Breaking News

Laxminews 24x7

ಗಣಿಗಾರಿಕೆ ಅಕ್ರಮಗಳ ತನಿಖೆಯ ಎಸ್​ಐಟಿ ಕಾರ್ಯಾವಧಿ ವಿಸ್ತರಿಸಿದ ರಾಜ್ಯ ಸರ್ಕಾರ

ಬೆಂಗಳೂರು, ಅಕ್ಟೋಬರ್​ 10: ಗಣಿಗಾರಿಕೆ ಅಕ್ರಮಗಳ ಕುರಿತ ತನಿಖೆಯ ಎಸ್‌ಐಟಿ ಕಾರ್ಯಾವಧಿಯನ್ನು ಜುಲೈ 1ರಿಂದ ಒಂದು ವರ್ಷ ವಿಸ್ತರಿಸಿದೆ. ಇಂದು ಸಿಎಂ ಸಿದ್ದರಾಮಯ್ಯ(Siddaramaiah)ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡು ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಸಂಪುಟ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್‌​ಕೆ ಪಾಟೀಲ್​, ಗಣಿಗಾರಿಕೆ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಇದೀಗ ಅದರ ಅವಧಿ …

Read More »

ವಾರಾಂತ್ಯದ ರಜೆ: ರಸ್ತೆಗಳಲ್ಲಿ ದಟ್ಟಣೆ

ಬೆಂಗಳೂರು: ದಸರಾ ಮಹೋತ್ಸವ ಸಂದರ್ಭದಲ್ಲಿ ವಾರಾಂತ್ಯ ಮೂರು ದಿನಗಳು ರಜೆ ಇರುವುದರಿಂದ ಪ್ರವಾಸ, ಧಾರ್ಮಿಕ ಸ್ಥಳ ಹಾಗೂ ಊರಿಗೆ ತೆರಳುವರ ಸಂಖ್ಯೆ ಹೆಚ್ಚಾಗಿದ್ದು, ನಗರದ ಬಸ್‌ ನಿಲ್ದಾಣಗಳೆಲ್ಲ ಗುರುವಾರ ಪ್ರಯಾಣಿಕರಿಂದ ಭರ್ತಿಯಾಗಿದ್ದವು. ನಗರದಿಂದ ಹೊರಟ ಎಲ್ಲ ಬಸ್‌ಗಳು ಪ್ರಯಾಣಿಕರಿಂದ ತುಂಬಿದ್ದವು. ಬುಧವಾರ ರಾತ್ರಿಯಿಂದಲೇ ಜನರು ಊರಿನತ್ತ ತೆರಳಿದ್ದು ಕಂಡುಬಂತು. ಕೆಂಪೇಗೌಡ ಬಸ್‌ನಿಲ್ದಾಣ, ಯಶವಂತಪುರ, ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ, ಕಂಟೋನ್ಮೆಂಟ್‌ ಹಾಗೂ ಬೈಯಪ್ಪನಹಳ್ಳಿ ನಿಲ್ದಾಣದಲ್ಲೂ ಪ್ರಯಾಣಿಕರ ದಟ್ಟಣೆಯಿತ್ತು. ಸುತ್ತಮುತ್ತಲಿನ ರಸ್ತೆಗಳಲ್ಲಿ …

Read More »

ದರ್ಶನ್‌ ಜಾಮೀನು ಅರ್ಜಿ: ಅ.14ಕ್ಕೆ ಆದೇಶ

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಅಪಹರಣ, ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿರುವ 57ನೇ ಸಿಸಿಎಚ್‌ ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿತು. ಮುಂದುವರಿದ ವಾದ-ಪ್ರತಿವಾದವನ್ನು ಗುರುವಾರವೂ ಆಲಿಸಿದ ನ್ಯಾಯಾಧೀಶ ಜೈಶಂಕರ್ ಅವರು ಅಕ್ಟೋಬರ್‌ 14ಕ್ಕೆ ಜಾಮೀನು ಅರ್ಜಿಗೆ ಸಂಬಂಧಿಸಿದ ಆದೇಶವನ್ನು ಪ್ರಕಟಿಸುವುದಾಗಿ ಹೇಳಿದರು. ಅದೇ ದಿನವೇ, ದರ್ಶನ್ ಆಪ್ತರಾದ ಪವಿತ್ರಾಗೌಡ, ರವಿಶಂಕರ್, ನಾಗರಾಜ್‌, ಲಕ್ಷ್ಮಣ್‌ ಹಾಗೂ ದೀಪಕ್‌ ಅವರ ಜಾಮೀನು ಅರ್ಜಿ ಆದೇಶವೂ ಪ್ರಕಟ …

Read More »

ಮಹಿಳೆಗೆ ನಂಬಿಸಿ ಹಣ ದೋಚಿದ 71 ವರ್ಷದ ನಿವೃತ್ತ ನೌಕರ

ಹುಬ್ಬಳ್ಳಿ, ಅ.10: ಹಲವು ಊಹೆಗೂ ಮೀರಿದ ವಿಚಿತ್ರ, ವಿಶೇಷ ಘಟನೆಗಳು ನಡೆಯುತ್ತಿರುತ್ತದೆ. 70 ವರ್ಷದ ಶ್ರೀಮಂತ ವ್ಯಕ್ತಿಯ ಜೊತೆಗೆ 21 ರ ಯುವತಿ ಮದುವೆ, ತಂದೆಯೇ ಮಗಳನ್ನುಮದುವೆಯಾಗುವಪದ್ದತಿ ಸೇರಿದಂತೆ ಅನೇಕ ಚಿತ್ರ ವಿಚಿತ್ರ ಸನ್ನಿವೇಷಗಳು ಜರುಗುತ್ತವೆ. ಅದರಂತೆ ಇದೀಗ ‘ನನಗೆ ಡಿವೋರ್ಸ್ ಆಗಿದೆ ಎಂದು ನಂಬಿಸಿ ಮಹಿಳೆಗೆ ಮೋಸ ಮಾಡಿದ 71 ವರ್ಷದ ನಿವೃತ್ತ ನೌಕರನಿಗೆ ಧರ್ಮದೇಟು ಕೊಟ್ಟ ಘಟನೆ ಹುಬ್ಬಳ್ಳಿ(Hubli)ಯ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ. ಮಹಿಳೆಗೆ …

Read More »

9600 Bus: ರಸ್ತೆಗಳಿಯಲಿವೇ ‘ಐರಾವತ ಕ್ಲಬ್ ಕ್ಲಾಸ್ 2.0’ ಬಸ್‌: ರಾಮಲಿಂಗಾ ರೆಡ್ಡಿ

ಬೆಂಗಳೂರು, ಅಕ್ಟೋಬರ್ 07: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಹೊಸ ಬಸ್ ಖರೀದಿ ಪ್ರಕ್ರಿಯೆ ಮುಂದುವರೆಸಿದೆ. ಜನ ಸಾಮಾನ್ಯರಿಗೆ ಉತ್ತಮ ಅನುಭವ ನೀಡುವ ಉದ್ದೇಶದಿಂದ ಹೊಸ 9600 ವೋಲ್ವೊ ಮಲ್ಟಿಎಕ್ಸೆಲ್ ಮಾದರಿಯ ‘ಐರಾವತ ಕ್ಲಬ್ ಕ್ಲಾಸ್ 2.0’ ಬಸ್‌ಗಳನ್ನು ಖರೀದಿಸುತ್ತಿದೆ. ಈಗಾಗಲೇ ಒಂದನ್ನು ಪ್ರಾಯೋಗಿಕವಾಗಿ ಪರಿಶೀಲಿಸಿರುವ ಸಾರಿಗೆ ಸಚಿವರು ಇಂದು ಖುದ್ದು ತಯಾರಿಕಾ ಘಟಕ್ಕೆ ಭೇಟಿ ನೀಡಿ ವೀಕ್ಷಿಸಿದ್ದಾರೆ. ಹೌದು, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಸೋಮವಾರ …

Read More »

ಮುಖ್ಯಮಂತ್ರಿ ಆಕಾಂಕ್ಷಿತರಲ್ಲಿ ಡಿ.ಕೆ.ಶಿವಕುಮಾರ್ ಮೊದಲಿಗರು: ಬಿ.ವೈ.ವಿಜಯೇಂದ್ರ

ಹುಬ್ಬಳ್ಳಿ: ‘ಮುಖ್ಯಮಂತ್ರಿ ಆಕಾಂಕ್ಷಿಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಇರುವವರೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಐದು ವರ್ಷ ಅವಧಿ ಪೂರ್ಣಗೊಳಿಸುವರು ಎಂದು ಹೇಳುವವರೇ ಮುಖ್ಯಮಂತ್ರಿ ಆಕಾಂಕ್ಷಿಗಳ ಪಟ್ಟಿಯಲ್ಲಿದ್ದಾರೆ. ಅವರಲ್ಲಿ ಡಿ.ಕೆ.ಶಿವಕುಮಾರ್ ಮೊದಲಿಗರು’ ಎಂದರು. ‘ಸಿದ್ದರಾಮಯ್ಯ ಅವರು ಸೂಚಿಸುವ ವ್ಯಕ್ತಿಗಳೇ ಸಹಜವಾಗಿ ಮುಖ್ಯಮಂತ್ರಿಯಾಗುತ್ತಾರೆ. ಹೀಗಾಗಿ ಅವರನ್ನು ಓಲೈಸಿಕೊಳ್ಳಲು ಪದೇ ಪದೇ …

Read More »

ಆಯುಧ ಪೂಜೆಗೆ ಸಿದ್ಧತೆ: ಕುಂಬಳಕಾಯಿ ಮಾರಾಟ ಜೋರು

ಆಯುಧ ಪೂಜೆಗೆ ಸಿದ್ಧತೆ: ಕುಂಬಳಕಾಯಿ ಮಾರಾಟ ಜೋರು ಹುಬ್ಬಳ್ಳಿ: ದಸರಾ ಹಬ್ಬದ ನಿಮಿತ್ತ ಅ.11ರಂದು ನಡೆಯುವ ಆಯುಧ ಪೂಜೆಯ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಕುಂಬಳಕಾಯಿ, ಬೂದ ಕುಂಬಳಕಾಯಿ, ಬಾಳೆ ಕಂದು, ನಿಂಬೆಹಣ್ಣು ಹಾಗೂ ಹೂವಿನ ಮಾರಾಟ ಜೋರಾಗಿದೆ. ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ವೃತ್ತ, ದುರ್ಗದ ಬೈಲು ಮಾರುಕಟ್ಟೆ, ಜನತಾ ಬಜಾರ್, ಕೇಶ್ವಾಪುರ, ಹಳೇ ಹುಬ್ಬಳ್ಳಿ ಹಾಗೂ ಗೋಕುಲ ರಸ್ತೆಯ ಬದಿ ಸೇರಿದಂತೆ ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಈಗಾಗಲೇ …

Read More »

ಸಮಸ್ಯೆಗಳ ನಡುವೆಯೇ ನಿತ್ಯದ ಬದುಕು

ಹುಬ್ಬಳ್ಳಿ: ಕಿರಿದಾದ ಮಣ್ಣಿನ ರಸ್ತೆಗಳು, ಚರಂಡಿ ವ್ಯವಸ್ಥೆ ಇಲ್ಲ. ಪದೇ ಪದೇ ರಸ್ತೆಯಲ್ಲಿಯೇ ಹರಿಯುವ ಗಟಾರದ ಕೊಳಚೆ ನೀರು, ಮಳೆಗಾಲದ ವೇಳೆ ಮನೆಯೊಳಗೆ ನುಗ್ಗುವ ಗಲೀಜು ನೀರು, ರಸ್ತೆ ಬದಿಯಲ್ಲಿಯೇ ತ್ಯಾಜ್ಯದ ರಾಶಿ, ಸಂಜೆಯಾಗುತ್ತಿದ್ದಂತೆ ಸೊಳ್ಳೆಗಳ ಹಾವಳಿ, ಕೊಳಚೆ ನೀರು ಮಿಶ್ರಿತ ಕುಡಿಯುವ ನೀರು ಪೂರೈಕೆ, ಪಾಲಿಕೆಗೆ ಸಕಾಲಕ್ಕೆ ತೆರಿಗೆ ಪಾವತಿಸಿದರೂ ಸಿಗದ ಮನೆಯ ಹಕ್ಕುಪತ್ರ.   -ಇದು ಹು-ಧಾ ಮಹಾನಗರ ಪಾಲಿಕೆ ವ್ಯಾಪ್ತಿಯ 49 ವಾರ್ಡ್‌ನಲ್ಲಿನ ಹನುಮಂತ ನಗರ, ಶೆಟ್ಟರ …

Read More »

ರಭಸದ ಗಾಳಿ, ಮಳೆ: ನೆಲಕಚ್ಚಿದ ಟೊಮೆಟೊ, ಹಾಗಲಕಾಯಿ, ಭತ್ತ

ಹುಬ್ಬಳ್ಳಿ: ಧಾರವಾಡ ಜಿಲ್ಲೆ, ಹುಬ್ಬಳ್ಳಿ ನಗರ ಹಾಗೂ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಬುಧವಾರ ಬೆಳಗಿನ ಜಾವದಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಿದೆ. ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನಲ್ಲಿ ರಭಸದ ಗಾಳಿಗೆ ನೂರಾರು ಎಕರೆ ಭತ್ತದ ಗದ್ದೆಗೆ ಹಾನಿಯಾಗಿದೆ. ಧಾರಾಕಾರ ಮಳೆಗೆ ಧಾರವಾಡ ತಾಲ್ಲೂಕಿನ ಕಮಲಾಪುರದಲ್ಲಿ ಜಮೀನಿನಲ್ಲಿ ಟೊಮೆಟೊ ಹಾಗೂ ಹಾಗಲಕಾಯಿ ಬೆಳೆ ನೆಲಕಚ್ಚಿವೆ. ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗಿದ್ದು ಕಲಘಟಗಿ ಭಾಗದಲ್ಲಿ ಹೆಚ್ಚು 5.5 ಸೆಂ.ಮೀ ಮಳೆಯಾಗಿದೆ. ಹುಬ್ಬಳ್ಳಿ …

Read More »

ಬೆಳಗಾವಿ: ಬಡ ವಿದ್ಯಾರ್ಥಿಗಳ ಭರವಸೆ ‘ಸಿಇಟಿ-ಸಕ್ಷಮ

ಬೆಳಗಾವಿ: ಜಿಲ್ಲೆಯ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ರೂಪಿಸಿದ ‘ಸಿಇಟಿ- ಸಕ್ಷಮ’ಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಗ್ರಾಮೀಣ, ಬಡ ವಿದ್ಯಾರ್ಥಿಗಳು ಕೂಡ ಸಿಇಟಿ-ನೀಟ್‌ಗಳಲ್ಲಿ ಉತ್ತಮ ರ್‍ಯಾಂಕ್‌ ಗಳಿಸಲು ಈ ವಿನೂತನ ಪ್ರಯೋಗ ಮಾಡಲಾಗಿದೆ. ಇದರಿಂದ ಜಿಲ್ಲೆಯ 6,063 ವಿದ್ಯಾರ್ಥಿಗಳಲ್ಲಿ ಭರವಸೆ ಮೂಡಿದೆ. ಪ್ರಥಮ ಹಾಗೂ ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್‌ ತರಬೇತಿ ನೀಡುವುದು, ಪ್ರತಿ ತಿಂಗಳು ಮಾದರಿ ಪರೀಕ್ಷೆ ನಡೆಸುವುದು ಇದರ ಉದ್ದೇಶ. ಕರ್ನಾಟಕ ಪರೀಕ್ಷಾ …

Read More »