Home / Laxminews 24x7 (page 5)

Laxminews 24x7

ನೀತಿ ಸಂಹಿತೆ ಉಲ್ಲಂಘನೆ; 406.73 ಕೋಟಿ ರೂ. ಮೌಲ್ಯದ ವಸ್ತು ವಶ

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾ ಆಯೋಗ ಭಾನುವಾರ 3.27 ಕೋಟಿ ರೂ.ನಗದು ಸೇರಿದಂತೆ ಈವರೆಗೆ ಒಟ್ಟು 406.73 ಕೋಟಿ ರೂ. ವಸ್ತುಗಳನ್ನು ವಶಕ್ಕೆ ಪಡೆದಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಾದಂದಿನಿಂದ ಈವರೆಗೆ 78.75 ಕೋಟಿ ರೂ.ನಗದು, 177.39 ಕೋಟಿ ಮೌಲ್ಯದ ಮದ್ಯ, 11.24 ಕೊಟಿ ಬೆಲೆಯ ಡ್ರಗ್ಸ್, 57.67 ಕೋಟಿ ಬೆಲೆಯ ಚಿನ್ನ, 1.18 ಕೋಟಿ ಮೌಲ್ಯದ ಬೆಳ್ಳಿ, 0.09 ಕೋಟಿ ರೂ. ಬೆಲೆಯ ವಜ್ರ, …

Read More »

ಚುನಾವಣೆಗೂ ಮೊದಲೇ ಸೂರತ್‌ ನಲ್ಲಿ ಖಾತೆ ತೆರೆದ ಬಿಜೆಪಿ!

ನವದೆಹಲಿ: ಲೋಕಸಭಾ ಚುನಾವಣೆ ನಡೆಯುತ್ತಿರುವ ನಡುವೆಯೇ ಭಾರತೀಯ ಜನತಾ ಪಕ್ಷ ಗುಜರಾತ್‌ ನ ಸೂರತ್‌ ನಲ್ಲಿ ಚುನಾವಣೆಗೂ ಮುನ್ನವೇ ಖಾತೆ ತೆರೆಯುವ ಮೂಲಕ ಇತಿಹಾಸ ಸೃಷ್ಟಿಸಿದೆ. ಕಾಂಗ್ರೆಸ್‌ ಅಭ್ಯರ್ಥಿ ನಾಮಪತ್ರ ತಿರಸ್ಕೃತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಎಲ್ಲಾ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದು, ಸೂರತ್‌ ಲೋಕಸಭಾ ಬಿಜೆಪಿ ಅಭ್ಯರ್ಥಿ ಮುಕೇಶ್‌ ದಲಾಲ್‌ ಗೆಲುವು ಸಾಧಿಸಿರುವುದಾಗಿ ಘೋಷಿಸಲಾಗಿದೆ. ಕಾಂಗ್ರೆಸ್‌ ಅಭ್ಯರ್ಥಿಯ ನಾಮಪತ್ರವನ್ನು ರಿಟರ್ನಿಂಗ್‌ ಆಫೀಸರ್‌ ತಿರಸ್ಕರಿಸಿದ್ದು, ಉಳಿದ ಎಂಟು ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿರುವುದಾಗಿ ವರದಿ ತಿಳಿಸಿದೆ. …

Read More »

ನಾಮಪತ್ರ ಹಿಂದೆ ತೆಗೆದುಕೊಂಡಾಕ್ಷಣ ನನ್ನ ಧರ್ಮ ಯುದ್ಧ ನಿಂತಿಲ್ಲ: ದಿಂಗಾಲೇಶ್ವರ ಸ್ವಾಮೀಜಿ

ಹುಬ್ಬಳ್ಳಿ: ನಾಮಪತ್ರ ಹಿಂದೆ ತೆಗೆದುಕೊಂಡಾಕ್ಷಣ ನನ್ನ ಧರ್ಮ ಯುದ್ಧ ನಿಂತಿಲ್ಲ. ನಾನು ಹೋರಾಟದಿಂದ ಹಿಂದೆ ಸರಿದೆ. ನಮ್ಮ ಪೀಠದ ಹಿರಿಯ ಗುರುಗಳ ಸೂಚನೆ ಮೇರೆಗೆ ಅವರ ವಾಖ್ಯ ಪರಿಪಾಲನೆಗಾಗಿ ನಾಮಪತ್ರ ಹಿಂದೆ ಪಡೆದಿದ್ದೇನೆ ಎಂದು ಫಕೀರ ದಿಂಗಾಲೇಶ್ವರ ಸ್ವಾಮೀಜಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಮಪತ್ರ ಹಿಂಪಡೆದಿರುವುದರ ಹಿಂದೆ ಯಾವುದೇ ಯಾರದೇ ಕೈವಾಡಗಳಿಲ್ಲ. ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಮೊದಲಿನಿಂದಲೂ ಎರಡೂ ಪಕ್ಷದ ನಾಯಕರು ನನ್ನೊಂದಿಗೆ ಸುದೀರ್ಘವಾಗಿ ಮಾತನಾಡಿದರು. ಆ ನಾಯಕರಿಗೆ …

Read More »

ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

ಬೆಳಗಾವಿ: ಬೆಳಗಾವಿ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಹಾಗೂ ಅವರ ನಾಯಕರು ಸೋಲಿನ ಭಯದಿಂದ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ ಎಂದು ಬೆಳಗಾವಿಯಲ್ಲಿ ಸಂಸದೆ ಮಂಗಲಾ ಸುರೇಶ ಅಂಗಡಿ ವಾಗ್ದಾಳಿ ನಡೆಸಿದರು. ನಿನ್ನ ಮಾತಿನ ಮೇಲೆ ಹಿಡಿತ ಇರಲಿ. ಕಳೆದ 20 ವರ್ಷದಿಂದ ಬೆಳಗಾವಿ ಅಭಿವೃದ್ಧಿಯಾಗಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿರುವುದು ಸರಿಯಲ್ಲ ಎಂದು‌ ಮೃಣಾಲ್ ಗೆ ಏಕವಚನದಲ್ಲಿ ಎಚ್ಚರಿಕೆ ನೀಡಿದರು. ನಿಮ್ಮ ತಾಯಿ ರಾಜಕೀಯದಲ್ಲಿದ್ದಾರೆ. ರಾಜಕಾರಣ …

Read More »

ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ ಯಾದಗಿರಿ: ನೇಹಾ ಹತ್ಯೆ ಪ್ರಕರಣದ ಬೆನ್ನಲ್ಲೇ ಮತ್ತೊಬ್ಬ ಫಯಾಜ್ ಎಂಬಾತ ಯಾದಗಿರಿ ನಗರದಲ್ಲಿ ದಲಿತ ಯುವಕನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಯಾದಗಿರಿ ನಗರದ ಶಹಾಪುರಪೇಟೆಯ ಯುವಕ ರಾಕೇಶ್ (22) ಮೃತಪಟ್ಟ ಯುವಕ. ರವಿವಾರ ರಾತ್ರಿ ರಾಕೇಶ್ ರೊಟ್ಟಿ ಕೇಳಿದಕ್ಕೆ ನಡೆದ ಮಾತಿನ ಚಕಮಕಿಯಿಂದಾಗಿ ಫಯಾಜ್ ರಾಕೇಶನ ಮನೆಗೆ ನುಗ್ಗಿ ಮಲಗಿದ್ದ ಯುವಕನ ಗುಪ್ತಾಂಗಕ್ಕೆ ಒದ್ದು ಕೊಲೆ ಮಾಡಿದ್ದಾನೆ. ಪ್ರತಿ …

Read More »

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ರೈಲ್ವೆ ಇಲಾಖೆಯಲ್ಲಿ 8,000 ಕ್ಕೂ ಹೆಚ್ಚು `TTE’ ಹುದ್ದೆಗಳ ನೇಮಕಾತಿ

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ರೈಲ್ವೆ ಇಲಾಖೆ ಸಿಹಿಸುದ್ದಿ ನೀಡಿದೆ. ರೈಲ್ವೆ ನೇಮಕಾತಿ ಮಂಡಳಿ ಹೆಚ್ಚಿನ ಸಂಖ್ಯೆಯ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿದೆ. ರೈಲ್ವೆ ನೇಮಕಾತಿ ಮಂಡಳಿ (ಆರ್‌ಆರ್ಬಿ) 8,000 ಕ್ಕೂ ಹೆಚ್ಚು ಪ್ರಯಾಣ ಟಿಕೆಟ್ ಪರೀಕ್ಷಕ (ಟಿಟಿಇ) ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ.   ಆದಾಗ್ಯೂ, ಅರ್ಜಿಯ ದಿನಾಂಕವನ್ನು ಘೋಷಿಸಲಾಗಿಲ್ಲ. ಇದು ಮೇ ತಿಂಗಳಿನಿಂದ ಸಾಧ್ಯವಿತ್ತು ಆದರೆ ಲೋಕಸಭಾ ಚುನಾವಣಾ ನೀತಿ ಸಂಹಿತೆಯಿಂದಾಗಿ ವಿಳಂಬವಾಗುವ ಸಾಧ್ಯತೆಯಿದೆ. ಆಸಕ್ತ ಅಭ್ಯರ್ಥಿಗಳು …

Read More »

ಸೌಜನ್ಯಾ ಅತ್ಯಾಚಾರ – ಕೊಲೆ ಪ್ರಕರಣ; ಪೋಸ್ಟ್‌ ಮಾರ್ಟಂ ಮಾಡಿದ್ದ ವೈದ್ಯ ಡಾ. ಆದಂ ವಿಧಿವಶ

ಸೌಜನ್ಯಾ ಅತ್ಯಾಚಾರ – ಕೊಲೆ ಪ್ರಕರಣ; ಪೋಸ್ಟ್‌ ಮಾರ್ಟಂ ಮಾಡಿದ್ದ ವೈದ್ಯ ಡಾ. ಆದಂ ವಿಧಿವಶ ಧರ್ಮಸ್ಥಳದ ಸೌಜನ್ಯ ಹತ್ಯಾ ಪ್ರಕರಣದ ಪ್ರಮುಖ ಸಾಕ್ಷಿಗಳಲ್ಲಿ ಒಬ್ಬರು ದಿಡೀರ್ ಆಗಿ ಮರಣ ಹೊಂದಿದ್ದಾರೆ. ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ, ಈ ಇಡೀ ಪ್ರಕರಣವನ್ನು ಮುಚ್ಚಿ ಹಾಕಿದ್ದಾರೆ ಎನ್ನಲಾದ ಬಹು ಮುಖ್ಯ ಸಾಕ್ಷಿಗಳಲ್ಲಿ ಒಂದಾದ ಡಾ.ಅದಂ ನಿಧನರಾಗಿದ್ದಾರೆಡಾಕ್ಟರ್ ಆದಮ್ ಅವರು ಇದೀಗ ಮರಣ ಹೊಂದಿದ್ದಾರೆ. ಡಾಕ್ಟರ್ ಆದಮ್ ಅವರಿಗೆ ಬ್ರೈನ್ …

Read More »

ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್‌ಗೆ ಜಾಮೀನು ಕೋರಿ ಸಲ್ಲಿಸಿದ್ದ ಪಿಐಎಲ್ ತಿರಸ್ಕೃತ, ಅರ್ಜಿದಾರನಿಗೆ 75,000 ರೂ ದಂಡ!

ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್‌ಗೆ ಜಾಮೀನು ಕೋರಿ ಸಲ್ಲಿಸಿದ್ದ ಪಿಐಎಲ್ ತಿರಸ್ಕೃತ, ಅರ್ಜಿದಾರನಿಗೆ 75,000 ರೂ ದಂಡ! ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿಯಿಂದ ಬಂಧಿತರಾಗಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನುನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ನ್ನು ದೆಹಲಿ ಹೈಕೋರ್ಟ್‌ ಸೋಮವಾರ ತಿರಸ್ಕರಿಸಿದ್ದು, ಅರ್ಜಿದಾರನಿಗೆ 75,000 ರೂಪಾಯಿ ದಂಡ ವಿಧಿಸಿದೆ. ದೆಹಲಿ ಸಿಎಂ ಅವರ ಅಧಿಕಾರಾವಧಿ ಮುಗಿಯುವವರೆಗೆ ಅಥವಾ …

Read More »

ಲೈಂಗಿಕ ದೌರ್ಜನ್ಯಕ್ಕೊಳಗಾದ 14 ವರ್ಷದ ಬಾಲಕಿಗೆ ಗರ್ಭಪಾತ ಮಾಡಲು ಸುಪ್ರೀಂ ಕೋರ್ಟ್ ಅನುಮತಿ!

ನವದೆಹಲಿ: ತನ್ನ 14 ವರ್ಷದ ಮಗಳ 28 ವಾರಗಳ ಗರ್ಭಧಾರಣೆಯನ್ನು ಕೊನೆಗೊಳಿಸುವಂತೆ ಕೋರಿ ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆಯ ತಾಯಿ ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್ ಸೋಮವಾರ ಅನುಮತಿ ನೀಡಿದೆ. ಗರ್ಭಪಾತದ ಮನವಿಯನ್ನು ತಿರಸ್ಕರಿಸಿದ ಬಾಂಬೆ ಹೈಕೋರ್ಟ್ ಆದೇಶವು ಅಪ್ರಾಪ್ತೆಯ ಮೇಲೆ ಗರ್ಭಧಾರಣೆಯ ಪರಿಣಾಮವನ್ನು ಪರಿಗಣಿಸುವುದಿಲ್ಲ ಎಂದು ನ್ಯಾಯಾಲಯ ಗಮನಿಸಿದೆ.   ಮುಂದುವರಿದ ಹಂತದಲ್ಲಿ ಗರ್ಭಧಾರಣೆಯನ್ನು ಕೊನೆಗೊಳಿಸುವುದರಿಂದ ಸಂಪೂರ್ಣವಾಗಿ ಅಭಿವೃದ್ಧಿ ಹೊಂದಿದ ಭ್ರೂಣದ ಜನನಕ್ಕೆ ಕಾರಣವಾಗುತ್ತದೆ ಎಂದು ಹೇಳಿ ಗರ್ಭಧಾರಣೆಯನ್ನು ಕೊನೆಗೊಳಿಸಬೇಕೆಂಬ …

Read More »

ನೇಹಾ ಹತ್ಯೆ: ಸರ್ಕಾರ ಪ್ರಕರಣವನ್ನು ತನ್ನದೇ ರೀತಿಯಲ್ಲಿ ನಿಭಾಯಿಸುತ್ತದೆ; ಡಿ.ಕೆ .ಶಿ.

ಬೆಂಗಳೂರು: ಹುಬ್ಬಳ್ಳಿಯ ನೇಹಾ ಹತ್ಯೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳದ (ಸಿಬಿಐ) ತನಿಖೆಗೆ ವಹಿಸುವುದಕ್ಕೆ ತಮ್ಮ ಸರ್ಕಾರಕ್ಕೆ ಯಾವುದೇ ಅಭ್ಯಂತರವಿಲ್ಲ. ಆದರೆ, ತಮ್ಮ ಸರ್ಕಾರ ಪ್ರಕರಣವನ್ನು ತನ್ನದೇ ಆದ ರೀತಿಯಲ್ಲಿ ನಿಭಾಯಿಸುತ್ತದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಹೇಳಿದ್ದಾರೆ. ಕಳೆದ ವಾರ ಬಿವಿಬಿ ಕಾಲೇಜಿನ ಕ್ಯಾಂಪಸ್‌ನಲ್ಲಿ ಚಾಕುವಿನಿಂದ ಇರಿದು ಕೊಲ್ಲಲ್ಪಟ್ಟ ಕಾಂಗ್ರೆಸ್ ಕೌನ್ಸಿಲರ್‌ನ ಮಗಳು ನೇಹಾ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಬಿಜೆಪಿ ಒತ್ತಾಯಿಸಿದ್ದು, ಪೊಲೀಸರು ಪ್ರಕರಣವನ್ನು …

Read More »