿಗೆ ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಶುಭ ಹಾರೈಸಿ ಬಿಡುಗಡೆ ಪತ್ರಗಳನ್ನು ನೀಡಿ ಬೀಳ್ಕೊಟ್ಟರು. ಕೊರೋನಾ ಮಹಾಮಾರಿಯನ್ನು …
Read More »ದಿ. 29.05.2020 ರ ನಂತರ ಯಾವುದೇ ದಿನದಂದು ಕೆಲಸ ಬಹಿಷ್ಕರಿಸಿ ಅನಿರ್ದಿಷ್ಟಾವಧಿ (ಅಸಹಕಾರ ಚಳುವಳಿ ಹೋರಾಟ) ಮುಷ್ಕರಕ್ಕಿಳಿಯುತ್ತಿದ್ದೆವೆಂದು ಸಂಘದಿಂದ ಸರ್ಕಾರಕ್ಕೆ ಅಂತಿಮ ಗಡುವು
ಬೆಂಗಳೂರು :ಸರ್ಕಾರದ ಮಟ್ಟದಲ್ಲಿ ಸಮಿತಿ ರಚನೆ ಮಾಡಿ ನಮ್ಮ ಬೇಡಿಕೆಗಳನ್ನು ನಿರ್ದಿಷ್ಟಾವಧಿಯಲ್ಲಿ (ಕಾಲಮಿತಿಯಲ್ಲಿ) ಈಡೇರಿಸಲು ಕ್ರಮವಹಿಸುವ ಬಗ್ಗೆ ಸನ್ಮಾನ ಸಚಿವರಿಗೆ ಹಾಗೂ ಮಾನ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಆರೋಗ್ಯ ಮತ್ತು ಕು. ಕ. ಸೇವೆಗಳು ಹಾಗೂ ವೈ. ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಇವರಿಗೆ ಅಧಿಕೃತವಾಗಿ ಪತ್ರದ ಮುಖೇನ ಈಗಾಗಲೇ ತಿಳಿಸಲಾಗಿದೆ. ಅದಲ್ಲದೆ ಸಂಘದ ವತಿಯಿಂದ ಗೌರವಾಧ್ಯಕ್ಷರಾದ ಮಾನ್ಯ ಶ್ರೀ ಆಯನೂರು ಮಂಜುನಾಥ್ ರವರು ಸರ್ಕಾರದ ಅಪರ …
Read More »ಮಹಿಳೆಯ ಕಣ್ಣೀರು ನೋಡಿ ಮರುಗಿದ ಜನ -ಯೋಗ, ಆಧ್ಯಾತ್ಮ ಅಧ್ಯಯನಕ್ಕಾಗಿ ಭಾರತಕ್ಕೆ ಆಗಮನ
ಧಾರವಾಡ: ತನ್ನ ತವರಿಗೆ ಹೋಗಲಾಗದೇ ಭಾರತದಲ್ಲಿ ಸಿಲುಕಿದ್ದ ಆಸ್ಟ್ರೇಲಿಯಾ ಮೂಲದ ಮಹಿಳೆ ಕಣ್ಣೀರು ಹಾಕುತ್ತ ಜಿಲ್ಲಾಧಿಕಾರಿ ಕಚೇರಿ ಎದುರು ನಿಂತ ಘಟನೆ ಧಾರವಾಡದಲ್ಲಿ ನಡೆದಿದೆ. ಆಸ್ಟ್ರೇಲಿಯಾ ಮೂಲದ ನೈಶಾ ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಮುಂದೆ ಕಣ್ಣೀರು ಹಾಕುತ್ತಿದ್ದ ಮಹಿಳೆ. ಲಾಕ್ಡೌನ್ ಮುಂದೆ ಭಾರತೀಯ ಯೋಗ ಮತ್ತು ಆಧ್ಯಾತ್ಮದ ಬಗ್ಗೆ ಅಧ್ಯಯನ ಮಾಡಲು ಆಸ್ಟ್ರೇಲಿಯಾದಿಂದ ಬಂದಿದ್ದರು. ಪ್ರವಾಸ ಮಾಡುತ್ತ ಹುಬ್ಬಳ್ಳಿಗೆ ಬಂದಾಗ ಲಾಕ್ಡೌನ್ ಘೋಷಣೆಯಾಗಿತ್ತು. ಹೀಗಾಗಿ ಹುಬ್ಬಳ್ಳಿ ನಗರದಲ್ಲಿಯೇ ಸಿಲುಕಿದ್ದರು. ಸದ್ಯ …
Read More »ಚುನಾವಣೆ ಗದ್ದಲದಲ್ಲಿ ಸಾಮಾಜಿಕ ಅಂತರವನ್ನೇ ಮರೆತ ಜನಪ್ರತಿನಿಧಿಗಳು, ಅಧಿಕಾರಿಗಳು
ಗದಗ: ಎಪಿಎಂಸಿ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಆಯ್ಕೆವೇಳೆ ಶಾಸಕರು ಹಾಗೂ ತಹಶಿಲ್ದಾರರಿಂದ ಸರ್ಕಾರದ ನಿಯಮ ಉಲ್ಲಂಘನೆಯಾಗಿದ್ದು, ಸಾಮಾಜಿಕ ಅಂತರ ಮರೆತು ಬೇಕಾಬಿಟ್ಟಿಯಾಗಿ ವರ್ತಿಸಿದ್ದಾರೆ. ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಘಟನೆ ನಡೆದಿದೆ. ಗುರುವಾರ ಲಕ್ಷ್ಮೇಶ್ವರ ಎಪಿಎಂಸಿ ಅಧ್ಯಕ್ಷ-ಉಪಾಧ್ಯಕ್ಷರನ್ನು ಚುನಾವಣೆ ಮೂಲಕ ಆಯ್ಕೆ ಮಾಡಲಾಯಿತು. ಈ ವೇಳೆ ಸಾಮಾಜಿಕ ಅಂತರ, ಕೆಲವರು ಮುಖಕ್ಕೆ ಮಾಸ್ಕ್ ಧರಿಸದೆ ಲಾಕ್ಡೌನ್ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಶಿರಹಟ್ಟಿ ಬಿಜೆಪಿ ಶಾಸಕ ರಾಮಣ್ಣ ಲಮಾಣಿ, ತಹಶೀಲ್ದಾರ್ ಬ್ರಮರಾಂಭ ಗುಬ್ಬಿಶೆಟ್ಟಿ ಹಾಗೂ …
Read More »
Laxmi News 24×7