Breaking News

Laxminews 24x7

ಜೈಲಲ್ಲಿ ಮೊಬೈಲ್ ಪತ್ತೆ | ಪ್ರಜ್ವಲ್ ರೇವಣ್ಣ ವಿರುದ್ಧ FIR – ಸಿಸಿಬಿ ಇನ್ಸ್‌ಪೆಕ್ಟರ್‌ ನೀಡಿದ ದೂರಿನಲ್ಲೇನಿದೆ?

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದ್ದು, ಈ ಸಂಬಂಧ ಎಫ್‌ಐಆರ್  ದಾಖಲಾಗಿದೆ. ಸಿಸಿಬಿ ಅಧಿಕಾರಿಗಳ ದಾಳಿ ವೇಳೆ ಮೊಬೈಲ್ ಪತ್ತೆಯಾಗಿದ್ದು, ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸಿಸಿಬಿ ಇನ್ಸ್‌ಪೆಕ್ಟರ್‌ ಸುಬ್ರಮಣ್ಯಸ್ವಾಮಿ ಅವರು ಪೊಲೀಸರಿಗೆ ವಿವರವಾದ ದೂರು ನೀಡಿದ್ದಾರೆ. ದೂರಿನಲ್ಲೇನಿದೆ? ಬೆಂಗಳೂರು ನಗರ …

Read More »

ಶಿವಂ ಅಸೋಸಿಯೇಟ್ಸ್, ಅಂಗ ಸಂಸ್ಥೆಗಳಿಂದ ಸುಮಾರು 2110 ಕೋಟಿ ವಂಚನೆ: ಇಡಿ

ಬೆಳಗಾವಿ: ಶಿವಂ ಅಸೋಸಿಯೇಟ್ಸ್ (ವಿರುದ್ಧದ ವಂಚನೆ ಪ್ರಕರಣಕ್ಕೆ ಇದೀಗ ಜಾರಿ  ನಿರ್ದೇಶನಾಲಯ (ED) ಎಂಟ್ರಿಯಾಗಿದೆ. ದಾಳಿ ಬಳಿಕ ಇಡಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಕಂಪನಿ ಮೂಲಕ ನಡೆದಿದೆ ಎನ್ನಲಾದ ಹಣಕಾಸು ವಂಚನೆಯ ಹಲವು ವಿವರಗಳು ಬಹಿರಂಗವಾಗಿವೆ. ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ವಿರುದ್ಧ ಜಿಲ್ಲಾಡಳಿತ ಸಾರಿದ್ದ ಸಮರದ ಬಳಿಕ ಇದೀಗ ಪ್ರಕರಣವನ್ನು ಜಾರಿ ನಿರ್ದೇಶನಾಲಯ  ಕೈಗೆತ್ತಿಕೊಂಡಿತ್ತು. ದಾಳಿ ನಡೆಸಿದ ಬಳಿಕ ಇಡಿ ತನ್ನ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದು, ಶಿವಾನಂದ ನೀಲಣ್ಣವರ್ ಒಡೆತನದ …

Read More »

ಡಿಕೆಶಿ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

ಬೆಂಗಳೂರು: ಹಲವು ಸುತ್ತಿನ ಸಭೆಯ ಬಳಿಕ ಡಿಕೆ ಶಿವಕುಮಾರ್‌  ಸಂಪುಟದ ಮಂತ್ರಿಗಳಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಚಲುವರಾಯಸ್ವಾಮಿ ಅವರಿಗೆ ಕೃಷಿ, ಜಮೀರ್‌ ಅಹ್ಮದ್‌ ಅವರಿಗೆ ಗೃಹ ಮತ್ತು ವಕ್ಫ್‌ ಖಾತೆಯನ್ನು ನೀಡಲಾಗಿದೆ. ಸಿದ್ದರಾಮಯ್ಯ ಸಂಪುಟದಲ್ಲಿ ಮುನಿಯಪ್ಪ ಅವರಿಗೆ ಆಹಾರ ಖಾತೆಯನ್ನು ನೀಡಲಾಗಿತ್ತು. ಆದರೆ ಈ ಬಾರಿ ಸಮಾಜ ಕಲ್ಯಾಣ ಸಚಿವಾಲಯವನ್ನು ನೀಡಲಾಗಿದೆ. ಮುನಿಯಪ್ಪ ಅವರು ಸಮಾಜಕಲ್ಯಾಣ ಖಾತೆ ಬೇಕೇಂದು ಪಟ್ಟು ಹಿಡಿದಿದ್ದರು. ಅದರಂತೆ ಈಗ ಆ ಖಾತೆಯನ್ನೇ ಹಂಚಿಕೆ ಮಾಡಲಾಗಿದೆ. …

Read More »

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ದಿಢೀರ್‌ ರಾಜೀನಾಮೆ

ಮುಂಬೈ: ಟಾಟಾ ಸನ್ಸ್ ಕಾರ್ಯಾಧ್ಯಕ್ಷ ಎನ್. ಚಂದ್ರಶೇಖರನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಪ್ರಸ್ತುತ ಅವಧಿ ಪೂರ್ಣಗೊಂಡ ನಂತರ ಮರುನೇಮಕಗೊಳ್ಳಲು ತಾನು ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆಗಸ್ಟ್ 18 ರಂದು ನಡೆಯಲಿರುವ ಟಾಟಾ ಸನ್ಸ್ ವರ್ಷಿಕ ಮಹಾಸಭೆಗೂ ಮುನ್ನವೇ ಈ ಮಹತ್ವದ ಬೆಳವಣಿಗೆ ನಡೆದಿದೆ. 2027ರ ಫೆಬ್ರವರಿವರೆಗೆ ಚಂದ್ರಶೇಖರನ್ ಅವರ ಅಧಿಕಾರವಧಿ ಇದೆ. ಆಗಸ್ಟ್ 18ರ ಎಜಿಎಂ ಸಭೆಯಲ್ಲಿ ಅವರ ಮರುನೇಮಕದ ಕುರಿತು ಪಾಲುದಾರರು ಮತದಾನ ಮಾಡಬೇಕಿತ್ತು. ಈ …

Read More »

ಯತೀಂದ್ರಗೆ ಆರೋಗ್ಯ ಇಲಾಖೆ? – ವಕ್ಫ್ ಖಾತೆಗೆ ಖಾದರ್‌ ಬೇಡಿಕೆ

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಸಚಿವರ ಖಾತೆ ಹಂಚಿಕೆಗೆ ತೀವ್ರ ಕುತೂಹಲ ಮೂಡಿದ್ದು, ಕಡೆಗಳಿಗೆಯಲ್ಲಿ ಪ್ರಮುಖ ಖಾತೆಗಳಿಗಾಗಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಸಚಿವ ಯು.ಟಿ. ಖಾದರ್ ಅವರ ಬಳಿ ಇರುವ ಆರೋಗ್ಯ ಇಲಾಖೆಯನ್ನು ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ವಹಿಸುವ ಸಾಧ್ಯತೆಗಳಿವೆ. ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯನ್ನು ತಮಗೆ ನೀಡಿದರೆ, ಆರೋಗ್ಯ ಇಲಾಖೆಯನ್ನು ಬಿಟ್ಟುಕೊಡಲು ಯು.ಟಿ. ಖಾದರ್ ಸಮ್ಮತಿಸಿದ್ದಾರೆ ಎನ್ನಲಾಗಿದೆ. ಈಗ ಜಮೀರ್ ಅಹಮದ್ ಖಾನ್ ಅವರಿಗೆ ವಕ್ಫ್ ಹಾಗೂ …

Read More »

ವಾಟಾಳ್ ಕರೆ ನೀಡಿದ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕನ್ನಡ ವಾಟಾಳ್ ನಾಗರಾಜ್  ನೇತೃತ್ವದಲ್ಲಿ ಕರೆ ನೀಡಲಾಗಿರುವ ಕರ್ನಾಟಕ ಬಂದ್‌ ತಮ್ಮ ಬೆಂಬಲವಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ. ಬಂದ್‌ನಿಂದ ಸಾರ್ವಜನಿಕರಿಗೆ ತೊಂದರೆಯೇ ಹೆಚ್ಚು. ಹೀಗಾಗಿ ಈಗಿನ ಪರಿಸ್ಥಿತಿಯಲ್ಲಿ ಬಂದ್ ನಡೆಸುವುದು ಬೇಡ., ಅದರ ಬದಲು ವಿಭಿನ್ನ ರೀತಿಯಲ್ಲಿ ಹೋರಾಟ ಮಾಡೋಣ ಎಂದು ವಾಟಾಳ್ ನಾಗರಾಜ್ ಅವರಿಗೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ. …

Read More »

ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದು ಮೈತುಂಬ ಸಾಲ – ಗೃಹಿಣಿ ನೇಣಿಗೆ ಶರಣು

ನೆಲಮಂಗಲ: ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದ ಗೃಹಿಣಿ ಲಕ್ಷಾಂತರ ರೂಪಾಯಿ ಕಳೆದುಕೊಂಡು ಸಾಲಬಾಧೆ ತಾಳಲಾರದೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು) ಹೊರವಲಯ ನೆಲಮಂಗಲ ತಾಲೂಕಿನ ಬೊಮ್ಮನಹಳ್ಳಿಯಲ್ಲಿ  ನಡೆದಿದೆ. ರಂಜಿತಾ (28) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಗೃಹಿಣಿ. ನೆಲಮಂಗಲದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಮೃತ ರಂಜಿತಾ 10 ವರ್ಷಗಳ ಹಿಂದೆ ಅರುಣ್ ಎಂಬುವವರ ಜೊತೆ ಮದುವೆಯಾಗಿದ್ದರು. ಗುಲ್ಬರ್ಗಾ ನಿವಾಸಿಗಳಾದ ದಂಪತಿ ಕಳೆದ 5 ವರ್ಷದಿಂದ ನೆಲಮಂಗಲದ …

Read More »

ಪರಪ್ಪನ ಅಗ್ರಹಾರದಲ್ಲಿ ಸಿಸಿಬಿ ರೇಡ್ ಮಾಡಿಸಿದ್ದು ನಾನೇ: ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಬೆಂಗಳೂರು: ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ. ರೇಡ್ ವೇಳೆ ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿಸಿಬಿ ರೇಡ್  ಮಾಡಿಸಿದ್ದು ನಾನೇ. ರೇಡ್ ಆಗಬೇಕಾದರೂ ಗೃಹ ಇಲಾಖೆಯ ಅನುಮತಿ ಬೇಕು. ಎರಡು ವಾರದ ಹಿಂದೆ ನಾನು ಪರಪ್ಪನ ಅಗ್ರಹಾರಕ್ಕೆ ಹೋಗಿದ್ದೆ. ಅಲ್ಲಿ ಕೆಲವು ಲೋಪಗಳಾಗಿದ್ದವು. ಹೀಗಾಗಿ ಮುಖ್ಯಮಂತ್ರಿಗಳ ಅನುಮತಿ ಪಡೆದು …

Read More »

ಉಡುಪಿ ಶ್ರೀಕೃಷ್ಣ ಮಠಕ್ಕೆ ಅಣ್ಣಾಮಲೈ ಭೇಟಿ; ಅಭಿಮಾನಿಗಳಿಂದ ಆತ್ಮೀಯ ಸ್ವಾಗತ

ಉಡುಪಿ: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ  ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು. ಮಠದ ವತಿಯಿಂದ ಅಣ್ಣಾಮಲೈ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಕನಕ ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣ ದೇವರ ದರ್ಶನ ಪಡೆದ ಅಣ್ಣಾಮಲೈ, ಬಳಿಕ ಶ್ರೀಮಠದ ಪ್ರಸಾದ ಸ್ವೀಕರಿಸಿದರು. ಈ ವೇಳೆ ಮಠದ ವತಿಯಿಂದ ಪ್ರಸಾದ ಹಾಗೂ ಕೃಷ್ಣದೇವರ ಭಾವಚಿತ್ರ ನೀಡಿ ಅವರನ್ನು ಗೌರವಿಸಲಾಯಿತು. ಅಣ್ಣಾಮಲೈ ಅವರು ಈ ಹಿಂದೆ ಉಡುಪಿಯಲ್ಲಿ ಪೊಲೀಸ್ …

Read More »

ಕರ್ನಾಟಕದಲ್ಲಿ 1 ವರ್ಷ ಗುಟ್ಕಾ, ಪಾನ್ ಮಸಾಲಾ ನಿಷೇಧ

ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾಗಳ  ಉತ್ಪಾದನೆ, ಶೇಖರಣೆ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ರಾಜ್ಯಾದ್ಯಂತ ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿದೆ. ಆಹಾರ ಭದ್ರತೆ ಮತ್ತು ಗುಣಮಟ್ಟ ಕಾಯ್ದೆ-2006 ರ ಸೆಕ್ಷನ್ 30(2)(a) ಹಾಗೂ ಆಹಾರ ಭದ್ರತೆ ಮತ್ತು ಗುಣಮಟ್ಟ (ಮಾರಾಟ ನಿಷೇಧ ಮತ್ತು ನಿರ್ಬಂಧಗಳು) ನಿಯಮಾವಳಿಗಳು-2011 ರ ನಿಯಮ 2.3.4 ರ ಅಡಿಯಲ್ಲಿ ರಾಜ್ಯ ಆಹಾರ ಸುರಕ್ಷತಾ ಆಯುಕ್ತರು …

Read More »