Breaking News

Laxminews 24x7

ನನ್ನ ಮನೆಯ ಬಳಿ ಮಹಜರು ನಾಟಕ – ಚುನಾವಣಾ ಆಯೋಗದ ವಿರುದ್ಧ ಪ್ರಕಾಶ್‌ ರಾಜ್‌ ಕಿಡಿ

ಬೆಂಗಳೂರು: ಮತದಾರರ ಪಟ್ಟಿಯಲ್ಲಿ ತನ್ನ ಹೆಸರು ಕೈ ಬಿಟ್ಟಿದ್ದಕ್ಕೆ ಎರಡನೇ ವಿಡಿಯೋ ಮಾಡಿ ಚುನಾವಣಾ ಆಯೋಗದವಿರುದ್ಧ ನಟ ಪ್ರಕಾಶ್‌ ರಾಜ್‌ ಕಿಡಿಕಾರಿ ಹಲವು ಪ್ರಶ್ನೆ ಕೇಳಿದ್ದಾರೆ. ವಿಡಿಯೋದಲ್ಲಿ ಏನಿದೆ? ನಿಮ್ಮ ವೆಬ್‌ಸೈಟ್‌ನಲ್ಲಿ ನನ್ನ ಮತದಾರರ ಗುರುತಿನ ಚೀಟಿ  ಖಾಯಂ ಆಗಿ ವರ್ಗಾವಣೆಯಾಗಿದೆ ಹಾಗಾಗಿ ಫಾರ್ಮ್ 6 ಭರ್ತಿ ಮಾಡಿ ಹೊಸ ಐಡಿಗೆ ಅರ್ಜಿ ಸಲ್ಲಿಸಿ ಎಂದು ತೋರಿಸಿದ್ದು ನಿಜವಲ್ಲವೇ? ಈ ವಿಷಯವನ್ನು ನಾನು ಪ್ರಸ್ತಾಪಿಸಿ ಲಕ್ಷಾಂತರ ಜನರಿಗೆ ತಲುಪಿದ ಕೆಲವೇ …

Read More »

ಸೌಜನ್ಯ ರೇಪ್ & ಮರ್ಡರ್ ಕೇಸ್ – ಸುಪ್ರೀಂ ಕೋರ್ಟ್‌ನಲ್ಲಿ ಸಂತೋಷ್ ರಾವ್‌ಗೆ ಹಿನ್ನಡೆ

ನವದೆಹಲಿ: ಧರ್ಮಸ್ಥಳದಲ್ಲಿ  ಗ್ರಾಮ ಸಮೀಪದ ಪಾಂಗಳದಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಯಾಗಿದ್ದ ಸಂತೋಷ್‌ ರಾವ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ  ಮತ್ತೆ ಹಿನ್ನಡೆಯಾಗಿದೆ. ಪರಿಹಾರ ಧನಕ್ಕಾಗಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂ ಕೋರ್ಟ್‌ನ ನ್ಯಾ. ಸಂಜಯ್ ಕುಮಾರ್ ನೇತೃತ್ವದ ದ್ವಿ ಸದಸ್ಯ ಪೀಠ ವಜಾಗೊಳಿಸಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸಂಜಯ್ ಕುಮಾರ್ ಹಾಗೂ ನ್ಯಾ. ಸಂಜೀವ್ ಸಚ್‌ದೇವ ಅವರನ್ನೊಳಗೊಂಡ ದ್ವಿಸದಸ್ಯ …

Read More »

ತಾನು ಭಾಷಣ ಮಾಡಿದ ಜಾಗದಲ್ಲಿ ಶುದ್ಧೀಕರಣ ಹೋಮ – ದೇಶದಲ್ಲಿ ದಲಿತರಿಗೆ ಜಾಗವಿಲ್ಲ ಎಂದು ಖರ್ಗೆ ಕಿಡಿ

ನವದೆಹಲಿ: ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರ‍್ಯಾಲಿ ನಡೆಸಿದ ಬಳಿಕ ನಡೆದ ‘ಶುದ್ಧೀಕರಣ’ ಹೋಮ ಇದೀಗ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಆಗಸ್ಟ್ 8ರಂದು ಖರ್ಗೆ ರ‍್ಯಾಲಿ ನಡೆಸಿದ್ದ ಸ್ಥಳದಲ್ಲಿ ಆಗಸ್ಟ್ 10ರಂದು ಶ್ರೀರಾಮ ಸೇನಾ ಧರ್ಮಾರ್ಥ ಸೇವಾ ನ್ಯಾಸ್ ಸಂಘಟನೆಯಿಂದ ಶುದ್ಧೀಕರಣ ಹೋಮ ನಡೆಸಲಾಗಿತ್ತು. ಈ ಘಟನೆಗೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಖರ್ಗೆ ದಲಿತ ಸಮುದಾಯಕ್ಕೆ ಸೇರಿದವರಾಗಿರುವ ಕಾರಣಕ್ಕೆ ಈ ರೀತಿ ಮಾಡಲಾಗಿದೆ …

Read More »

ಕರ್ನಾಟಕ ಬಂದ್‌ ಹಿಂಪಡೆದ ಎಲ್ಲಾ ಸಂಘಟನೆಗಳಿಗೆ ಸಿಎಂ ಡಿಕೆಶಿ ಕೃತಜ್ಞತೆ

ಬೆಂಗಳೂರು: ʻರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳುʼ ಎಂದು ಸಿಎಂ ಡಿ.ಕೆ ಶಿವಕುಮಾರ್  ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರಿಂದು ಪ್ರತಿಕ್ರಿಯೆ ನೀಡಿದರು. ಸಂಘಟನೆಗಳು ಕರೆ ನೀಡಿದ್ದ ಬಂದ್  ಹಿಂಪಡೆದ ಬಗ್ಗೆ ಮಾತನಾಡಿದರು. ಎಲ್ಲಾ ಕನ್ನಡಪರ ಸಂಘಟನೆಗಳ ಮುಖಂಡರು ತಮ್ಮನ್ನು ಭೇಟಿ ಮಾಡಿ ಬಂದ್ ಹಿಂಪಡೆದಿರುವ ಬಗ್ಗೆ ಮಾಹಿತಿ ನೀಡಿದರು. ʻರಾಜ್ಯದ ಜನರ ಹಿತ ಹಾಗೂ ರೈತರ ಕಲ್ಯಾಣಕ್ಕೆ ಸಂಬಂಧಿಸಿದಂತೆ ಅವರು ಕೆಲವು ಬೇಡಿಕೆ …

Read More »

ಹೋಟೆಲ್ ಬಳಿಕ ಈಗ ಹಾಸ್ಟೆಲ್, ಪಿಜಿಗಳ ಸರದಿ – ಫುಡ್ ಟೆಸ್ಟ್‌ಗೆ ಖಾದರ್ ಸೂಚನೆ

ಬೆಂಗಳೂರು: ಹೋಟೆಲ್ ರೇಡ್ ಬಳಿಕ ಇದೀಗ ಹಾಸ್ಟೆಲ್‌ಗಳಲ್ಲಿ ಆಹಾರ ತಪಾಸಣೆಗೆ ಆರೋಗ್ಯ ಸಚಿವ ಯುಟಿ ಖಾದರ್  ಅವರು ಸೂಚನೆ ನೀಡಿದ್ದಾರೆ. ಆರೋಗ್ಯ ಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರಿ ಹಾಸ್ಟೆಲ್‌ಗಳು, ಖಾಸಗಿ ಹಾಸ್ಟೆಲ್‌ಗಳು ಮತ್ತು ಸಹಕಾರಿ ಹಾಸ್ಟೆಲ್‌ಗಳಲ್ಲಿನ ಆಹಾರ ತಪಾಸಣೆ ಮಾಡಲಾಗುವುದು. ಈ ವೇಳೆ ಆಹಾರ ಗುಣಮಟ್ಟ, ಸ್ವಚ್ಛತೆ ಮತ್ತು ಆಹಾರ ಪದಾರ್ಥಗಳ ಸಂಗ್ರಹಣೆ ಬಗ್ಗೆ ತಪಾಸಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಪಿಜಿಗಳಲ್ಲಿಯೂ ಕೂಡ ಟೆಸ್ಟ್ ಮಾಡಿಸುತ್ತೇವೆ. ಎಲ್ಲಾ ಕಡೆಯ …

Read More »

ತಮಿಳುನಾಡು ಬಸ್‌ಗಳಿಗೆ ತಾತ್ಕಾಲಿಕ ತಡೆ ತೆರವು; ಬೆಂಗಳೂರಿನಲ್ಲಿ ಎಂದಿನಂತೆ ಸಂಚಾರ

ಬೆಂಗಳೂರು: ಕರ್ನಾಟಕ ಬಂದ್  ಹಿನ್ನೆಲೆ ತಮಿಳುನಾಡಿನಿಂದ ಬೆಂಗಳೂರಿಗೆ ಬರುವ ಹಾಗೂ ಇಲ್ಲಿಂದ ತಮಿಳುನಾಡಿಗೆ ತೆರಳುವ ಬಸ್‌ಗಳ ಸಂಚಾರಕ್ಕೆ ಪೊಲೀಸರು ನೀಡಿದ್ದ ತಾತ್ಕಾಲಿಕ ತಡೆಯನ್ನು ತೆರವುಗೊಳಿಸಿದ್ದಾರೆ. ಸದ್ಯ ಬೆಂಗಳೂರಿನಲ್ಲಿ ಯಾವುದೇ ಬಂದ್ ವಾತಾವರಣ ಇಲ್ಲದ ಹಿನ್ನೆಲೆಯಲ್ಲಿ ತಮಿಳುನಾಡು ಬಸ್‌ಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಬಂದ್‌ನ ಸ್ವರೂಪ ನೋಡಿಕೊಂಡು ಬಸ್‌ಗಳ ಸಂಚಾರದ ಬಗ್ಗೆ ನಿರ್ಧಾರ ಕೈಗೊಳ್ಳಲು ಪೊಲೀಸರು ಪ್ಲಾನ್ ಮಾಡಿಕೊಂಡಿದ್ದರು. ಆದರೆ, ಸದ್ಯ ಪರಿಸ್ಥಿತಿ ಸಹಜವಾಗಿರುವುದರಿಂದ ಎಂದಿನಂತೆ ಬಸ್‌ಗಳನ್ನು ಓಡಿಸಲು ಸೂಚಿಸಲಾಗಿದೆ. ತಮಿಳುನಾಡು …

Read More »

52 ದಿನಗಳ ಜೈಲುವಾಸದ ಬಳಿಕ ಜೆಡಿಎಸ್‌ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಬಿಡುಗಡೆ

ಹಾಸನ: ಬಗರ್ ಹುಕುಂ ಭೂ ಮಂಜೂರಾತಿ ಯೋಜನೆಯಲ್ಲಿ ಅಕ್ರಮ ಎಸಗಿದ್ದಾರೆಂಬ ಆರೋಪದಡಿ ಸಿಐಡಿ  ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಬೇಲೂರು ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕ ಕೆ.ಎಸ್. ಲಿಂಗೇಶ್  ಅವರಿಗೆ ಕೊನೆಗೂ ಜಾಮೀನು ಮಂಜೂರಾಗಿದ್ದು, 52 ದಿನಗಳ ಜೈಲುವಾಸದ ಬಳಿಕ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಮಂಗಳವಾರ ನ್ಯಾಯಾಲಯವು ಜಾಮೀನುಮಂಜೂರು ಮಾಡಿದ್ದು, ಬುಧವಾರ ರಾತ್ರಿ ಅಗತ್ಯ ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ಅವರು ಕಾರಾಗೃಹದಿಂದ ಹೊರಬಂದರು. ಮಾಜಿ ಶಾಸಕರು ಜೈಲಿನಿಂದ ಹೊರಬರುತ್ತಿದ್ದಂತೆಯೇ ಹೊರಗಡೆ ನೆರೆದಿದ್ದ ನೂರಾರು …

Read More »

ಡ್ರೈವಿಂಗ್ ಅಭ್ಯಾಸದ ವೇಳೆ ಕೆರೆಗೆ ಬಿದ್ದ ಕಾರು – 42 ವರ್ಷದ ಮಹಿಳೆ ಸಾವು

ಕೋಲ್ಕತ್ತಾ: ಕಾರು ಡ್ರೈವಿಂಗ್  ಅಭ್ಯಾಸ ಮಾಡುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡ ಕಾರೊಂದು ಕೆರೆಗೆ ಉರುಳಿದ ಪರಿಣಾಮ 42 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ಕೆಸ್ತೋಪುರದ ಪ್ರಫುಲ್ಲ ಕಾನನ್ (ಪಶ್ಚಿಮ) ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಮೃತ ಮಹಿಳೆಯನ್ನು ಸುಮಿತ್ರಾ ದಾಸ್ ಎಂದು ಗುರುತಿಸಲಾಗಿದೆ. ಸ್ಥಳೀಯರ ಮಾಹಿತಿ ಪ್ರಕಾರ, ಸುಮಿತ್ರಾ ಅವರು ತಮ್ಮ ಮಗಳನ್ನು ಸ್ಕೂಟರ್‌ನಲ್ಲಿ ಶಾಲೆಗೆ ಬಿಟ್ಟು ಮನೆಗೆ ವಾಪಸ್ ಆಗಿದ್ದರು. ಮನೆಗೆ ಬಂದ ಬಳಿಕ …

Read More »

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ

ಬೀದರ್: ತೆಲಂಗಾಣದಲ್ಲಿ  ಸಂಭವಿಸಿದ ಅಫಘಾತದಲ್ಲಿ ಮೃತರಾದ ಬೀದರ್‌ ಮೂಲದ ಆರು ಜನರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಕೂಲಿಗೆ ಹೋದವರು ಆರು ಜನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸರ್ಕಾರ ಅವರ ಕುಟುಂಬದ ಜೊತೆ ಇದ್ದು, ಪರಿಹಾರ ನೀಡತ್ತಿದೆ. ಮೃತರಾದ ಎಲ್ಲರ ಆತ್ಮಕ್ಕೆ ಶಾಂತಿ ನೀಡಲಿ. ಈಗಾಗಲೇ ಸಿಎಂ ಜೊತೆ ಮಾತನಾಡಿದ್ದು, ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ನೀಡುತ್ತೇವೆ. ಮೃತ ಆರು …

Read More »

ಭೀಷ್ಮ ಕೆರೆಯಲ್ಲಿ ಮೀನುಗಳ ಮಾರಣಹೋಮ; ವಿಷ ಬೆರೆತ ಅನುಮಾನ

ಗದಗ: ನಗರದ ಹೃದಯ ಭಾಗದಲ್ಲಿರುವ (Gadag) ಐತಿಹಾಸಿಕ ಭೀಷ್ಮ ಕೆರೆಯಲ್ಲಿ ರಾಶಿ ರಾಶಿ ಮೀನುಗಳು ಸತ್ತು ಬಿದ್ದಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಕೆರೆ ನೀರು ಕಲುಷಿತವಾಗಿದೆಯಾ, ಯಾರಾದರೂ ವಿಷಕಾರಿ ವಸ್ತು ಹಾಕಿದ್ದಾರಾ ಎಂಬ ಅನುಮಾನ ಇದೀಗ ವ್ಯಕ್ತವಾಗುತ್ತಿದೆ. ಮೀನುಗಳ ಸಾವಿಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಗದಗ-ಬೆಟಗೇರಿ ಅವಳಿ ನಗರದ ಪ್ರಮುಖ ಜಲಮೂಲವಾಗಿರುವ ಭೀಷ್ಮ ಕೆರೆಯ ದಡದಲ್ಲಿ ಸಾಕಷ್ಟು ಮೀನುಗಳು ಸತ್ತು ಬಿದ್ದಿರುವುದು ಕಂಡುಬಂದಿದೆ. ಪ್ರತಿದಿನ ಕೆರೆ …

Read More »