Breaking News

Laxminews 24x7

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಬೆಳಗಾವಿ ಮತ್ತು ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ‌ನೀಡಿದ ಸುಮಾರು 5 ಲಕ್ಷ ರೂ. ಚೆಕ್  ಗಳನ್ನು ಹಸ್ತಾಂತರಿಸಿದರು. ಇಲ್ಲಿನ ಸದಾಶಿವ ನಗರದಲ್ಲಿರುವ ಡಿಕೆಶಿ ಅವರ ಮನೆಗೆ ಭೇಟಿ‌ ನೀಡಿದ ಕಾರ್ಯಾಧ್ಯಕ್ಷರು ಚೆಕ್ ಗಳನ್ನು ಹಸ್ತಾಂತರಿಸಿ ಲಾಕ್‌ಡೌನ್ ಸಂಕಷ್ಟದಲ್ಲಿರುವ ಬಡಜನರಿಗೆ ನೆರವಾಗುವ ಕುರಿತು ಚರ್ಚೆ …

Read More »

ಎಪಿಎಂಸಿಯ 50 ಕೋಟಿ ವಂಚನೆ ಪ್ರಕರಣ : 12 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ

ಬೆಂಗಳೂರು, ಏ.30- ಎಪಿಎಂಸಿಯ 50 ಕೋಟಿ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಸ್ತೃತ ತನಿಖೆ ನಡೆಸಿರುವ ಸಿಸಿಬಿ ಪೆÇಲೀಸರು ಅವ್ಯವಹಾರದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ 12 ಆರೋಪಿಗಳ ವಿರುದ್ಧ ಸುಮಾರು 1400 ಪುಟಗಳ ಪ್ರಾಥಮಿಕ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಪ್ರಮುಖ ಆರೋಪಿ ಸಿಂಡಿಕೆಟ್ ಬ್ಯಾಂಕ್‍ನ ಸಹಾಯಕ ವ್ಯವಸ್ಥಾಪಕ ಸಿದ್ದಲಿಂಗಯ್ಯ ಹಾಗೂ ನಿವೃತ್ತ ಖಜಾನೆ ಅಧಿಕಾರಿ ಲಕ್ಷ್ಮಯ್ಯ ಸೇರಿದಂತೆ 12 ಮಂದಿ ಆರೋಪಿಗಳಲ್ಲಿ ಕೆಲವರು ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ ಕೃಷಿ ಉತ್ಪನ್ನ ಮಾರುಕಟ್ಟೆ …

Read More »

BREAKING : ಲಾಕ್‍ಡೌನ್ ಸಡಿಲಿಕೆ ಕುರಿತು ಇಲ್ಲಿದೆ ಸಿಹಿಸುದ್ದಿ..!

ನವದೆಹಲಿ,ಏ.30-ಎರಡನೇ ಅವಧಿಗೆ ವಿಸ್ತರಣೆಯಾಗಿರುವ ದೇಶವ್ಯಾಪಿ ಲಾಕ್‍ಡೌನ್ ಮೇ 3ರಂದು ಕೊನೆಗೊಳ್ಳಲಿದ್ದು, ಮರುದಿನದಿಂದಲೇ ಭಾರತದ ಬಹುತೇಕ ಜಿಲ್ಲೆಗಳು ಅನ್‍ಲಾಕ್ ಆಗುವ ಬಗ್ಗೆ ಕೇಂದ್ರ ಗೃಹಸಚಿವಾಲಯ ಮುನ್ಸೂಚನೆ ನೀಡಿದೆ. ಆದರೆ ಹಾಟ್‍ಸ್ಟಾಟ್ ಮತ್ತು ರೆಡ್‍ಜೋನ್ ಜಿಲ್ಲೆಗಳಲ್ಲಿ ಮೇ 3ರ ನಂತರವೂ ಕಠಿಣ ನಿರ್ಬಂಧ ಯಥಾಸ್ಥಿತಿಯಲ್ಲೇ ಮುಂದುವರೆಯಲಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವಾಲಯ ಅತಿ ಶೀಘ್ರದಲ್ಲೇ ಹೊಸ ಮತ್ತು ಪರಿಸ್ಕøತ ಮಾರ್ಗದರ್ಶಿಯನ್ನು ಬಿಡುಗಡೆ ಮಾಡಲಾಗಿದೆ. ದೇಶದಲ್ಲಿ ಒಟ್ಟು 739 ಜಿಲ್ಲೆಗಳಿವೆ. ಅನೇಕ ಜಿಲ್ಲೆಗಳಲ್ಲಿ …

Read More »

ಬ್ರೇಕಿಂಗ್ : ರಾಜ್ಯದಲ್ಲಿ ನಿಂತಿಲ್ಲ ಕೊರೋನಾ ಅಟ್ಟಹಾಸ, ಇಂದು 22 ಮಂದಿಯಲ್ಲಿ ಸೋಂಕು ಪತ್ತೆ..!

ಬೆಂಗಳೂರು, ಏ.30- ಮತ್ತೊಮ್ಮೆ ರಾಜ್ಯದಲ್ಲಿ ಕೊರೊನಾ ಸೋಂಕು ಅಬ್ಬರಿಸಿದೆ. ಇಂದು ಮಧ್ಯಾಹ್ನದವರೆಗೂ ನಡೆದ ಪರೀಕ್ಷೆಯಲ್ಲಿ 22 ಮಂದಿಗೆ ಸೋಂಕಿರುವುದು ಪತ್ತೆಯಾಗಿದೆ. ರಾಜ್ಯದಲ್ಲಿ ಸೋಂಕಿತರ ಪ್ರಮಾಣ 557ಕ್ಕೇರಿದೆ. 21 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 223 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಈವರೆಗೂ ಹಸಿರು ವಲಯವಾಗಿದ್ದ ತುಮಕೂರಿನಲ್ಲಿ ಮತ್ತೊಂದು ಪ್ರಕರಣ ಪತ್ತೆಯಾಗಿದೆ. ಬೆಳಗಾವಿ ಜಿಲ್ಲೆ ಹಿರೇಬಾಗವಾಡಿಯಲ್ಲಿ 12, ಹುಕ್ಕೇರಿಯಲ್ಲಿ ಎರಡು, ಬೆಂಗಳೂರು ನಗರದಲ್ಲಿ ಮೂರು ಮಂದಿಗೆ, ವಿಜಯಪುರದಲ್ಲಿ ಎರಡು, ದಕ್ಷಿಣ ಕನ್ನಡ, ತುಮಕೂರು, …

Read More »

ಮದ್ಯದಂಗಡಿ ಸದ್ಯ ಓಪನ್ ಆಗಲ್ಲ : ಆರ್.ಅಶೋಕ್

ಬೆಂಗಳೂರು, ಏ.30- ಮದ್ಯದಂಗಡಿಗಳನ್ನು ಸದ್ಯಕ್ಕೆ ತೆರೆಯುವ ಯಾವುದೇ ಉದ್ದೇಶವನ್ನು ಸರ್ಕಾರ ಹೊಂದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಂತ ಹಂತವಾಗಿ ಲಾಕ್‍ಡೌನ್ ಸಡಿಲಿಕೆ ಮಾಡುತ್ತಿದ್ದರೂ ಸದ್ಯಕ್ಕೆ ಮದ್ಯದಂಗಡಿ ತೆರೆಯುವ ಯಾವುದೇ ಉದ್ದೇಶ ಇಲ್ಲ ಎಂದರು. ಒಂದು ವೇಳೆ ಮದ್ಯದಂಗಡಿಗಳನ್ನು ತೆರೆದರೆ ಬಡವರಿಗೆ ಮತ್ತು ಕಾರ್ಮಿಕರಿಗೆ ಹಂಚಿಕೆಯಾಗಿರುವ ಆಹಾರ ಸಾಮಗ್ರಿಗಳು, ಎಣ್ಣೆಗಾಗಿ ಖಾಲಿಯಾಗುವ ಸಾಧ್ಯತೆಯಿದ್ದು, ಕುಟುಂಬದವರು ಉಪವಾಸ ಬೀಳಲಿದ್ದಾರೆ. ಹೀಗಾಗಿ ಮದ್ಯದಂಗಡಿ ತೆರೆಯುವುದಿಲ್ಲ ಎಂದು ಅವರು …

Read More »

ಪೊಲೀಸ್ ವರಿಷ್ಠಾಧಿಕಾರಿ-ಅಪರ ಜಿಲ್ಲಾಧಿಕಾರಿ ನಗರ ಸಂಚಾರ

ಹಾವೇರಿ:  ಹಸಿರು ವಲಯದಲ್ಲಿರುವ ಹಾವೇರಿ ಜಿಲ್ಲೆಯಲ್ಲಿ ಆಯ್ದ ಆರ್ಥಿಕ ಚಟುವಟಿಕೆಗೆ ಅನುಮತಿ ನೀಡಲಾಗಿದೆ. ಬಟ್ಟೆ-ಬಂಗಾರ ಮಾರಾಟದ ಅಂಗಡಿಗಳಿಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಈ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗಿದೆಯೇ ಹಾಗೂ ನಿಯಮ ಪಾಲಿಸಲಾಗತ್ತಿದೆಯೇ ಎಂಬುದನ್ನು ಪರಿಶೀಲಿಸಲು ಇಂದು ಪೊಲೀಸ್ ಹಾಗೂ ಕಂದಾಯ ಅಧಿಕಾರಿಗಳು ನಗರ ಸಂಚಾರ ಕೈಗೊಂಡು ಜಾಗೃತಿ ಮೂಡಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ, ಅಪರ ಜಿಲ್ಲಾಧಿಕಾರಿ ಎಸ್. ಯೋಗೇಶ್ವರ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, …

Read More »

ಬಾಳೇಕುಂದ್ರಿ ಗ್ರಾಮದಲ್ಲಿ ಕನ್ನಡ ಸೇನೆ ವತಿಯಿಂದ ನಿರಾಶ್ರಿತರು, ಕೂಲಿ ಕಾರ್ಮಿಕರು ಮತ್ತು ಬಡ ಕುಟುಂಬಗಳಿಗೆ ಕಾಯಿಪಲ್ಯೆ,ಮತ್ತು ರೇಷನ ಕಿಟ್ ವಿತರಣೆ.

ಬೆಳಗಾವಿಯ ಗ್ರಾಮೀಣ ಕ್ಷೇತ್ರದ ಬಾಳೇಕುಂದ್ರಿ ಗ್ರಾಮದಲ್ಲಿ ಕನ್ನಡ ಸೇನೆ ವತಿಯಿಂದ ನಿರಾಶ್ರಿತರು, ಕೂಲಿ ಕಾರ್ಮಿಕರು ಮತ್ತು ಬಡ ಕುಟುಂಬಗಳಿಗೆ ಕಾಯಿಪಲ್ಯೆ,ಮತ್ತು ರೇಷನ ಕಿಟ್ ವಿತರಣೆ. ದೇಶಾದ್ಯಂತ ಮಹಾಮಾರಿ ಕೊರೋನ ಸೋಂಕು ಹರಡಿರುವ ತಡೆಗಟ್ಟುವ ಸಲುವಾಗಿ ಲಾಕ್ ಡೌನ್ ಆದ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ ನಿರಾಶ್ರಿತರು, ಕೂಲಿ ಕಾರ್ಮಿಕರು, ಬಡ ಕುಟುಂಬಗಳು ತೊಂದರೆ ಗೀಡಾಗಿದ್ದರಿಂದ ದಿನ ಬಳಕೆಗೆ ಬೇಕಾದ ಅಗತ್ಯ ವಸ್ತುಗಳನ್ನು ಖರೀದಿಸಲು ಪರದಾಡುವಂತಾಗಿದೆ. ನೆರವಿಗೆ ನಿಂತ ಕನ್ನಡ ಸೇನೆ ಜಿಲ್ಲಾಧ್ಯಕ್ಷರಾದ …

Read More »

ಕೋವಿಡ್-೧೯: ಇಬ್ಬರು ಮಹಿಳೆಯರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಳಗಾವಿ, ಏ.30(ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ ಇಬ್ಬರು ಮಹಿಳೆಯರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ಅವರು ತಿಳಿಸಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಯಬಾಗ ತಾಲ್ಲೂಕಿನ ಕುಡಚಿಯ 67 ವರ್ಷದ (ಪಿ-149) ಮತ್ತು 36 ವರ್ಷದ(ಪಿ-147) ಅವರನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿರುತ್ತದೆ. ಇವರು ಕ್ರಮವಾಗಿ ಏ.1 ಹಾಗೂ ಮಾ.31 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜಿಲ್ಲೆಯಲ್ಲಿ …

Read More »

ಶ್ರೀಕಂಠೇಗೌಡ ಮತ್ತೆ ಉದ್ಧಟತನ – ತಪ್ಪು ಒಪ್ಪಿಕೊಳ್ಳದೇ ಪತ್ರಕರ್ತರ ವಿರುದ್ಧವೇ ದೂರು

ಮಂಡ್ಯ: ಜೆಡಿಎಸ್ ಎಂಎಲ್‍ಸಿ ಕೆ.ಟಿ.ಶ್ರೀಕಂಠೇಗೌಡ ಗೂಡಾಂಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪು ಒಪ್ಪಿಕೊಳ್ಳದೇ ಪತ್ರಕರ್ತರ ವಿರುದ್ಧವೇ ದೂರು ದಾಖಲಿಸಿದ್ದಾರೆ. ಎಂಎಲ್‍ಸಿ ಕೆ.ಟಿ.ಶ್ರೀಕಂಠೇಗೌಡ ಹಾಗೂ ಪುತ್ರ ನಾಲ್ವರು ಪತ್ರಕರ್ತರ ವಿರುದ್ಧ ದೂರು ದಾಖಲಿಸಿದ್ದಾರೆ. ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಭಾನುವಾರ ಪತ್ರಕರ್ತರಿಗೆ ಕೋವಿಡ್ ಟೆಸ್ಟ್ ಮಾಡಲಾಗುತ್ತಿತ್ತು. ಈ ವೇಳೆ ಎಂಎಲ್‍ಸಿ ಕೆ.ಟಿ.ಶ್ರೀಕಂಠೇಗೌಡ ಹಾಗೂ ಪುತ್ರ ಬಂದು ಇಲ್ಲಿ ಕೋವಿಡ್ ಟೆಸ್ಟ್ ಮಾಡಬಾರದು ಎಂದು ಗಲಾಟೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶ್ರೀಕಂಠೇಗೌಡರಿಂದ ನಾಲ್ವರು …

Read More »

ಬೆಳಗಾವಿ ಇಂದು ಬೆಳಗಾವಿ ಯಲ್ಲಿ ಮತ್ತೆ 14ಪಾಸಿಟಿವ್

ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಕೋರೊನಾ ಸೋಂಕು *ಗಡಿನಾಡು ಬೆಳಗಾವಿ ಹೆಬ್ಬಾಗಿಲಲ್ಲಿ ಕೋರೊನಾ ಮೃದಂಗ* *ಬೆಳಗಾವಿಯಲ್ಲಿ ಇಂದು ಇಂದು ಒಂದೇ ದಿನ ಪತ್ತೆಯಾದ 14 ಕೋರೊನಾ ಪ್ರಕರಣ* ಕುಂದಾನಗರಿಗೆ ಮತ್ತೆ ಕಂಟಕವಾದ ಕಿಲ್ಲರ್ ಕೋರೊನಾ ವೈರಸ್ *ಬೆಳಗಾವಿ ಜಿಲ್ಲೆಯಲ್ಲಿ ಹತೋಟಿಗೆ ಬರುತ್ತಿಲ್ಲ ಕೋರೊನಾ* *ಹಿರೇಬಾಗೇವಾಡಿಯಲ್ಲಿ 11 ಹಾಗೂ ಸಂಕೇಶ್ವರದಲ್ಲಿ 3 ಕೋರೊನಾ ಪಾಸಿಟಿವ್ ಕೇಸ್* .

Read More »