Breaking News

Laxminews 24x7

ತೀಯ ಪಿಯುಸಿ ಫಲಿತಾಂಶದಲ್ಲಿ ಇಡೀ ರಾಜ್ಯಕ್ಕೆ 2ನೇ ರ್ಯಾಂಕ್

ಬೆಳಗಾವಿ: ಹುಕ್ಕೇರಿ ತಾಲ್ಲೂಕಿನ ನಿಡಸೋಸಿಯ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಂಕಿತ್ ಭೀಮಪ್ಪ ಕಾರತಗಿ ಇಂದು ಪ್ರಕಟವಾದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಇಡೀ ರಾಜ್ಯಕ್ಕೆ 2ನೇ ರ್ಯಾಂಕ್ ಗಳಿಸುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾನೆ.‌ ಮೂಲತಃ ಗೋಕಾಕ್ ತಾಲ್ಲೂಕಿನ ರಾಜಾಪುರ ಗ್ರಾಮದ ಅಂಕಿತ್ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ, ಗಣಿತ ಮತ್ತು ಕನ್ನಡ ವಿಷಯಗಳಲ್ಲಿ ನೂರಕ್ಕೆ ನೂರು ಅಂಕ ಗಳಿಸಿದರೆ, ಇಂಗ್ಲೀಷ ನಲ್ಲಿ ಮಾತ್ರ 98 …

Read More »

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ ಎಸ್‌ಎಸ್‌ಎ ಪಿಯು ಕಾಲೇಜು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ತನ್ನ ಶೈಕ್ಷಣಿಕ ಮೇಲುಗೈಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ವಿದ್ಯಾರ್ಥಿಗಳ ಈ ಶ್ರೇಷ್ಠ ಸಾಧನೆ ಕಾಲೇಜಿಗೆ ಹೆಮ್ಮೆ ತಂದಿದೆ. ಈ ಫಲಿತಾಂಶದಲ್ಲಿ ಕು. ಸೋಹಾ ಶೇಖ್ ಅವರು 600ರಲ್ಲಿ 593 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಕು. ಶ್ರಾವಣಿ ಭಂಡಾರಿ …

Read More »

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಬೈಲಹೊಂಗಲ ತಾಲ್ಲೂಕಿನ ಒಕ್ಕುಂದ ಗ್ರಾಮದ ವಿದ್ಯಾರ್ಥಿನಿ ಜ್ಯೋತಿ ಮಲ್ಲನಗೌಡ ಪಾಟೀಲ 600ಕ್ಕೆ 586 ಅಂಕ ಗಳಿಸಿ, ಅತ್ಯುತ್ತಮ ಸಾಧನೆಗೈದಿದ್ದಾಳೆ. ಹುಕ್ಕೇರಿ ತಾಲ್ಲೂಕಿನ ನಿಡಸೋಸಿಯ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಗಿರುವ ಜ್ಯೋತಿ ಪಾಟೀಲ, ಕನ್ನಡ 100, ಇಂಗ್ಲೀಷ 98, ಭೌತಶಾಸ್ತ್ರ …

Read More »

ಡಾಲ್ಮಿಯಾ ಸಿಮೆಂಟ್ ಕಾರ್ಖಾನೆಯಿಂದ ಯಾದವಾಡ ಬಸವೇಶ್ವರ ಪುತ್ಥಳಿ ನಿರ್ಮಾಣಕ್ಕೆ 16 ಲಕ್ಷ ರೂ. ಮತ್ತು ಕುಲಗೋಡ ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ 10 ಲಕ್ಷ ರೂಪಾಯಿ ದೇಣಿಗೆ*

*ಡಾಲ್ಮಿಯಾ ಸಿಮೆಂಟ್ ಭಾರತ ಲಿ.., ಸಮಾಜಮುಖಿ ಕಾರ್ಯಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಫೀದಾ* *ಮೂಡಲಗಿ*- ಸಿಮೆಂಟ್ ವಲಯದಲ್ಲಿ ಹೆಸರುವಾಸಿಯಾಗಿರುವ ಡಾಲ್ಮಿಯಾ ಸಿಮೆಂಟ್ ಭಾರತ ಲಿ.., (ಡಿಸಿಬಿಎಲ್) ಯಾದವಾಡ ಯೂನಿಟ್ ಈ ಭಾಗದ ರೈತರು ಮತ್ತು ಸಾರ್ವಜನಿಕರ ಹಿತಕ್ಕೆ ಅನುಗುಣವಾಗಿ ಸಮಾಜಮುಖಿ ಕೆಲಸದಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯವಾಗಿದೆ. ಯಾದವಾಡ ಮತ್ತು ಕುಲಗೋಡದಲ್ಲಿ ನಿರ್ಮಾಣವಾಗುತ್ತಿರುವ ಬಸವೇಶ್ವರ ಪುತ್ಥಳಿ ಹಾಗೂ ಅಂಬೇಡ್ಕರ್ ಪ್ರತಿಮೆಗೆ ಒಟ್ಟು 26 ಲಕ್ಷ ರೂಪಾಯಿಗಳನ್ನು ದೇಣಿಗೆಯನ್ನಾಗಿ ನೀಡುತ್ತಿರುವುದು ಸಂತಸವನ್ನುಂಟು ಮಾಡಿದೆ ಎಂದು …

Read More »

ಪ್ರತಿಯೊಂದು ಕೆಲಸ ಮಾಡಲು ಪೋಲಿಸರಿಗೆ ಸಾರ್ವಜನಿಕರ ಸಹಕಾರಬೇಕು

ಗೋಕಾಕ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಗೋಕಾಕ ಉಪ ವಿಭಾಗದಲ್ಲಿ ಸುಮಾರು 5 ವರ್ಷಗಳ ಹಿಂದಿನಿಂದ ಕಳೆದುಹೋದ ಮೊಬೈಲಗಳನ್ನು,ಕಳ್ಳತನವಾಗಿದ್ದ ಪಂಪಸೇಟ್ ಮತ್ತು ಆಭರಣಗಳನ್ನು ಪತ್ತೆ ಹಚ್ಚಿ ಬೆಳಗಾವಿ ಎಸ್, ಪಿ, ಕೆ.ರಾಮರಾಜನ್ ಇವರು ವಾರಸುದಾರರಿಗೆ ಮರಳಿ ಹಸ್ತಾಂತರಿಸಿದರು. ನಂತರ ಗೋಕಾಕ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬೆಳಗಾವಿ ಎಸ್, ಪಿ ಕೆ ರಾಮರಾಜನ್ ಇವರು ಪ್ರತಿಯೊಂದು ಕೆಲಸಗಳನ್ನು ಪೋಲಿಸ್ ಇಲಾಖೆಯವರು ಮಾಡಬೇಕಾದರೆ ಅದಕ್ಕೆ ಸಾರ್ವಜನಿಕರ ಸಹಕಾರ ಅವಶ್ಯಬೇಕೆಂದು ಮಾದ್ಯಮದ ಮೂಲಕ …

Read More »

ಸವದಿ ಬಿಜೆಪಿ ಬರಲು ಬಿಡಲ್ಲ ; ಬಂದರೂ ನಾವೇನಂತ ತೋರಿಸುತ್ತೇವೆ – ಗುಡುಗಿದ ರಮೇಶ್‌ ಜಾರಕಿಹೊಳಿ

  ಅಥಣಿ : ಬಿಜೆಪಿ ತೊರೆದು ಕಾಂಗ್ರೆಸ್ ನಿಂದ ಶಾಸಕರಾದ ಲಕ್ಷ್ಮಣ ಸವದಿ ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷಕ್ಕೆ ಮರಳಿ ಬರುವುದಿಲ್ಲ, ಒಂದು ವೇಳೆ ಬಿಜೆಪಿಗೆ ಬಂದರೆ ನಾವು ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಮಂಗಳವಾರ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಶಾಸಕ ಲಕ್ಷ್ಮಣ ಸವದಿ ಅವರು ಪಕ್ಷವನ್ನು ಬಿಟ್ಟು ಬಿಜೆಪಿ ನಾಯಕರ ಬಗ್ಗೆ ಮತ್ತು ಮತಕ್ಷೇತ್ರದ ಜನರಿಗೆ …

Read More »

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ಮಧ್ಯಾಹ್ನ 3ಕ್ಕೆ ವೆಬ್‌ಸೈಟ್‌ನಲ್ಲಿ ರಿಸಲ್ಟ್ ಲಭ್ಯ

ಬೆಂಗಳೂರು: ನಾಳೆ (ಏ.9) ದ್ವಿತೀಯ ಪಿಯುಸಿ ಪರೀಕ್ಷೆ 1ರ ಫಲಿತಾಂಶ ಪ್ರಕಟವಾಗಲಿದ್ದು, ಮಧ್ಯಾಹ್ನ 3ಕ್ಕೆ ವೆಬ್‌ಸೈಟ್‌ನಲ್ಲಿ ರಿಸಲ್ಟ್ ಲಭ್ಯವಾಗಲಿದೆ. ಈ ಮೊದಲು ಸುದ್ದಿಗೋಷ್ಠಿ ನಡೆಸಿ ಬಳಿಕ ಫಲಿತಾಂಶ ಪ್ರಕಟವಾಗುತ್ತಿತ್ತು. ಆದರೆ ಈ ಬಾರಿ ಮೊದಲು ವೈಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಬಳಿಕ ಸುದ್ದಿಗೋಷ್ಠಿ ನಡೆಯಲಿದೆ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಸಚಿವ ಮಧು ಬಂಗಾರಪ್ಪ ಅವರು ಸಂಜೆ 6:15ಕ್ಕೆ ಫಲಿತಾಂಶದ ಬಗ್ಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಇಲಾಖೆ ವೆಬ್‌ಸೈಟ್ https://karresults.nic.in ಫಲಿತಾಂಶ ಲಭ್ಯವಾಗಲಿದೆ ಜೊತೆಗೆ …

Read More »

ನಾಳೆ ಮಾಜಿ ಸಚಿವ ವಿನಯ್ ಕುಲಕರ್ಣಿ ಭವಿಷ್ಯ – ಯೋಗೇಶ್‌ ಗೌಡ ಕೊಲೆ ಕೇಸ್‌ ತೀರ್ಪು

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ  ಕೊಲೆ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆ ಪ್ರಕಟಿಸಲಿದೆ. ಕಳೆದ 6 ತಿಂಗಳಿಂದ ಪ್ರಕರಣದ ವಿಚಾರಣೆ ನಡೆಸುತ್ತಾ ಇದ್ದ ನ್ಯಾಯಾಲಯ ಸಂಪೂರ್ಣ ವಾದ-ಪ್ರತಿವಾದ ಆಲಿಸಿತ್ತು. ಮಾರ್ಚ್ ಕೊನೆಯ ವಾರದಲ್ಲಿ ವಾದ ಸಂಪೂರ್ಣವಾಗಿ ಆಲಿಸಿದ್ದ ನ್ಯಾಯಾಲಯ ಪ್ರಾಸಿಕ್ಯೂಷನ್ ಮತ್ತು ಆರೋಪಿಗಳ ಪರ ವಕೀಲರಿಗೆ ಹೆಚ್ಚುವರಿ ಲಿಖಿತ ವಾದ ಸಲ್ಲಿಕೆ ಮಾಡಲು ಅವಕಾಶ ನೀಡಿತ್ತು. ಏಪ್ರಿಲ್ 2 ರಂದು ಎಲ್ಲರೂ …

Read More »

ನೀರು ಕೇಳಿ ಪ್ರತಿಭಟಿಸಿದ್ದ 80 ಮಂದಿ ವಿರುದ್ಧ ಎಫ್‌ಐಆರ್

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಸರ್ಜಾಪುರ  ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಗ್ರಾಮ ಪಂಚಾಯತಿ ಕಚೇರಿಗೆ ಬೀಗ ಹಾಕಿ, ಪ್ರತಿಭಟನೆ ಮಾಡಿದ್ದ 80 ಜನರ ವಿರುದ್ಧ ಎಫ್‌ಐಆರ್  ದಾಖಲಾಗಿದೆ. ಪಿಡಿಓ ಅವರು ಪೊಲೀಸ್ ಠಾಣೆಯಲ್ಲಿ ನೀರು ಕೇಳಿದ 80 ಜನ ಗ್ರಾಮಸ್ಥರ ವಿರುದ್ಧ ಪ್ರಕರಣ ದಾಖಲಾಗಿದೆ. ಸದ್ಯ ಈ ಹಿನ್ನೆಲೆ ತನಿಖೆ ನಡೆಸಿ ವರದಿ ನೀಡುವಂತೆ ಸಚಿವ ಶರಣಪ್ರಕಾಶ್ ಪಾಟೀಲ್ ಆದೇಶಿಸಿದ್ದಾರೆ. ರಾಯಚೂರಿನಲ್ಲಿಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು …

Read More »

ಕದಂಬರ ಉಪರಾಜಧಾನಿ ಹಲಸಿಯಲ್ಲಿ ಮಹಾಲಕ್ಷ್ಮೀ ಜಾತ್ರೆ: ಭಕ್ತಿ ಭಾವದ ಹೊನ್ನಾಟದಲ್ಲಿ ಮಿಂದೆದ್ದ ಭಕ್ತಸಾಗರ

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಐತಿಹಾಸಿಕ ಪ್ರಸಿದ್ಧ ಹಲಸಿ ಗ್ರಾಮದಲ್ಲಿ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಅತ್ಯಂತ ಅದ್ಧೂರಿಯಾಗಿ ನೆರವೇರುತ್ತಿದೆ. ಕದಂಬರ ಕಾಲದ ಈ ಉಪರಾಜಧಾನಿಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ದೇವಿಯ ಹೊನ್ನಾಟ ನಡೆಯುವ ಮೂಲಕ ಧಾರ್ಮಿಕ ವಿಧಿವಿಧಾನಗಳಿಗೆ ಚಾಲನೆ ಸಿಕ್ಕಿದ್ದು, ಗ್ರಾಮದಾದ್ಯಂತ ಹಬ್ಬದ ವಾತಾವರಣ ಮನೆಮಾಡಿದೆ. ಖಾನಾಪುರ ತಾಲೂಕಿನ ಕದಂಬರ ಕಾಲದ ಐತಿಹಾಸಿಕ ಉಪರಾಜಧಾನಿ ಹಲಸಿ ಗ್ರಾಮದಲ್ಲಿ ಮಹಾಲಕ್ಷ್ಮೀ ಜಾತ್ರೆಯು ಅತ್ಯಂತ ಸಡಗರ ಹಾಗೂ ಭಕ್ತಿ ಭಾವದಿಂದ ಪ್ರಾರಂಭವಾಯಿತು. ಇಂದು ಬೆಳ್ಳಂಬೆಳಿಗ್ಗೆ …

Read More »