ಹಾಸನ : ಹಾಸನ ಜಿಲ್ಲೆಯಲ್ಲೊಂದು ಘೋರ ದುರಂತವೊಂದು ಸಂಭವಿಸಿದ್ದು, ಆನ್ ಲೈನ್ ಗೇಮ್ ಚಟಕ್ಕೆ ಬಿದ್ದು ಒಂದು ಇಡೀ ಕುಟುಂಬವೇ ಸಾವಿಗೆ ಶರಣಾಗಿದೆ. ಹೌದು, ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕೆರೆಬೀದಿಯಲ್ಲಿ ಆನ್ ಲೈನ್ ಗೇಮ್ ಚಟಕ್ಕೆ ಬಿದ್ದು, ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಗಂಡ-ಹೆಂಡತಿ ಹಾಗೂ ಪುತ್ರಿ ಮೂವರು ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ಶ್ರೀನಿವಾಸ್(43), ಶ್ವೇತಾ(36) …
Read More »ನಾಳೆ ರಾಜ್ಯಾದ್ಯಂತ ಒಪಿಡಿ ಸೇವೆ ಬಂದ್
ಕೋಲ್ಕತ್ತಾ ವೈದ್ಯೆಯ ರೇಪ್ & ಮರ್ಡರ್ ಕೇಸ್ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ನಾಳೆ ರಾಜ್ಯಾದ್ಯಂತ ಒಪಿಡಿ ಸೇವೆ ಬಂದ್ ಮಾಡಲು ನಿರ್ಧರಿಸಲಾಗಿದೆ. ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ನಾಳೆ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳ ವೈದ್ಯರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ನಾಳೆ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳ ವೈದ್ಯರು ಮುಷ್ಕರಕ್ಕೆ ಕರೆ ನೀಡಿದ್ದು, ಒಪಿಡಿ ಸೇವೆ ಮಾತ್ರ ಬಂದ್ ಇರಲಿದೆ. ಎಮರ್ಜೆನ್ಸಿ ಸೇವೆ ಎಂದಿನಂತೆ ಸಾರ್ವಜನಿಕರಿಗೆ ಲಭ್ಯವಿರುತ್ತದೆ ಎಂದು …
Read More »ಸಕ್ಕರೆ ನಾಡಿನಲ್ಲಿ ನಿಲ್ಲದ ಹೆಣ್ಣು ಭ್ರೂಣ ಹತ್ಯೆ; ಆಲೆಮನೆ ಬಳಿಕ ತೋಟದ ಮನೆಯಲ್ಲೂ ಕೃತ್ಯ!
ಸಕ್ಕರೆ ನಾಡಿನಲ್ಲಿ ನಿಲ್ಲದ ಹೆಣ್ಣು ಭ್ರೂಣ ಹತ್ಯೆ; ಆಲೆಮನೆ ಬಳಿಕ ತೋಟದ ಮನೆಯಲ್ಲೂ ಕೃತ್ಯ! ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ (Mandya) ಹೆಣ್ಣು ಭ್ರೂಣ ಪತ್ತೆ (Female Foeticide Racket) ಹಾಗೂ ಹತ್ಯೆ ದಂಧೆಯನ್ನು ಅಧಿಕಾರಿಗಳು ಬೇಧಿಸಿದ್ದಾರೆ. ಮಾವಿನಕೆರೆಯ ಆಲೆಮನೆ, ಹೆಲ್ತ್ ಕ್ವಾರ್ಟಸ್ ಬಳಿ ತೋಟದ ಮನೆಯಲ್ಲಿ (Farmhouse) ಭ್ರೂಣ ಲಿಂಗ ಪತ್ತೆ ಮಾಡ್ತಿದ್ದಾಗಲೇ ದಾಳಿ ಮಾಡಿದ ಡಿಹೆಚ್ಒ ಡಾ. ಮೋಹನ್ ನೇತೃತ್ವದ ತಂಡ ಮೂವರನ್ನು ಬಂಧಿಸಿದ್ದಾರೆ. ಸ್ಕ್ಯಾನಿಂಗ್ (Scanning) …
Read More »ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು ದಿನಾಂಕ ಘೋಷಣೆ..?
ಬೆಂಗಳೂರು,ಆ.16- ಲೋಕಸಭೆ ಚುನಾವಣೆ ಕಾವು ಮುಗಿದ ಬೆನ್ನಲ್ಲೇ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಇಂದು ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆಯಿದೆ. ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾವಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಎದುರಾಗಿದ್ದು, ಆಯೋಗ ಇಂದು ಸಮಯವನ್ನು ನಿಗದಿಪಡಿಸುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ ಸೆಪ್ಟಂಬರ್ ತಿಂಗಳ ಕೊನೆಯ ವಾರದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ರಾಮನಗರ ಜಿಲ್ಲೆ, ಚನ್ನಪಟ್ಟಣ, ಬಳ್ಳಾರಿ ಜಿಲ್ಲೆಯ ಸಂಡೂರು ಮತ್ತು ಹಾವೇರಿ …
Read More »ಪಂಚ ಗ್ಯಾರಂಟಿ’ಗಳಿಂದ 4.40 ಕೋಟಿ ಜನರಿಗೆ ಪ್ರಯೋಜನ
ಬೆಂಗಳೂರು: ಗ್ಯಾರಂಟಿ ಯೋಜನೆಗಳು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಜೀವನಾಧಾರವಾಗಿವೆ. 4.40 ಕೋಟಿ ಜನರಿಗೆ ಈ ಐದು ಗ್ಯಾರಂಟಿ ಯೋಜನೆಗಳ ಪ್ರಯೋಜನ ಸಿಗುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತು ಕಾಂಗ್ರೆಸ್ ಪ್ರಕಟಣೆ ಹೊರಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಗ್ಯಾರಂಟಿ ಯೋಜನೆಗಳು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಜೀವನಾಧಾರವಾಗಿವೆ. 4.40 ಕೋಟಿ ಜನರಿಗೆ ಈ ಐದು ಗ್ಯಾರಂಟಿ ಯೋಜನೆಗಳ ಪ್ರಯೋಜನ …
Read More »ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ: ಹಲವರಿಗೆ ಗಾಯ
ಮಂಗಳೂರು: ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಘಟನೆಯಲ್ಲಿ ಹಲವು ಮಂದಿಗೆ ಗಾಯವಾಗಿದೆ ಅಂತ ತಿಳಿದು ಬಂದಿದೆ. ಬಿಸಿ ರೋಡ್ ರಾಷ್ಟ್ರೀಯ ಹೆದ್ದಾರಿ ಪರಂಗಿಪೇಟೆ ಸಮೀಪದ ಹತ್ತನೇ ಮೈಲಿಕಲ್ಲು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿದ್ದು ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಎಸ್ಕೆಎಸ್ಎಸ್ಎಫ್ ಆಂಬ್ಯುಲೆನ್ಸ್ ಚಾಲಕ ಇಬ್ರಾನ್, ಕೆಜಿಎನ್ ಆಂಬ್ಯುಲೆನ್ಸ್ನ …
Read More »ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿಸಲು ಹೈಕಮಾಂಡ್ ನಿರ್ಧಾರ?
ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ದೊಡ್ಡ ಬದಲಾವಣೆ ಮಾಡಲು ಇದೀಗ ದೆಹಲಿಯಿಂದ ಕಾಂಗ್ರೆಸ್ ಹೈಕಮಾಂಡ್ ವರಿಷ್ಠರು ಪ್ಲಾನ್ ಮಾಡಿದ್ದಾರೆ ಎಂಬ ಸುದ್ದಿ ಸಂಚಲನ ಸೃಷ್ಟಿಸಿದೆ. ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ’ ಸೈಟುಗಳ ಹಂಚಿಕೆಯಲ್ಲಿ ಅಕ್ರಮ ಆರೋಪ ಕೇಳಿಬಂದಿದೆ. ಈ ಆರೋಪದ ಬೆನ್ನಲ್ಲೇ ಕಾಂಗ್ರೆಸ್ ಕೇಂದ್ರ ನಾಯಕರು ಎಂತಹ ನಿರ್ಧಾರ ಕೈಗೊಂಡಿದ್ದಾರೆ ಗೊತ್ತೆ? ಹಾಗಾದರೆ ಸಿಎಂ ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನಕ್ಕೆ ಈಗ ಕಂಟಕ ಎದುರಾಗಿದೆಯಾ? ಬನ್ನಿ ತಿಳಿಯೋಣ
Read More »ಸ್ವಾತಂತ್ರ್ಯ ದಿನಾಚರಣೆ ವೇಳೆ ಹಲ್ಲಿನಿಂದ ಕಾರು ಎಳೆದು ಗಮನ ಸೆಳೆದ ಯುವಕ
ರಾಯಚೂರು: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆ ವೇಳೆ ಯುವಕ ಹಲ್ಲಿನಿಂದ ಕಾರು ಎಳೆಯುವ ಮೂಲಕ ಗಮನ ಸೆಳೆದ. ಮಾನ್ವಿ ಸತೀಶ ಕೋನಾಪುರ ಪೇಟೆ ಸ್ವೀಫ್ಟ್ ಡಿಸೈರ್ ಕಾರಿಗೆ ಹಗ್ಗ ಕಟ್ಟಿ ಹಲ್ಲಿನಿಂದಲೇ ಎಳೆದರು. ಸುಮಾರು 100 ಮೀಟರ್ ಗಿಂತ ಹೆಚ್ಚು ದೂರ ಕಾರು ಎಳೆಯುವ ಮೂಲಕ ನೆರೆದವರ ಮೆಚ್ಚುಗೆಗೆ ಪಾತ್ರವಾದ. ಇದರ ಜತೆಗೆ ಅಗ್ನಿ ಶಾಮಕ ದಳದಿಂದಲೂ ಅಗ್ನಿ ಅವಘಡಗಳ ನಿರ್ವಹಣೆ ಕುರಿತು ಪ್ರಾತ್ಯಕ್ಷಿತೆ ಪ್ರದರ್ಶಿಸಲಾಯಿತು. …
Read More »ಓಲೈಕೆ ಮಾಡಿದರೆ ಬಾಂಗ್ಲಾದಂತೆ ನಮ್ಮಲ್ಲೂ ದೇವಸ್ಥಾನಕ್ಕೆ ಬೆಂಕಿ: ಯತ್ನಾಳ್
ವಿಜಯಪುರ :‘ಮುಸ್ಲಿಂ ಓಲೈಕೆಯಿಂದ, ನಿಮ್ಮ ದೇವರ ಗುಡೀನೆ ಉಳಿಯೋದಿಲ್ಲ. ಯಾವ ದೇವರಿಗೆ ಹೋಗಿ ಕೈ ಮುಗಿಯುವವರು ಇದ್ದೀರಾ. ಬಾಂಗ್ಲಾದಲ್ಲಿ ಏನಾಯ್ತು? ಸ್ವಾಮಿ ನಾರಾಯಣ ಟೆಂಪಲ್ 2 ಸಾವಿರ ಕೋಟಿ ರೂಪಾಯಿ ದೇವಸ್ಥಾನ, ಮುಸ್ಲಿಮರಿಗೆಗೆ ಅಲ್ಲಿ ಅನ್ನ ಹಾಕಿದರೂ ಅವರು ದೇವಸ್ಥಾನಕ್ಕೆ ಬೆಂಕಿ ಹಚ್ಚಿದರು, ನಾನೇನು ಸುಳ್ಳು ಹೇಳುತ್ತಿಲ್ಲ” ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಕಿಡಿ ಕಾರಿದ್ದಾರೆ. ಗುರುವಾರ ನಗರದಲ್ಲಿ ಸ್ವಾತಂತ್ರ್ಯ ಸೇನಾನಿ ನೇತಾಜಿ ಸುಭಾಶ್ಚಂದ್ರ ಬೋಸ್ …
Read More »“ಚನ್ನಪಟ್ಟಣದಲ್ಲಿ ಅಭ್ಯರ್ಥಿ ನಾನೇ” ಎಂದ ಡಿ.ಕೆ.ಶಿವಕುಮಾರ್
ಬೆಂಗಳೂರು: ”ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ನಾನೇ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ(ಆಗಸ್ಟ್ 15) ಹೇಳಿದ್ದಾರೆ. ನೆಲಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ‘ಚನ್ನಪಟ್ಟಣದಿಂದ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ‘ನಾನೇ ಅಭ್ಯರ್ಥಿ’ ಎಂದು ಹೆಚ್ಚಿನ ವಿವರಣೆ ನೀಡಿಲ್ಲ.’ಪಕ್ಷದಿಂದ ಯಾರೇ ಸ್ಪರ್ಧಿಸಿದರೂ ಅಭ್ಯರ್ಥಿ ನಾನೇ’ ಎಂದು ಈ ಹಿಂದೆಯೂ ಶಿವಕುಮಾರ್ ಹೇಳಿದ್ದರು. ಚನ್ನಪಟ್ಟಣದಲ್ಲಿ ಪ್ರಥಮ ಬಾರಿಗೆ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿ ರಾಷ್ಟ್ರಧ್ವಜಾರೋಹಣ …
Read More »
Laxmi News 24×7