Breaking News

Laxminews 24x7

ಆಕಸ್ಮಿಕ ಗುಂಡಿನ ದಾಳಿಯಿಂದ ಯುವಕನ ಸಾವು: ಎಸ್‌ಪಿ

ಬೆಳಗಾವಿ: ‘ಖಾನಾಪುರ ತಾಲ್ಲೂಕಿನ ಹಲಸಿ ಬಳಿ ವ್ಯಕ್ತಿಯೊಬ್ಬರು ಆಕಸ್ಮಿಕ ಗುಂಡಿನ ದಾಳಿಯಿಂದ ಮೃತಪಟ್ಟಿರುವುದು ತನಿಖೆಯಲ್ಲಿ ಗೊತ್ತಾಗಿದೆ. ಈ ಪ್ರಕರಣದಲ್ಲಿ ಈವರೆಗೆ ಐವರನ್ನು ಬಂಧಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಹೇಳಿದರು.   ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆಕಸ್ಮಿಕ ಗುಂಡಿನ ದಾಳಿಗೆ ಕಾರಣವಾದ ಶಸ್ತ್ರಾಸ್ತ್ರಗಳನ್ನು ಅಕ್ರಮವಾಗಿ ಹೊಂದಿರುವ ಪ್ರಕರಣವೂ ಕೊಲೆಗೆ ಸಮಾನವಾಗಿದೆ. ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿದ್ದಕ್ಕಾಗಿ ಮತ್ತು ಆರೋಪಿಗಳು ನವಿಲುಗಳ ಬೇಟೆಯಾಡಿದ ಕಾರಣ ವನ್ಯಜೀವಿ ಸಂರಕ್ಷಣಾ …

Read More »

ರಿಯಲ್ ಎಸ್ಟೇಟ್ ಉದ್ಯಮಿ ದಂಪತಿ ಆತ್ಮಹತ್ಯೆ: 12 ಜನರ ವಿರುದ್ಧ FIR ದಾಖಲು

ಮಡಿಕೇರಿ: ರಿಯಲ್ ಎಸ್ಟೇಟ್ ಮಾಫಿಯಾದಿಂದ ಮನನೊಂದು ಉದ್ಯಮಿಯೊಬ್ಬರು ಪತ್ನಿಯೊಂದಿಗೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಿರಿಯಾಪಟ್ಟಣದ ಬೈಲಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೊಡಗಿನ ಕುಶಾಲನಗರದಲ್ಲಿ ಉದ್ಯಮ ನಡೆಸುತ್ತಿದ್ದ ಕೊಪ್ಪ ನಿವಾಸಿ ಸುರೇಶ್ (40) ಹಾಗೂ ಪತ್ನಿ ಪಲ್ಲವಿ (28) ಆತ್ಮಹತ್ಯೆಗೆ ಶರಣಾದವರು. ಸುರೇಶ್ ತನ್ನ ಪತ್ನಿಯನ್ನು ಬುಧವಾರ ದೇವಸ್ಥಾನಕ್ಕೆಂದು ಕರೆದೊಯ್ದಿದ್ದರು. ಆದರೆ ಕಾವಲ್ ನ ಜಮೀನಿನ ಹಳೇಯ ಖಾಲಿ ಮನೆಯಲ್ಲಿ ಪತಿ-ಪತ್ನಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಿಯಲ್ ಎಸ್ಟೇಟ್ …

Read More »

ಕೋವಿಡ್​ ಹಗರಣದ ತನಿಖೆಗೆ SIT ರಚನೆ; ಯಡಿಯೂರಪ್ಪ, ಶ್ರೀರಾಮುಲುಗೆ ಈಗ ಎಸ್‌ ಐ ಟಿ ಸಂಕಷ್ಟ

ಬೆಂಗಳೂರು, ನವೆಂಬರ್‌ 14: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿದ್ದ ಹಗರಣದ ತನಿಖೆಯನ್ನು ಈಗಿನ ಕಾಂಗ್ರೆಸ್ ಸರ್ಕಾರ ನಿವೃತ್ತ ನ್ಯಾಯಮೂರ್ತಿಯ ಮೂಲಕ ನಡೆಸಲು ತೀರ್ಮಾನಿಸಿತ್ತು. ಇದರ ಬೆನ್ನಲ್ಲೇ ಇದೀಗ ಕೋವಿಡ್ ಹಗರಣದ ತನಿಖೆಯನ್ನು ಎಸ್​ಐಟಿಗೆ ವಹಿಸಲು ಸಂಪುಟ ಅಸ್ತು ಎಂದಿದ್ದು, ಯಡಿಯೂರಪ್ಪ ಹಾಗೂ ಶ್ರೀರಾಮುಲುಗೆ ಎಸ್‌ ಐ ಟಿ ಸಂಕಷ್ಟ ಎದುರಾಗಿದೆ. ಸಚಿವ ಸಂಪುಟದ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಜೊತೆಗೆ ಕಾನೂನು ಸಚಿವ ಎಚ್.ಕೆ ಪಾಟೀಲ …

Read More »

16 ಲಕ್ಷ ರೂ.ಗಾಗಿ ಪ್ರೇಯಸಿಯ ದೇಹ 16 ತುಂಡು ಮಾಡಿದ ಪ್ರಿಯಕರ!

ತೆಲಂಗಾಣ: ದೆಹಲಿಯಲ್ಲಿ ಶ್ರದ್ಧಾ ವಾಕರ್​ ಎಂಬ ಯುವತಿಯನ್ನು 35 ತುಂಡಗಳನ್ನಾಗಿ ಕತ್ತರಿಸಿದ್ದ ಆಕೆಯ ಪ್ರಿಯಕರ ಅಫ್ತಾಬ್ ಪೂನಾವಾಲಾ, ಪ್ರೇಯಸಿ ದೇಹದ ಭಾಗಗಳನ್ನು ಹಲವು ಪ್ರದೇಶಗಳಲ್ಲಿ ಎಸೆದಿದ್ದ ಘಟನೆ ಅಂದು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಅದೇ ಮಾದರಿಯಲ್ಲಿ ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಮಹಾಲಕ್ಷ್ಮಿ ಎಂಬ ಯುವತಿಯ ದೇಹವನ್ನು 50 ತುಂಡು ಮಾಡಿ, ಫ್ರಿಡ್ಜ್​ನಲ್ಲಿಟ್ಟು, ತಾನು ಆತ್ಮಹತ್ಯೆಗೆ ಶರಣಾದ ಪ್ರೇಮಿ ಕಥೆ ಕರುನಾಡ ಜನರನ್ನು ಆತಂಕಕ್ಕೆ ದೂಡಿತ್ತು. ಸದ್ಯ ಇಲ್ಲೊಂದು ಘಟನೆ ಕೂಡ ಇದನ್ನೇ …

Read More »

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲ ಸರ್ಕಾರಿ ನೌಕರರ ಒಂದು ದಿನದ ವೇತನ

ನಗರದಲ್ಲಿ ಡಿಸೆಂಬರ್ 20 ರಿಂದ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ಒಂದು ದಿನದ ವೇತನ ನೀಡಲು ಸಮ್ಮತಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ ಮನವಿಗೆ ಸ್ಪಂದಿಸಿರುವ ಸರ್ಕಾರಿ ನೌಕರರು ಒಂದು ದಿನದ ವೇತನ ನೀಡುವ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ. ಜಿಲ್ಲೆಯಲ್ಲಿ ಸುಮಾರು 18 ಸಾವಿರ ರಾಜ್ಯ ಸರ್ಕಾರಿ ನೌಕರರಿದ್ದು, ಒಂದು ದಿನದ ವೇತನದಿಂದ ಸುಮಾರು …

Read More »

ಸಿಎಂ ವಿರುದ್ಧ ಅಪಪ್ರಚಾರ ಆರೋಪ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್‌ಐಆರ್

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಅಪಪ್ರಚಾರ ಮಾಡಿದ ಆರೋಪದ ಮೇರೆಗೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರು ನಿವೇಶನ ಖರೀದಿಸಿದ ಸಂದರ್ಭದಲ್ಲಿ ಅವರ ಬದಲಿಗೆ ಮುಡಾ ತಹಶೀಲ್ದಾರ್ ಮುದ್ರಾಂಕ ಶುಲ್ಕ ಪಾವತಿಸಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಅವರು ಸುಳ್ಳು ಆರೋಪ ಮಾಡಿದ್ದಾರೆ. ಖರೀದಿದಾರರು ಉಪ ನೋಂದಣಾಧಿಕಾರಿ ಕಚೇರಿಗೆ ಹಾಜರಾಗದೇ ವಿನಾಯಿತಿ ಪಡೆದ …

Read More »

ಮುಡಾ’ ಹಗರಣ : ಮಾಜಿ ಅಧ್ಯಕ್ಷ ಮರೀಗೌಡ ‘ED’ ವಿಚಾರಣೆಗೆ ಹಾಜರು!

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಡಿ ಅಧಿಕಾರಿಗಳು ತನಿಖೆಯನ್ನು ಚುರುಕುಗೋಳಿಸಿದ್ದು, ಇದೀಗ ಮಾಜಿ ಅಧ್ಯಕ್ಷ ಮರಿಗೌಡ ಜಾರಿ ನಿರ್ದೇಶನಾಲಯದ (ED) ವಿಚಾರಣೆಗೆ ಹಾಜರಾಗಿದ್ದಾರೆ. ಹೌದು ಮುಡಾ ಹಗರಣದ ತನಿಖೆ ಯಾವಾಗ ತೀವ್ರ ಸ್ವರೂಪ ಪಡೆದುಕೊಂಡಿತೊ ಆಗ ಮರೀಗೌಡ ಮುಡಾದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ED ಅಧಿಕಾರಿಗಳು ವಿಚಾರಣೆಗೆ ಕರೆದಿದ್ದರಿಂದ ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ಮರೀಗೌಡ ವಿಚಾರಣೆಗೆ ಹಾಜರಾಗಿದ್ದಾರೆ. ಇತ್ತೀಚಿಗಷ್ಟೇ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ …

Read More »

3 ವರ್ಷದ ಮಗನ ಸಾವು; ಸಂಶಯ ವ್ಯಕ್ತಪಡಿಸಿದ ತಾಯಿ: ಪರೀಕ್ಷೆಗೆ ಹೂತಿದ್ದ ಶವ ಹೊರಕ್ಕೆ

3 ವರ್ಷದ ಮಗನ ಸಾವು; ಸಂಶಯ ವ್ಯಕ್ತಪಡಿಸಿದ ತಾಯಿ: ಪರೀಕ್ಷೆಗೆ ಹೂತಿದ್ದ ಶವ ಹೊರಕ್ಕೆ ಧಾರವಾಡ: ಮಗನ ಸಾವಿನ ಕುರಿತು ತಾಯಿ ಸಂಶಯ ವ್ಯಕ್ತಪಡಿಸಿ ದೂರು ನೀಡಿದ್ದು, ಹೂತಿದ್ದ ಶವವನ್ನು ಪರೀಕ್ಷೆಗಾಗಿ ಹೊರತೆ‌ಗೆಯುವ ಪ್ರಕ್ರಿಯೆ ಜಿಲ್ಲೆಯ ನವಲಗುಂದ ತಾಲ್ಲೂಕಿನ ಯಮನೂರಿನ ಸ್ಮಶಾನಗಟ್ಟಿಯಲ್ಲಿ ನಡೆಯುತ್ತಿದೆ. ಬೆಳಿಗ್ಗೆ 7 ಗಂಟೆಗೆ ಪ್ರಕ್ರಿಯೆ ಶುರುವಾಗಿದೆ. ತಹಶೀಲ್ದಾರ್‌ ಸುಧೀರ್ ಸಾಹುಕಾರ್‌, ಪಿಎಸ್‌ಐ ಜನಾರ್ದನ ಭಟ್ರಳ್ಳಿ ಸ್ಥಳದಲ್ಲಿ ಇದ್ಧಾರೆ. ‘ಮಗ ಯಲ್ಲಪ್ಪ (3) ಸಾವು ಸಹಜವಲ್ಲ, ಪಕ್ಕದ ಮನೆಯವರು …

Read More »

ವರ್ಷದಿಂದ ವರ್ಷಕ್ಕೆ ವೃದ್ಧಿಸಿದ ‘ಶಕ್ತಿ’

ಹುಬ್ಬಳ್ಳಿ: ರಾಜ್ಯದಲ್ಲಿ ‘ಶಕ್ತಿ’ ಯೋಜನೆ ಅನುಷ್ಠಾನವಾದ ಬಳಿಕ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್‌ಡಬ್ಲುಕೆಆರ್‌ಟಿಸಿ) ಬಸ್‌ಗಳಲ್ಲಿ ಎಲ್ಲ ಸೀಟುಗಳು ಭರ್ತಿಯಾಗುತ್ತಿವೆ. ಕಳೆದ ವರ್ಷ ಸಂಚರಿಸಿದ ಪ್ರಯಾಣಿಕರ ಸಂಖ್ಯೆಗೆ ಹೋಲಿಸಿದರೆ ಈ ವರ್ಷ ಪ್ರಯಾಣಿಕರ ಸಂಖ್ಯೆ ಮತ್ತಷ್ಟು ವೃದ್ಧಿಸಿದೆ.   ಅತಿ ಹೆಚ್ಚು ವಿಸ್ತಾರ ಮತ್ತು ಜನಸಂಖ್ಯೆಯುಳ್ಳ ಬೆಳಗಾವಿ ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ ಸಂಚರಿಸಿದ ಪ್ರಯಾಣಿಕರ ಸಂಖ್ಯೆ ಗಣನೀಯ ಏರಿಕೆಯಾಗಿದೆ. 2023ನೇ ಸಾಲಿನ ಸೆಪ್ಟೆಂಬರ್‌ನಲ್ಲಿ ಸಂಚರಿಸಿದ್ದ ಒಟ್ಟು ಪ್ರಯಾಣಿಕರ ಸಂಖ್ಯೆಗೆ ಹೋಲಿಸಿದರೆ …

Read More »

ಬೆಳೆದು ನಿಂತ ಭತ್ತಕ್ಕೆ ಕಣೆ ನೊಣ, ಕಾಡಿಗಿ ರೋಗ

ಸಿಂಧನೂರು: ಮುಂಗಾರು ಹಂಗಾಮಿನಲ್ಲಿ ಸಾಕಷ್ಟು ಮಳೆಯಾಗಿದ್ದು ಕಾಲುವೆಯ ನೀರು ಸಹ ಯಥೇಚ್ಛವಾಗಿ ಹರಿದು ಬಂದಿರುವುದರಿಂದ ತಾಲ್ಲೂಕಿನಲ್ಲಿ ಭತ್ತದ ಬೆಳೆ ಸಮೃದ್ಧವಾಗಿ ಬೆಳೆದು ನಿಂತು ಕಾಳು ಕಟ್ಟಿದೆ. ಈ ಸಮಯದಲ್ಲಿ ಕಣೆ ನೊಣ ಮತ್ತು ಕಾಡಿಗಿ ರೋಗ ಹರಡಿ ಬೆಳೆಹಾನಿ ಉಂಟು ಮಾಡುತ್ತಿರುವುದು ರೈತರಿಗೆ ಸಂಕಟ ತಂದೊಡ್ಡಿದೆ.   ತಾಲ್ಲೂಕಿನಲ್ಲಿ 1.30 ಲಕ್ಷ ಹೆಕ್ಟೇರ್ ಜಮೀನು ಕೃಷಿಗೆ ಯೋಗ್ಯವಾಗಿದ್ದು, ಅದರಲ್ಲಿ 75 ಸಾವಿರ ಹೆಕ್ಟೇರ್ ಜಮೀನಿನಲ್ಲಿ ಭತ್ತ ಬೆಳೆಯಲಾಗಿದೆ. ಕಾಳು ಕಟ್ಟುವ ಸಮಯದಲ್ಲಿ …

Read More »