ಬೆಳಗಾವಿ: ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ನಿಮಿತ್ತ ಬೆಳಗಾವಿಯಲ್ಲಿ ಆಯೋಜಿಸಿರುವ ಅಸ್ಮಿತೆ ಮಾರಾಟ ಮೇಳ, ಸರಸ್ ಮೇಳಕ್ಕೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನರ ದಂಡೇ ಹರಿದು ಬರುತ್ತಿದೆ. 4 ದಿನಗಳಲ್ಲಿ ಬರೋಬ್ಬರಿ 1.03 ಕೋಟಿ ರೂ. ವ್ಯಾಪಾರ ವಹಿವಾಟು ಕಂಡು ಬಂದಿದೆ. ಬೆಳಗಾವಿ ಸರ್ದಾರ ಮೈದಾನದಲ್ಲಿ ಡಿ.26ರಿಂದ ಜ. 4ರವರೆಗೆ ನಡೆಯುತ್ತಿರುವ ಸರಸ್ ಮೇಳ – ಖಾದಿ ಉತ್ಸವ, ವಸ್ತುಪ್ರದರ್ಶನ ಮತ್ತು ಮಾರಾಟ ಮೇಳ ಜನಾಕರ್ಷಣೀಯ ಕೇಂದ್ರ ಬಿಂದುವಾಗಿ ಮಾರ್ಪಾಡಾಗಿದೆ. ಡಿ.26 ರಂದು …
Read More »ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡುವ ನಿರ್ಧಾರ ಎಐಸಿಸಿಗೆ ಮಾತ್ರ ಇದೆ ಎಂದು ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ: ”ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಈಗಿರುವವರನ್ನೇ ಮುಂದುವರಿಸಬೇಕಾ? ಅಥವಾ ಹೊಸಬರಿಗೆ ಅವಕಾಶ ನೀಡಬೇಕಾ ಎಂಬುದು ಪಕ್ಷದ ಹಂತದಲ್ಲಿ ಚರ್ಚೆ ಆಗಬೇಕು. ಇದು ನಮ್ಮ ಹಂತದಲ್ಲಿ ಆಗುವಂತದ್ದಲ್ಲ. ಹೈಕಮಾಂಡ್ ನಿರ್ಧರಿಸಲಿದೆ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ”ಒಬ್ಬೊಬ್ಬರು ಎರಡೂ ಹುದ್ದೆಯಲ್ಲಿದ್ದರೆ ಜವಾಬ್ದಾರಿ ನಿರ್ವಹಿಸುವುದು ಕಷ್ಟ ಆಗುತ್ತದೆ. ಆದರೆ, ಅದು ನಮ್ಮ ಹಂತದಲ್ಲಿ ಇಲ್ಲ. ಹಾಗಾಗಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡುವ ನಿರ್ಧಾರ …
Read More »ಬೆಳಗಾವಿಯಲ್ಲಿ ಎಸ್.ಸಿ/ಎಸ್ಟಿ ದೌರ್ಜನ್ಯ ನಿಯಂತ್ರಣ ಸಭೆ…ಸ್ಮಶಾನಭೂಮಿ ಒದಗಿಸಿ…ಪೌರ ಕಾರ್ಮಿಕರಿಗೆ ಭದ್ರತೆ ನೀಡಿ.
ಬೆಳಗಾವಿ :ಬೆಳಗಾವಿಯಲ್ಲಿಂದು ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ದೌರ್ಜನ್ಯ ನಿಯಂತ್ರಣ ನಿಯಮಗಳು 1995, 17 ರಡಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸಭೆಯನ್ನು ಕರೆಯಲಾಗಿತ್ತು. ಇಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಗೃಹದಲ್ಲಿ ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ದೌರ್ಜನ್ಯ ನಿಯಂತ್ರಣ ನಿಯಮಗಳು 1995, 17 ರಡಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸಭೆಯನ್ನು ಕರೆಯಲಾಗಿತ್ತು. ಈ ವೇಳೆ ಪರಿಶಿಷ್ಟ ಜಾತಿ …
Read More »ವಾರ್ಡ ನಂಬರ್ 46ರಲ್ಲಿ ಅಭಿವೃದ್ಧಿ ಕಾರ್ಯ; ನಗರಸೇವಕ ಹಣಮಂತ ಕೊಂಗಾಲಿ ಚಾಲನೆ
ಬೆಳಗಾವಿ :ನಗರದ ವಾರ್ಡ ನಂಬರ್ 46ರಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ನಗರಸೇವಕ ಹಣಮಂತ ಕೊಂಗಾಲಿ ಅವರು ಚಾಲನೆಯನ್ನು ನೀಡಿದರು. ಬೆಳಗಾವಿ ನಗರದ ವಾರ್ಡ್ ನಂಬರ್ 46 ವ್ಯಾಪ್ತಿಯಲ್ಲಿ ಬರುವ ರಾಮತೀರ್ಥ ನಗರ ಕೆ.ಎಚ್.ಬಿ ಕಾಲನಿ, ಕಣಬರಗಿ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ನಗರಸೇವಕ ಹಣಮಂತ ಕೊಂಗಾಲಿಯವರು ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಈ ವೇಳೆ ಮಳಗಲಿ, ಪಾಟೀಲ್, ಚೌಗಲಾ ,ಬಡಿಗೇರ್, ವಿಜಯ ಬ್ಯಾಡಗಿ, ಮೂಲಿಮನಿ, ಬೆಳಗಲಿ, ವನ್ನೂರು,ಮನೋಜ್, ಇನ್ನುಳಿದವರು ಉಪಸ್ಥಿತರಿದ್ಧರು.
Read More »ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿಗಳಿಗೆ ಭದ್ರತೆ ನೀಡಿ; ಶ್ರೀರಾಮಸೇನೆ ಜಿಲ್ಲಾಧಿಕಾರಿಗಳಿಗೆ ಮನವಿ
ಬೆಳಗಾವಿ: ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿಗಳಿಗೆ ಭದ್ರತೆ ನೀಡಿ. ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿಗಳಿಗೆ ಭದ್ರತೆ ಹಾಗೂ ಕೊಲೆ ಸಂಚು ರೂಪಿಸಿದ ವ್ಯಕ್ತಿಯನ್ನು ಬಂಧಿಸಬೇಕು ಹಾಗೂ ಷಡ್ಯಂತ್ರದ ರುವಾರಿ ಸಚಿವ ಪ್ರಿಯಾಂಕಾ ಖರ್ಗೆ ಅವರ ಪಿ.ಎ. ಆಗಿದ್ದು, ಸಚಿವ ಪ್ರಿಯಾಂಕಾ ಖರ್ಗೆ ರಾಜೀನಾಮೆ ನೀಡಲೇಬೇಕೆಂದು ಬೆಳಗಾವಿಯ ಶ್ರೀರಾಮಸೇನೆ ಆಗ್ರಹಿಸಿದೆ. ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿಗಳಿಗೆ ಭದ್ರತೆ ಹಾಗೂ …
Read More »ಬೆಳಗಾವಿಯಲ್ಲಿಂದು ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಗಳ “ದೌರ್ಜನ್ಯ ನಿಯಂತ್ರಣ”ಜಾಗೃತಿ ಮತ್ತು ಮೇಲುಸ್ತುವಾರಿ ಸಮಿತಿ ಸಭೆ.
ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳು 1995ರ ನಿಯಮ 17ರ ರೀತ್ಯ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಮೇಲುಸ್ತುವಾರಿ ಸಮಿತಿ ಸಭೆ ಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜರುಗಿಸಲಾಯಿತು. ಪೊಲೀಸ್ ಆಯುಕ್ತರು ಬೆಳಗಾವಿ ನಗರ, ಡಿಸಿಪಿ ಕಾನೂನು ಮತ್ತು ಸುವ್ಯವಸ್ಥೆ, ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಎಲ್ಲಾ ಇಲಾಖೆ ಅಧಿಕಾರಿಗಳು ಮತ್ತು ಸಮಿತಿಯ ಸದಸ್ಯರು ಸಭೆಯಲ್ಲಿ ಹಾಜರಿದ್ದರು. ಸಮಿತಿ …
Read More »ಗುತ್ತಿಗೆದಾರ ಸಾವಿನ ವಿಚಾರ ಸತ್ಯಾಂಶ ಹೊರಗೆ ಬರಲಿ; ಸಚಿವ ಸತೀಶ ಜಾರಕಿಹೊಳಿ.
ಬೆಳಗಾವಿ: ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರುನಮ್ಮ ಮೂರ್ನಾಲ್ಕು ತಾಲೂಕುಗಳಲ್ಲಿ ಕಳೆದ ಒಂದು ತಿಂಗಳುಗಳಿಂದ ಮೈಕ್ರೋ ಪೈನಾನ್ಸ್ ಗೊಂದಲ ಸೃಷ್ಠಿಯಾಗಿದೆ.ಸುಮಾರು ಹದಿನೈದು ಸಾವಿರ ಜನಕ್ಕೆ ಜನರಿಗೆ ಗೊತ್ತಿಲ್ಲದೆ ಲೋನ್ ಕೊಟ್ಟಿದ್ದಾರೆ. ಅದು ಸಬ್ಸಿಡಿ ಹಣ ಅಂತಾ ಕೊಟ್ಟಿದ್ದಾರೆ ಅದು ಸಬ್ಸಿಡಿ ಹಣ ಅಲ್ಲಾ ಲೋನ್ ಹಣ ಅದು.ನಾಲ್ಕೈದು ಜನ ಮಹಿಳೆಯರೆ ಇದರ ಬಗ್ಗೆ ನೇತೃತ್ವ ವಹಿಸಿದ್ದಾರೆ.ಈ ವಿಚಾರ ಕುರಿತು ಈಗಾಗಲೇ ಒಬ್ಬರನ್ನ ಅರೆಸ್ಟ್ ಮಾಡಿದ್ದೇವೆ ಇನ್ನು ಇಬ್ಬರ …
Read More »ಮೈಕ್ರೋ ಫೈನಾನ್ಸ್ ಸಂಬಂಧಿತ ಪ್ರಕರಣಗಳು ಶೀಘ್ರದಲ್ಲೇ ಇತ್ಯರ್ಥ; ಸತಿಶ್ ಜಾರಕಿಹೋಳಿ
ಬೆಳಗಾವಿ: ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಇಂದು ನಡೆದ ಸಭೆಯಲ್ಲಿ, ಮೈಕ್ರೋ ಫೈನಾನ್ಸ್ ಸಂಬಂಧಿತ ಪ್ರಕರಣಗಳನ್ನು ಶೀಘ್ರದಲ್ಲೇ ಇತ್ಯರ್ಥಗೊಳಿಸಿ, ಜನರಿಗೆ ನ್ಯಾಯ ಒದಗಿಸುವ ದೃಷ್ಟಿಯಿಂದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಯಿತು. ಈ ವೇಳೆ ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ 2024ರ ನೋಂದಣಿ ಪ್ರಕ್ರಿಯೆ ಪ್ರಾರಂಭದ ಪೋಸ್ಟರ್ ಹಾಗೂ ಬ್ಯಾನರನ್ನು ಅನಾವರಣಗೊಳಿಸಿದ ನಂತರ ಪೌರಕಾರ್ಮಿಕರಿಗೆ ನೇಮಕಾತಿ ಆದೇಶಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಸಕ ಆಸೀಫ್ (ರಾಜು ) …
Read More »ಜ.1 ರಿಂದ ದೇಶಾದ್ಯಂತ ಜಾರಿಗೆ ಬರಲಿವೆ ಈ 25 ಹೊಸ ನಿಯಮಗಳು; ದೈನಂದಿನ ಜೀವನದ ಮೇಲೆ ಬಿರಲಿವೆ ಪರಿಣಾಮ
ಜನವರಿ 1, 2025 ರಿಂದ ಭಾರತದಲ್ಲಿ ಹಲವು ಪ್ರಮುಖ ನಿಯಮಗಳು ಮತ್ತು ನೀತಿಗಳು ಬದಲಾಗಲಿವೆ, ಇದು ವಿವಿಧ ಕ್ಷೇತ್ರಗಳಲ್ಲಿ ನಿಮ್ಮ ದೈನಂದಿನ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಈ ಬದಲಾವಣೆಗಳನ್ನು ನೋಡೋಣ: 1. ಪಡಿತರ ಚೀಟಿ ನಿಯಮಗಳು: ಜನವರಿ 1 ರಿಂದ ಪಡಿತರ ಚೀಟಿ ಹೊಂದಿರುವವರಿಗೆ ಇ-ಕೆವೈಸಿ ಕಡ್ಡಾಯವಾಗಲಿದೆ. ಆದಾಯ ಮಿತಿ ಬದಲಾವಣೆ: ನಗರ ಪ್ರದೇಶದಲ್ಲಿ ₹ 3 ಲಕ್ಷ ಮತ್ತು ಗ್ರಾಮೀಣ ಪ್ರದೇಶದಲ್ಲಿ ₹ 2 ಲಕ್ಷಕ್ಕಿಂತ ಹೆಚ್ಚಿನ …
Read More »ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ಆಗ್ರಹಿಸಿ, ಪೋಸ್ಟರ್ ಅಭಿಯಾನ.
ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ ಕಾರಣರಾದ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ಆಗ್ರಹಿಸಿ ಇಂದು ವಿಧಾನ ಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಪೋಸ್ಟರ್ ಅಭಿಯಾನ ನಡೆಯಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಿ. ಟಿ. ರವಿ, ಪ್ರಮುಖರಾದ ಶ್ರೀ ಜಗದೀಶ್ ಹಿರೇಮನಿ, ಶ್ರೀ ಉಮೇಶ್ ಶೆಟ್ಟಿ, ಮಾಧ್ಯಮ ಪ್ರಕೋಷ್ಠದ ರಾಜ್ಯ ಸಂಚಾಲಕರಾದ ಶ್ರೀ ಕರುಣಾಕರ ಖಾಸಲೆ, ಸಹ ಸಂಚಾಲಕರಾದ ಶ್ರೀ ಪ್ರಶಾಂತ್ ಕೆಡೆಂಜಿ …
Read More »
Laxmi News 24×7