ತುಮಕೂರು: ಬಿಡುವಿಲ್ಲದೆ ಕರ್ತವ್ಯ ನಿರ್ವಹಿಸಿದ್ದಕ್ಕಾಗಿ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿ ಹೋಂಗಾರ್ಡ್ವೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ತುಮಕೂರಿನಲ್ಲಿ ನಡೆದಿದೆ. ಕೊರಟಗೆರೆ ತಾಲೂಕಿನ ಗೌರಗಾನಹಳ್ಳಿಯ ಹನುಮಂತು ಮೃತರು.ಅನಾರೋಗ್ಯದ ನಡುವೆಯೂ ಗೃಹರಕ್ಷಕ ಸಿಬ್ಬಂದಿ ಹನುಮಂತು ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊರೊನಾ ಕರ್ತವ್ಯ ನಿರ್ವಹಿಸುತ್ತಿದ್ದರು. ಬಿಡುವಿಲ್ಲದ ಕೆಲಸದಿಂದ ನಿನ್ನೆ ಅವರ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದಿದ್ದು, ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಅವರು ಮಧುಮೇಹದಿಂದ ಬಳಲುತಿದ್ದರು ಎಂದು ತಿಳಿದುಬಂದಿದೆ.ತೀರ ಬಡಕುಟುಂಬದಿಂದ …
Read More »ಬೆಳಗಾವಿ ಜಿಲ್ಲೆಯ ರಾಯಬಾಗ ಕುಡಚಿಯ ಮೂರು ಪಾಸಿಟೀವ್ ಕೇಸ್ ಪತ್ತೆ
ಬೆಳಗಾವಿ- ಬೆಳಗಾವಿ ಪಾಲಿಗೆ ಇಂದು ಶುಭ ಶುಕ್ರವಾರ ಆಗಲಿಲ್ಲ ಯಾಕಂದ್ರೆ ಇಂದು ಬೆಳಗಿನ ಹೆಲ್ತ್ ಬುಲಿಟೀನ್ ಬಿಡುಗಡೆ ಯಾಗಿದೆ. ಈ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಮೂರು ಪಾಸಿಟಿವ್ ಕೇಸ್ ಪತ್ತೆಯಾಗಿವೆ ಬೆಳಗಾವಿ ಜಿಲ್ಲೆಯ ರಾಯಬಾಗ ಕುಡಚಿಯ ಮೂರು ಪಾಸಿಟೀವ್ ಕೇಸ್ ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 70 ರ ಗಡಿ ದಾಟಿ 72 ಕ್ಕೇರಿದೆ ನಿನ್ನೆ ಗುರುವಾರ ಒಂದೇ ದಿನ ಹದಿನಾಲ್ಕು ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದವು ಇಂದು …
Read More »ವೃದ್ಧ ದಂಪತಿಗಳನ್ನು ಹೊರಹಾಕಿದ ಪುರಸಭೆ ಅಧಿಕಾರಿಗಳು ತರಕಾರಿ ತರಲು ತೆರಳಿದ್ದ ದಂಪತಿಗಳ ಮನೆಗೆ ಬೀಗ ಜಡಿದ ಅಧಿಕಾರಿಗಳು.
ರಾಮದುರ್ಗ :ವೃದ್ಧ ದಂಪತಿಗಳನ್ನು ಹೊರಹಾಕಿದ ಪುರಸಭೆ ಅಧಿಕಾರಿಗಳು ತರಕಾರಿ ತರಲು ತೆರಳಿದ್ದ ದಂಪತಿಗಳ ಮನೆಗೆ ಬೀಗ ಜಡಿದ ಅಧಿಕಾರಿಗಳು. ಬೆಳಗಾವಿ ಜಿಲ್ಲೆಯ ರಾಮದುರ್ಗ ಪುರಸಭೆಯ ವ್ಯಾಪ್ತಿಯಲ್ಲಿ ಘಟನೆ ರಾಮದುರ್ಗದ ನೇಕಾರ ಪೇಟೆಯ ನಿವಾಸಿಗಳಿಗೆ ಹೊರದಬ್ಬಿದ ಅಧಿಕಾರಿಗಳು ಕೊರೋನಾ ವೈರಸ್ ಲಾಕಡೌನ ಸಂದರ್ಭದಲ್ಲೂ ಕರುಣೆ ತೋರದ ಅಧಿಕಾರಿಗಳು ಅಧಿಕಾರಿಗಳ ಈ ವರ್ತನೆಗೆ ಕಂಗಾಲಾದ ವೃದ್ದ ದಂಪತಿಗಳು ಬಾಗಿಲು ಬಳಿ ಕುಳಿತು ಕಣ್ಣೀರು ಹಾಕುತ್ತಿರುವ ದಂಪತಿಗಳು ಮನೆಯ ಮುಂದೆಯೆ ದಿನ ಕಳೆಯುತ್ತಿರುವ ಬಸಪ್ಪ …
Read More »ರಾಜ್ಯದ ಯಾವ ಜಿಲ್ಲೆ ಯಾವ್ ಝೋನ್ ನಲ್ಲಿ ಇದೆ ಬೆಳಗಾವಿ ಯಾವ್ ಝೋನ್ ಗೊತ್ತಾ?..
ಬೆಂಗಳೂರು: ಲಾಕ್ ಡೌನ್ ಜಾರಿಯಲ್ಲಿದ್ದರೂ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಹೆಚ್ಚುತ್ತಿದೆ. ಈಗಾಗಲೇ ಸೋಂಕಿತರ ಸಂಖ್ಯೆ 35 ಸಾವಿರ ದಾಟಿದ್ದರೆ ಸಾವಿನ ಸಂಖ್ಯೆ 1,147ಕ್ಕೆ ಏರಿದೆ. ಈ ಹಿನ್ನೆಲೆಯಲ್ಲಿ ದೇಶವ್ಯಾಪಿ ಸೋಂಕು ಅಪಾಯಕಾರಿ ಮಟ್ಟದಲ್ಲಿರುವ ಪ್ರದೇಶಗಳನ್ನ ಗುರುತಿಸಿರುವ ಕೇಂದ್ರ ಆರೋಗ್ಯ ಇಲಾಖೆ ಮೂರು ವಲಯಗಳನ್ನು ಗುರುತಿಸಿದೆ. ವೈರಸ್ ಸೋಂಕಿನ ತೀವ್ರತೆಯ ಆಧಾರದ ಮೇಲೆ ಮೂರು ಪಟ್ಟಿ ಮಾಡಲಾಗಿದ್ದು, ರೆಡ್ ಜೋನ್, ಆರೆಂಜ್ ಜೋನ್ ಮತ್ತು ಗ್ರೀನ್ ಜೋನ್ ಎಂದು ವಿಂಗಡಿಸಲಾಗಿದೆ. …
Read More »ಆಹಾರ ಪದಾರ್ಥಕಿಟ್ ಕೊಡಲು ಕರೆಸಿ, ಜನರಿಗೆ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವಮಾನ
ಆಹಾರ ಪದಾರ್ಥಗಳ ಕಿಟ್ಗಳನ್ನು ಪಡೆಯುವ ಸಲುವಾಗಿ ನೂರಾರು ಜನರು ಒಂದೆಡೆ ಸೇರಿದ್ದರು. ಎಲ್ಲರೂ ಬಿಸಿಲಿನಲ್ಲಿ ಗಂಟೆಗೂ ಹೆಚ್ಚು ಕಾದರೂ ಶಾಸಕ ರೇಣುಕಾಚಾರ್ಯ ಅವರು ಸ್ಥಳಕ್ಕೆ ಬರಲಿಲ್ಲ. ಇದರಿಂದ ಅಸಮಾಧಾಗೊಂಡ ಜನರು ತಾವು ಮನೆಗೆ ಹೋಗುವುದಾಗಿ ಹೇಳಿದ್ದಾರೆ. ದಾವಣಗೆರೆ: ಆಹಾರ ಪದಾರ್ಥಕಿಟ್ ಕೊಡಲು ಕರೆಸಿ, ಜನರಿಗೆ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವಮಾನ ಮಾಡಿದ ಘಟನೆ ಹೊನ್ನಾಳಿ ತಾಲೂಕಿನ ಹನಮಸಾಗರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನಡೆದಿದೆ. ಕಿಟ್ ಬೇಡ ಅಂದ್ರೆ ಎದ್ದು ಹೋಗು ಎಂದು ಶಾಸಕರು …
Read More »ರಾಜಸ್ಥಾನದಿಂದ ಬಂದ ವಿದ್ಯಾರ್ಥಿಗಳಿಗೆ ಸರ್ಕಾರಿ ಹಾಸ್ಟೆಲ್ನಲ್ಲಿ ಕ್ವಾರಂಟೈನ್ ಮಾಡಬೇಡಿ:
ಬೆಂಗಳೂರು: ರಾಜಸ್ಥಾನದಿಂದ ಬಂದ ವಿದ್ಯಾರ್ಥಿಗಳಿಗೆ ಸರ್ಕಾರಿ ಹಾಸ್ಟೆಲ್ನಲ್ಲಿ ಕ್ವಾರಂಟೈನ್ ಮಾಡಬೇಡಿ ಎಂದು ಬೆಂಗಳೂರಿನ ಸುಂಕದಕಟ್ಟೆಯ ಸ್ಥಳೀಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹೊರ ರಾಜ್ಯದಲ್ಲಿ ಸಿಲುಕಿದ್ದ ಬೆಂಗಳೂರಿಗರನ್ನ ಮಧ್ಯರಾತ್ರಿ ನಗರಕ್ಕೆ ಕರೆದುಕೊಂಡು ಬರುವುದನ್ನು ವಿರೋಧಿಸಿ ಸುಂಕದಕಟ್ಟೆಯ ಸ್ಥಳೀಯರು ಪ್ರತಿಭಟನೆ ಮಾಡುತ್ತಿದ್ದಾರೆ. ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆಂದು ರಾಜಸ್ಥಾನಕ್ಕೆ ತೆರಳಿದ್ದರು. ಅಲ್ಲಿನ ಸರ್ಕಾರ ವಿದ್ಯಾರ್ಥಿಗಳನ್ನ ಇದೀಗ ಬೆಂಗಳೂರಿಗೆ ಕಳುಹಿಸಿದೆ. ರಾಜಸ್ಥಾನದಿಂದ ಬಂದ ವಿದ್ಯಾರ್ಥಿಗಳನ್ನ ಸುಂಕದಕಟ್ಟೆಯ ಸರ್ಕಾರಿ ಹಾಸ್ಟೆಲ್ನಲ್ಲಿ ಕ್ವಾರಂಟೈನ್ ಮಾಡಲು ಬಿಬಿಎಂಪಿ ಮುಂದಾಗಿದೆ. …
Read More »ಶನಿವಾರದಂದು ಬೆಳಗಾವಿ ಗ್ರಾಮೀಣ ಕ್ಷೇತ್ರ ದಲ್ಲಿ ಸಚಿವ ರಮೇಶ್ ಜಾರಕಿಹೊಳಿ ಪರಶೀಲನೆ ………
ಬೆಳಗಾವಿ- ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ* ಅವರು ದಿನಾಂಕ 02.05.2020, ಶನಿವಾರದಂದು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿರುವ ಕಿಣಯೇ ಡ್ಯಾಂ ಕಾಮಗಾರಿಯನ್ನು ವೀಕ್ಷಿಸಲಿದ್ದಾರೆ. ಮದ್ಯಾಹ್ನ 12-00 ಘಂಟೆಗೆ ನೀರಾವರಿ ಇಲಾಖೆ ಮತ್ತು ಕ.ನೀ.ನಿ.ನಿ.ದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದದ್ದಾರೆ. ಜಲಸಂಪನ್ಮೂಲ ಸಚಿವರಾದ ಬಳಿಕ ಲಕ್ಷ್ಮೀ ಹೆಬ್ಬಾಳಕರ ಪ್ರತಿನಿಧಿಸುತ್ತಿರುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಿಣಿಯೇ ಡ್ಯಾಂ ಕಾಮಗಾರಿ ಬಹುತೇಕ ಮುಕ್ತಾಯವಾಗಿದ್ದು,ಜಲಾಶಯದ ಎಡದಂಡೆ ಮತ್ತು ಬಲದಂಡೆ ಕಾಮಗಾರಿಗಳು ನಡೆಯುತ್ತಿವೆ. ಬೆಳಗಾವಿ ನಗರದ ಸುಮಾರು …
Read More »ಮಾಸ್ಕ್ ಧರಿಸದಿದ್ರೆ ಬೀಳುತ್ತೆ ಫೈನ್- 9 ಗಂಟೆ ಮೇಲೆ ರೋಡ್ಗಿಳಿದ್ರೆ ವೆಹಿಕಲ್ ಸೀಜ್………….
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 130ರ ಗಡಿ ದಾಟಿದೆ. ಆದರೂ ಜನ ಸಾಮಾನ್ಯರು ಎಚ್ಚೆತ್ತುಕೊಳ್ಳುತ್ತಿಲ್ಲ. ಇದರಿಂದಾಗಿ ಬಿಬಿಎಂಪಿ ಟೀಂ ಫೀಲ್ಡಿಗೆ ಇಳಿದಿದೆ. ಬೆಂಗಳೂರಿನಲ್ಲಿ ಮತ್ತಷ್ಟು ಕಠಿಣ ನಿಮಯಗಳನ್ನು ಬಿಬಿಎಂಪಿ ಜಾರಿಗೆ ತಂದಿದೆ. ಮಾಸ್ಕ್ ಧರಿಸದೇ ಓಡಾಡಿದ್ರೆ 1 ಸಾವಿರ ರೂಪಾಯಿ ದಂಡ ಹಾಕಲಾಗುತ್ತದೆ. 9 ಗಂಟೆವರೆಗೂ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಒಂದು ವೇಳೆ 9 …
Read More »ದಿಢೀರನೇ ಸರ್ಕಾರ ಪಿಜಿ ಮೆಡಿಕಲ್ ಮತ್ತು ಡೆಂಟಲ್ ಸೀಟುಗಳ ಶುಲ್ಕಹೆಚ್ಚಳ..
ಬೆಂಗಳೂರು: ಕೊರೊನಾ ಲಾಕ್ಡೌನ್ ನಡುವೆ ಮೆಡಿಕಲ್ ಮತ್ತು ಡೆಂಟಲ್ ವಿದ್ಯಾರ್ಥಿಗಳಿಗೆ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ದಿಢೀರನೇ ಸರ್ಕಾರ ಪಿಜಿ ಮೆಡಿಕಲ್ ಮತ್ತು ಡೆಂಟಲ್ ಸೀಟುಗಳ ಶುಲ್ಕವನ್ನು ಹೆಚ್ಚಳ ಮಾಡಿದೆ. ಖಾಸಗಿ ಕಾಲೇಜ್ಗಳು, ಖಾಸಗಿ ವಿವಿಗಳು, ಡೀಮ್ಡ್ ವಿವಿಗಳ ಸೀಟುಗಳ ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ. ಖಾಸಗಿ ಕೋಟಾದ ಸೀಟುಗಳಿಗೆ ಶೇ. 30ರಷ್ಟು ಶುಲ್ಕ ಅಧಿಕವಾಗಿದೆ. ಇನ್ನೂ ಖಾಸಗಿ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದಡಿ ಸೇರುವ ವಿದ್ಯಾರ್ಥಿಗಳಿಗೆ ಶೇ. 20ರಷ್ಟು ಶುಲ್ಕವನ್ನು ಸರ್ಕಾರ …
Read More »ಹಿರೇಬಾಗೇವಾಡಿ ಗ್ರಾಮವನ್ನ ಸೀಲ್ಡೌನ್ ಮಾಡಿ ಸುಮ್ಮನಾಗಿದೆ. ಸ್ಯಾನಿಟೈಸರ್ ಮಾಡುವ ಗೋಜಿಗೆ ಹೋಗಿಲ್ಲ. ಅಗತ್ಯ ಮುಂಜಾಗ್ರತೆ ತೆಗೆದುಕೊಂಡಿಲ್ಲ ಅಂತ ಸ್ಥಳೀಯ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ..
ಬೆಳಗಾವಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ತಗ್ಲೀಘಿಗಳ ನಂಜು ವ್ಯಾಪಿಸುತ್ತಿದ್ದು, 69 ಜನರಲ್ಲಿ ಸೋಂಕು ಪತ್ತೆಯಾಗಿದೆ. ಒಂದೇ ಗ್ರಾಮದಲ್ಲಿ 36 ಜನರಲ್ಲಿ ಸೋಂಕು ದೃಢವಾಗಿದೆ. 20 ಸಾವಿರ ಜನಸಂಖ್ಯೆ ಇರುವ ಬೆಳಗಾವಿಯ ಹಿರೇಬಾಗೇವಾಡಿ ಗ್ರಾಮದಲ್ಲಿ ಇದೀಗ ಕೊರೊನಾ ರಣಕೇಕೆ ಹಾಕುತ್ತಿದೆ. ಈ ಗ್ರಾಮದಲ್ಲಿ ಒಂದಲ್ಲ ಎರಡಲ್ಲ ಬರೋಬ್ಬರಿ 36 ಜನರಿಗೆ ಕೊರೊನಾ ಸೋಂಕು ತಗುಲಿದೆ. ಓರ್ವ ಯುವಕನಿಂದ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಸೋಂಕು ಹರಡಿದೆ. ದೆಹಲಿಯ …
Read More »
Laxmi News 24×7