Breaking News

Laxminews 24x7

ಚಲಿಸುತ್ತಿದ್ದ ಟ್ರ್ಯಾಕ್ಟರ್ ಮೇಲೆ ಬಿದ್ದ ಮರ.. ಚಾಲಕನಿಗೆ ಗಾಯ, ತಪ್ಪಿದ ಅನಾಹುತ

ಚಲಿಸುತ್ತಿದ್ದ ಟ್ರ್ಯಾಕ್ಟರ್ ಮೇಲೆ ಬಿದ್ದ ಮರ.. ಚಾಲಕನಿಗೆ ಗಾಯ, ತಪ್ಪಿದ ಅನಾಹುತ ಚಲಿಸುತ್ತಿದ್ದ ಟ್ರ್ಯಾಕ್ಟರ್ ಮೇಲೆ ಮರ ಬಿದ್ದ ಪರಿಣಾಮ ಟ್ರ್ಯಾಕ್ಟರ್ ಚಾಲಕ ಗಾಯಗೊಂಡ ಘಟನೆ ಧಾರವಾಡದ ಎಸ್‌ಪಿ ಕಚೇರಿ ಬಳಿ ಸಂಭವಿಸಿದ್ದು, ಅನಾಹುತವೊಂದು ತಪ್ಪಿದೆ. ಎಸ್‌ಪಿ ಕಚೇರಿಯ ಮುಂಭಾಗದ ರಸ್ತೆ ಮೂಲಕ ಹಾದು ಹೊರಟಿದ್ದ ಟ್ರ್ಯಾಕ್ಟರ್ ಮೇಲೆ ರಸ್ತೆ ಬದಿ ಇದ್ದ ಮರ ಗಾಳಿಗೆ ಏಕಾಏಕಿ ಬಿದ್ದಿದೆ. ಇದರಿಂದ ಟ್ರ್ಯಾಕ್ಟರ್ ಚಾಲಕನಿಗೆ ಗಾಯವಾಗಿತ್ತು. ಆತನನ್ನು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. …

Read More »

ಸ್ನೇಹಿತನ ಪಿಸ್ತೂಲ್‌ ಹಿಡಿದು ನೋಡುತ್ತಿದ್ದಾಗ ಹಾರಿದ ಗುಂಡು; ಕಿಡ್ನಿ ಕಳೆದುಕೊಂಡ ಯುವತಿ

ಬೆಂಗಳೂರು: ಪಿಸ್ತೂಲ್‌ನಿಂದ ಮಿಸ್​​ಫೈರ್ ಆದ ಗುಂಡು ತಗುಲಿ ಯುವತಿಯ ಒಂದು ಕಿಡ್ನಿಗೆ ತೀವ್ರ ಹಾನಿಯಾದ ಘಟನೆ ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರೇಚಲ್ (32) ಎಂಬವರು ಕಿಡ್ನಿ ಕಳೆದುಕೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪರವಾನಗಿ ಪಡೆದ ಪಿಸ್ತೂಲ್ ಹೊಂದಿದ್ದ ಈಕೆಯ ಸ್ನೇಹಿತನಾದ ನಿಖಿಲ್ ನಾಯಕ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 2023ರ 125ಬಿ ಹಾಗೂ ಶಸ್ತ್ರಾಸ್ತ್ರ ಕಾಯ್ದೆಯ 25 (1B), 27, 30ರಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಕಾಕ್ಸ್ …

Read More »

ನಮ್ಮ 2ನೇ ಚಿತ್ರವನ್ನೂ ಸಾಧ್ಯವಾದರೆ ‘ಕೊತ್ತಲವಾಡಿ’ಯಲ್ಲೇ ಚಿತ್ರೀಕರಿಸುತ್ತೇವೆ, ಯಶ್ ಭೇಟಿ ಕೊಡಲಿದ್ದಾರೆ’: ಪುಷ್ಪ

ಚಾಮರಾಜನಗರ: ಬಹುನಿರೀಕ್ಷಿತ ಚಿತ್ರ ‘ಕೊತ್ತಲವಾಡಿ’ ಬಿಡುಗಡೆಗೆ ಇನ್ನೊಂದು ದಿನವಷ್ಟೇ ಬಾಕಿ. ರಾಕಿಂಗ್​​ ಸ್ಟಾರ್ ಯಶ್​ ತಾಯಿ​ ನಿರ್ಮಾಣದ ಚೊಚ್ಚಲ ಚಿತ್ರ ಇದೇ ಶುಕ್ರವಾರ ಅದ್ಧೂರಿಯಾಗಿ ತೆರೆಗಪ್ಪಳಿಸಲಿದ್ದು, ಚಿತ್ರತಂಡ ಇಂದು ಗುಂಡ್ಲುಪೇಟೆ ತಾಲೂಕಿನ ಕೊತ್ತಲವಾಡಿ ಗ್ರಾಮಕ್ಕೆ ಭೇಟಿ ಕೊಟ್ಟಿದೆ. ಬಹುನಿರೀಕ್ಷಿತ ಚಿತ್ರದ ನಿರ್ಮಾಪಕಿ ಪುಷ್ಪ ಅರುಣ್ ಕುಮಾರ್, ನಾಯಕ ನಟ ಪೃಥ್ವಿ ಅಂಬಾರ್ ಹಾಗೂ ನಾಯಕ ನಟಿ ಕಾವ್ಯ ಶೈವ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮ ದೇವತೆಯಾದ ಶ್ರೀ ಪಾರ್ವತಾಂಭೆಗೆ ವಿಶೇಷ …

Read More »

ಕಾಂಗ್ರೆಸ್ ಕಾರ್ಯಕರ್ತನ ಆಟೋ ಮೇಲೆ ಆಸಿಡ್ ದಾಳಿ

ಕಾಂಗ್ರೆಸ್ ಕಾರ್ಯಕರ್ತನ ಆಟೋ ಮೇಲೆ ದುಷ್ಕರ್ಮಿಗಳು ಆಶಿಡ್ ದಾಳಿ ನಡೆಸಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತ ಧನಂಜಯ್ ಎಂಬುವವರಿಗೆ ಸೇರಿದ ಆಟೋ ಮೇಲೆ ಕಿಡಿಗೇಡಿಗಳು ಆಸಿಡ್ ಎರಚಿ ಪರಾರಿಯಾಗಿದ್ದಾರೆ. ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Read More »

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರೆಅತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿದೆ.

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರೆಅತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿದೆ. ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ ಸಂಬಂಧ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಬೇಕಿತ್ತು. ಆದರೆ ಎಸ್ ಐ ಟಿ ಪರ ಹಾಗೂ ಪ್ರಜ್ವಲ್ ಪರ ಎರಡೂ ಕಡೆ ವಕೀಲರಿಂದ ಕೆಲ ಸ್ಪಷ್ಟೀಕರಣ ಕೇಳಿರುವ ನ್ಯಾಯಾಲಯ ತೀರ್ಪನ್ನು ಆಗಸ್ಟ್ 1ರಂದು ಪ್ರಕಟಿಸುವುದಾಗಿ ತಿಳಿಸಿದೆ.ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗೂಗಲ್ ಮ್ಯಾಪ್ ನ್ನು ಸಾಕ್ಷಿಯನ್ನಾಗಿ ಪರಿಗಣಿಸಬಹುದೇ? …

Read More »

ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ಹಲವೆಡೆ ದಾಳಿ

ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಚಿತ್ರದುರ್ಗ, ಹಾಸನ, ಕೊಡಗು ಸೇರಿದಂತೆ ಹಲವೆಡೆ ದಾಳಿ ನಡೆಸುವ ಮೂಲಕ  ಬಿಗ್ ಶಾಕ್ ನೀಡಿದ್ದಾರೆ.  ದಾಳಿ ವೇಳೆ ಅಪಾರ ಪ್ರಮಾಣದಲ್ಲಿ ಆಸ್ತಿ ಪತ್ತೆಯಾಗಿದ್ದು ಅಧಿಕಾರಿಗಳ ತಂಡ ತೀವ್ರ ತಪಾಸಣೆ ನಡೆಸಿದೆ. ಪ್ರಮುಖವಾಗಿ ಚಿತ್ರದುರ್ಗ ಜಿಲ್ಲೆಯ ಟಿಹೆಚ್ ಒ ಡಾ.ವೆಂಕಟೇಶ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

Read More »

ನಟ ಪ್ರಥಮ್​ಗೆ ಜೀವ ಬೆದರಿಕೆ: ದೊಡ್ಡಬಳ್ಳಾಪುರ ಗ್ರಾ.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ತಾಲೂಕಿನ ಎಲ್ಲಮ್ಮ ದೇವಸ್ಥಾನಕ್ಕೆ ಆಗಮಿಸಿದ್ದಾಗ ನನ್ನನ್ನು ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿರುವ ನಟ ಪ್ರಥಮ್, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ತಾಲೂಕಿನ ರಾಮಯ್ಯನಪಾಳ್ಯದ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಕಳೆದ ಐದಾರು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಜೀವ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ದರ್ಶನ್ ಅಭಿಮಾನಿಗಳೆಂದು ಹೇಳಿಕೊಂಡಿರುವ ಯಶಸ್ವಿನಿ, ಬೇಕರಿ ರಘು ಎಂಬವರ ಮೇಲೆ ಭಾರತೀಯ …

Read More »

2ನೇ ದಿನವೂ ನಡೆದ ಶವಗಳ ಪತ್ತೆ ಕಾರ್ಯಾಚರಣೆ

ಬೆಳ್ತಂಗಡಿ(ದಕ್ಷಿಣ ಕನ್ನಡ): ಅನಾಮಧೇಯ ವ್ಯಕ್ತಿಯೋರ್ವ ತಾನು ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಬುಧವಾರವೂ ಆತ ಗುರುತಿಸಿದ ಸ್ಥಳದಲ್ಲಿ ಅಗೆಯುವ ಕಾರ್ಯ ಮುಂದುವರಿದಿದೆ. ಸೋಮವಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ಅಧಿಕಾರಿಗಳ ಸಮ್ಮುಖದಲ್ಲಿ ಅನಾಮಧೇಯ ವ್ಯಕ್ತಿ 13 ಸ್ಥಳಗಳನ್ನು ಗುರುತಿಸಿದ್ದನು. ಆ ಸ್ಥಳಕ್ಕೆ ಮಾರ್ಕಿಂಗ್ ಮಾಡಲಾಗಿದ್ದು, ಪೊಲೀಸ್ ಭದ್ರತೆ ನೀಡಲಾಗಿದೆ. ಪತ್ತೆಯಾಗದ ಅಸ್ಥಿಪಂಜರ: ಮಂಗಳವಾರ ಆತ ನೀಡಿದ ಮೊದಲು ಗುರುತು ಮಾಡಿದ ಸ್ಥಳದಲ್ಲಿ ಕಾರ್ಮಿಕರಿಂದ ನೆಲ …

Read More »

ರೈತರೊಂದಿಗೆ ಚೆಲ್ಲಾಟ ಆಡ್ತಾ ಇದೇಯಾ ಕೃಷಿ ಇಲಾಖೆ..?

ರೈತರೊಂದಿಗೆ ಚೆಲ್ಲಾಟ ಆಡ್ತಾ ಇದೇಯಾ ಕೃಷಿ ಇಲಾಖೆ..? ಸಹಕಾರಿಯಲ್ಲಿ 260 ರೂ. – ಖಾಸಗಿಯಲ್ಲಿ 410 ರೂ.ಗೆ ಯೂರಿಯಾ ಮಾರಾಟ!! ಉತ್ತಮ ಮಳೆಯ ನಿರೀಕ್ಷೆಯಲ್ಲಿ ಭತ್ತದ ಲಾವಣಿಗೆ ತಯಾರಾಗಿದ್ದ ಬಾಗಲಕೋಟೆ ಜಿಲ್ಲೆಯ ರೈತರಿಗೆ ಕೃಷಿ ಇಲಾಖೆಯ ನಿರ್ಲಕ್ಷ್ಯ ಭಾರೀ ಹೊಡೆತ ನೀಡಿದೆ. ಜಿಲ್ಲೆಯಾದ್ಯಂತ ಯೂರಿಯಾ ರಸಗೊಬ್ಬರದ ತೀವ್ರ ಕೊರತೆ ಉಂಟಾಗಿ, ರೈತರು ಬೆಳಗ್ಗೆಯಿಂದ ಸರತಿ ಸಾಲಿನಲ್ಲಿ ನಿಂತು ಪರದಾಡುವ ಸ್ಥಿತಿಯಲ್ಲಿದ್ದಾರೆ. ಬಾದಾಮಿ ತಾಲೂಕಿನ ಕೆರೂರು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ …

Read More »

ಹಲಕರ್ಣಿ ಗ್ರಾಮದಲ್ಲಿ ಪಿಡಿಒ ವಿರುದ್ಧ ಆಕ್ರೋಶ

ಹಲಕರ್ಣಿ ಗ್ರಾಮದಲ್ಲಿ ಪಿಡಿಒ ವಿರುದ್ಧ ಆಕ್ರೋಶ ಮೂಲಭೂತ ಸೌಲಭ್ಯಗಳಿಗೆ ಸ್ಪಂದಿಸಿದ ಅಧಿಕಾರಿಯ ವರ್ಗಾವಣೆ!!! ಖಾನಾಪೂರ ತಾಲೂಕಿನ ಹಲಕರ್ಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅವ್ಯವಸ್ಥಿತ ಆಡಳಿತ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಿಡಿಒ ರೇಷ್ಮಾ ಪಾನಿವಾಲೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮಸ್ಥರು ಇಂದು ಬೃಹತ್ ಮೆರವಣಿಗೆ ಮೂಲಕ ಗ್ರಾಮ ಪಂಚಾಯಿತಿ ಕಾರ್ಯಾಲಯದ ಮುಂದೆ ಪ್ರತಿಭಟನೆ ನಡೆಸಿದರು. “ಗ್ರಾಮದ ಚರಂಡಿಗಳನ್ನು ಸ್ವಚ್ಛಗೊಳಿಸಲಾಗುತ್ತಿಲ್ಲ. ಎಲ್ಲೆಡೆ ಕೆಸರು ನೀರು ನಿಂತಿದೆ. …

Read More »