Breaking News
Home / Laxminews 24x7 (page 49)

Laxminews 24x7

ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ ಯಾದಗಿರಿ: ನೇಹಾ ಹತ್ಯೆ ಪ್ರಕರಣದ ಬೆನ್ನಲ್ಲೇ ಮತ್ತೊಬ್ಬ ಫಯಾಜ್ ಎಂಬಾತ ಯಾದಗಿರಿ ನಗರದಲ್ಲಿ ದಲಿತ ಯುವಕನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಯಾದಗಿರಿ ನಗರದ ಶಹಾಪುರಪೇಟೆಯ ಯುವಕ ರಾಕೇಶ್ (22) ಮೃತಪಟ್ಟ ಯುವಕ. ರವಿವಾರ ರಾತ್ರಿ ರಾಕೇಶ್ ರೊಟ್ಟಿ ಕೇಳಿದಕ್ಕೆ ನಡೆದ ಮಾತಿನ ಚಕಮಕಿಯಿಂದಾಗಿ ಫಯಾಜ್ ರಾಕೇಶನ ಮನೆಗೆ ನುಗ್ಗಿ ಮಲಗಿದ್ದ ಯುವಕನ ಗುಪ್ತಾಂಗಕ್ಕೆ ಒದ್ದು ಕೊಲೆ ಮಾಡಿದ್ದಾನೆ. ಪ್ರತಿ …

Read More »

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ರೈಲ್ವೆ ಇಲಾಖೆಯಲ್ಲಿ 8,000 ಕ್ಕೂ ಹೆಚ್ಚು `TTE’ ಹುದ್ದೆಗಳ ನೇಮಕಾತಿ

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ರೈಲ್ವೆ ಇಲಾಖೆ ಸಿಹಿಸುದ್ದಿ ನೀಡಿದೆ. ರೈಲ್ವೆ ನೇಮಕಾತಿ ಮಂಡಳಿ ಹೆಚ್ಚಿನ ಸಂಖ್ಯೆಯ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿದೆ. ರೈಲ್ವೆ ನೇಮಕಾತಿ ಮಂಡಳಿ (ಆರ್‌ಆರ್ಬಿ) 8,000 ಕ್ಕೂ ಹೆಚ್ಚು ಪ್ರಯಾಣ ಟಿಕೆಟ್ ಪರೀಕ್ಷಕ (ಟಿಟಿಇ) ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ.   ಆದಾಗ್ಯೂ, ಅರ್ಜಿಯ ದಿನಾಂಕವನ್ನು ಘೋಷಿಸಲಾಗಿಲ್ಲ. ಇದು ಮೇ ತಿಂಗಳಿನಿಂದ ಸಾಧ್ಯವಿತ್ತು ಆದರೆ ಲೋಕಸಭಾ ಚುನಾವಣಾ ನೀತಿ ಸಂಹಿತೆಯಿಂದಾಗಿ ವಿಳಂಬವಾಗುವ ಸಾಧ್ಯತೆಯಿದೆ. ಆಸಕ್ತ ಅಭ್ಯರ್ಥಿಗಳು …

Read More »

ಸೌಜನ್ಯಾ ಅತ್ಯಾಚಾರ – ಕೊಲೆ ಪ್ರಕರಣ; ಪೋಸ್ಟ್‌ ಮಾರ್ಟಂ ಮಾಡಿದ್ದ ವೈದ್ಯ ಡಾ. ಆದಂ ವಿಧಿವಶ

ಸೌಜನ್ಯಾ ಅತ್ಯಾಚಾರ – ಕೊಲೆ ಪ್ರಕರಣ; ಪೋಸ್ಟ್‌ ಮಾರ್ಟಂ ಮಾಡಿದ್ದ ವೈದ್ಯ ಡಾ. ಆದಂ ವಿಧಿವಶ ಧರ್ಮಸ್ಥಳದ ಸೌಜನ್ಯ ಹತ್ಯಾ ಪ್ರಕರಣದ ಪ್ರಮುಖ ಸಾಕ್ಷಿಗಳಲ್ಲಿ ಒಬ್ಬರು ದಿಡೀರ್ ಆಗಿ ಮರಣ ಹೊಂದಿದ್ದಾರೆ. ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ, ಈ ಇಡೀ ಪ್ರಕರಣವನ್ನು ಮುಚ್ಚಿ ಹಾಕಿದ್ದಾರೆ ಎನ್ನಲಾದ ಬಹು ಮುಖ್ಯ ಸಾಕ್ಷಿಗಳಲ್ಲಿ ಒಂದಾದ ಡಾ.ಅದಂ ನಿಧನರಾಗಿದ್ದಾರೆಡಾಕ್ಟರ್ ಆದಮ್ ಅವರು ಇದೀಗ ಮರಣ ಹೊಂದಿದ್ದಾರೆ. ಡಾಕ್ಟರ್ ಆದಮ್ ಅವರಿಗೆ ಬ್ರೈನ್ …

Read More »

ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್‌ಗೆ ಜಾಮೀನು ಕೋರಿ ಸಲ್ಲಿಸಿದ್ದ ಪಿಐಎಲ್ ತಿರಸ್ಕೃತ, ಅರ್ಜಿದಾರನಿಗೆ 75,000 ರೂ ದಂಡ!

ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್‌ಗೆ ಜಾಮೀನು ಕೋರಿ ಸಲ್ಲಿಸಿದ್ದ ಪಿಐಎಲ್ ತಿರಸ್ಕೃತ, ಅರ್ಜಿದಾರನಿಗೆ 75,000 ರೂ ದಂಡ! ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿಯಿಂದ ಬಂಧಿತರಾಗಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನುನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ನ್ನು ದೆಹಲಿ ಹೈಕೋರ್ಟ್‌ ಸೋಮವಾರ ತಿರಸ್ಕರಿಸಿದ್ದು, ಅರ್ಜಿದಾರನಿಗೆ 75,000 ರೂಪಾಯಿ ದಂಡ ವಿಧಿಸಿದೆ. ದೆಹಲಿ ಸಿಎಂ ಅವರ ಅಧಿಕಾರಾವಧಿ ಮುಗಿಯುವವರೆಗೆ ಅಥವಾ …

Read More »

ಲೈಂಗಿಕ ದೌರ್ಜನ್ಯಕ್ಕೊಳಗಾದ 14 ವರ್ಷದ ಬಾಲಕಿಗೆ ಗರ್ಭಪಾತ ಮಾಡಲು ಸುಪ್ರೀಂ ಕೋರ್ಟ್ ಅನುಮತಿ!

ನವದೆಹಲಿ: ತನ್ನ 14 ವರ್ಷದ ಮಗಳ 28 ವಾರಗಳ ಗರ್ಭಧಾರಣೆಯನ್ನು ಕೊನೆಗೊಳಿಸುವಂತೆ ಕೋರಿ ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆಯ ತಾಯಿ ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್ ಸೋಮವಾರ ಅನುಮತಿ ನೀಡಿದೆ. ಗರ್ಭಪಾತದ ಮನವಿಯನ್ನು ತಿರಸ್ಕರಿಸಿದ ಬಾಂಬೆ ಹೈಕೋರ್ಟ್ ಆದೇಶವು ಅಪ್ರಾಪ್ತೆಯ ಮೇಲೆ ಗರ್ಭಧಾರಣೆಯ ಪರಿಣಾಮವನ್ನು ಪರಿಗಣಿಸುವುದಿಲ್ಲ ಎಂದು ನ್ಯಾಯಾಲಯ ಗಮನಿಸಿದೆ.   ಮುಂದುವರಿದ ಹಂತದಲ್ಲಿ ಗರ್ಭಧಾರಣೆಯನ್ನು ಕೊನೆಗೊಳಿಸುವುದರಿಂದ ಸಂಪೂರ್ಣವಾಗಿ ಅಭಿವೃದ್ಧಿ ಹೊಂದಿದ ಭ್ರೂಣದ ಜನನಕ್ಕೆ ಕಾರಣವಾಗುತ್ತದೆ ಎಂದು ಹೇಳಿ ಗರ್ಭಧಾರಣೆಯನ್ನು ಕೊನೆಗೊಳಿಸಬೇಕೆಂಬ …

Read More »

ನೇಹಾ ಹತ್ಯೆ: ಸರ್ಕಾರ ಪ್ರಕರಣವನ್ನು ತನ್ನದೇ ರೀತಿಯಲ್ಲಿ ನಿಭಾಯಿಸುತ್ತದೆ; ಡಿ.ಕೆ .ಶಿ.

ಬೆಂಗಳೂರು: ಹುಬ್ಬಳ್ಳಿಯ ನೇಹಾ ಹತ್ಯೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳದ (ಸಿಬಿಐ) ತನಿಖೆಗೆ ವಹಿಸುವುದಕ್ಕೆ ತಮ್ಮ ಸರ್ಕಾರಕ್ಕೆ ಯಾವುದೇ ಅಭ್ಯಂತರವಿಲ್ಲ. ಆದರೆ, ತಮ್ಮ ಸರ್ಕಾರ ಪ್ರಕರಣವನ್ನು ತನ್ನದೇ ಆದ ರೀತಿಯಲ್ಲಿ ನಿಭಾಯಿಸುತ್ತದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಹೇಳಿದ್ದಾರೆ. ಕಳೆದ ವಾರ ಬಿವಿಬಿ ಕಾಲೇಜಿನ ಕ್ಯಾಂಪಸ್‌ನಲ್ಲಿ ಚಾಕುವಿನಿಂದ ಇರಿದು ಕೊಲ್ಲಲ್ಪಟ್ಟ ಕಾಂಗ್ರೆಸ್ ಕೌನ್ಸಿಲರ್‌ನ ಮಗಳು ನೇಹಾ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಬಿಜೆಪಿ ಒತ್ತಾಯಿಸಿದ್ದು, ಪೊಲೀಸರು ಪ್ರಕರಣವನ್ನು …

Read More »

BJPಯವರಿಗೆ ಚುನಾವಣೆ ಬಳಿಕ ನೇಹಾ ಯಾರು ಎಂಬುದೇ ಗೊತ್ತಿರುವುದಿಲ್ಲ: ಹೆಬ್ಬಾಳ್ಕರ್

ಬೆಳಗಾವಿ : ಹುಬ್ಬಳ್ಳಿಯ ಕಾಲೇಜಿನಲ್ಲಿ ಕೊಲೆಯಾದ ನೇಹಾ ಪ್ರಕರಣದಲ್ಲಿ ಬಿಜೆಪಿ ನಾಯಕರು ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ. ಈ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಅವರಿಗೆ ನೇಹಾ ಯಾರು ಎಂಬುದೇ ಗೊತ್ತಿರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಆಕ್ರೋಶ ಹೊರ ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರು ಇದರಲ್ಲೂ ರಾಜಕೀಯ ಮಾಡಲು ಮುಂದಾಗಿರುವುದು ತುಂಬಾ ನಾಚಿಗೇಡಿತನದ ಸಂಗತಿ. ಬಿಜೆಪಿಯವರು ಜಾಣ ಕುರುಡರಷ್ಟೇ ಅಲ್ಲ ಜಾಣ ಕಿವುಡರು ಹೌದು. ಅವರು ಬೇಕಾದಾಗ …

Read More »

ಐಎನ್‌ಡಿಐಎಯ ಅರ್ಧದಷ್ಟು ನಾಯಕರು ಜೈಲಿನಲ್ಲಿ: ನಡ್ಡಾ

ಹುಬ್ಬಳ್ಳಿ: ಭ್ರಷ್ಟಚಾರಿಗಳು ಹಾಗೂ ಪರಿವಾರವಾದಿಗಳ ಸಮ್ಮಿಲ ನವೇ ಐಎನ್‌ಡಿಐಎ ಮೈತ್ರಿಕೂಟ ವಾಗಿದೆ. ಭ್ರಷ್ಟಾಚಾರಿಗಳ ರಕ್ಷಣೆಯೇ ಮೈತ್ರಿಕೂಟದ ಮುಖ್ಯ ಅಜೆಂಡಾ ಆಗಿದೆ. ಮೈತ್ರಿಕೂಟದೊಂದಿಗೆ ಇರುವವರಲ್ಲಿ ಅರ್ಧ ಜನ ಜಾಮೀನಿನಲ್ಲಿದ್ದರೆ, ಇನ್ನರ್ಧಷ್ಟು ಜನ ಜೈಲಿನಲ್ಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವ್ಯಂಗ್ಯವಾಡಿದರು. ಇಲ್ಲಿನ ಖಾಸಗಿ ಹೊಟೇಲ್‌ನಲ್ಲಿ ರವಿವಾರ ಸಂಜೆ ವಿವಿಧ ಸಮಾಜಗಳ ಪ್ರಮುಖರು, ಕೇಂದ್ರ ಸರಕಾರದ ಹಲವು ಯೋಜನೆಗಳ ಫಲಾನುಭವಿಗಳ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರ ಇದ್ದಾಗ ಹಗರಣಗಳನ್ನು ನಡೆಸಿ, ಭ್ರಷ್ಟಾಚಾರದಲ್ಲಿ …

Read More »

ಸರಕಾರದಿಂದ ತುಘಲಕ್‌ ದರ್ಬಾರ್‌: ಬಿಎಸ್‌ವೈ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ಕಾಂಗ್ರೆಸ್‌ ಸರಕಾರದಿಂದ ತುಘಲಕ್‌ ದರ್ಬಾರ್‌ ನಡೆಯುತ್ತಿದೆ ಎಂದು ಮಾಜಿಮುಖ್ಯಮಂತ್ರಿ ಯಡಿಯೂರಪ್ಪ ಆರೋಪಿಸಿದ್ದಾರೆ. ಜನರು ಬದುಕಿನ ಬಗ್ಗೆ ಗ್ಯಾರಂಟಿ ಕಳೆದುಕೊಂಡಿದ್ದಾರೆ. ಈ ಸರಕಾರದಲ್ಲಿ ಶಾಂತಿ, ನೀರು, ಮಹಿಳೆಯರ ಮಾನಪ್ರಾಣ, ರೈತರ ಬದುಕು, ಭಾವನೆ ಯಾವುದಕ್ಕೂ ಗ್ಯಾರಂಟಿ ಇಲ್ಲದಂತಾಗಿದೆ. ಗಲಭೆಕೋರರು, ಭಯೋತ್ಪಾದಕರಿಗೆ ರಕ್ಷಣೆಯ ಗ್ಯಾರಂಟಿ ಸಿಗುತ್ತಿದೆ. ವಿದ್ಯುತ್‌ ದರ ಏರಿಕೆಯ ಗ್ಯಾರಂಟಿ, ವಿವಿಧ ತೆರಿಗೆ ಹೆಚ್ಚಳದ ಗ್ಯಾರಂಟಿ ನೀಡುತ್ತಿದೆ ಎಂದು ದೂರಿದರು. ರವಿವಾರ ರಾಜ್ಯ ಬಿಜೆಪಿ ಮಾಧ್ಯಮ …

Read More »

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

ಬೆಂಗಳೂರು: ಸಿನೆಮಾ ಚಿತ್ರೀಕರಣದ ವೇಳೆ ನಟ ಶ್ರೀಮುರಳಿ ಕಾಲಿಗೆ ಪೆಟ್ಟಾ ಗಿದ್ದು, ಅವರನ್ನು ಮೈಸೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುರಳಿ ನಾಯಕರಾಗಿರುವ “ಬಘೀರ’ ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದ್ದು, ಸಾಹಸ ದೃಶ್ಯಗಳ ಚಿತ್ರೀಕರಣ ಸಂದರ್ಭ ಗಾಯವಾಗಿದೆ.

Read More »