Breaking News

ಕ್ವಾರಂಟೈನ್ ನಲ್ಲಿದ್ದ ಗರ್ಭಿಣಿಗೆ ಸೂಕ್ತ ಚಿಕಿತ್ಸೆ ಸಿಗದ ಪರಿಣಾಮ ಹೊಟ್ಟೆಯಲ್ಲೇ ಮಗು ಸಾವನ್ನಪ್ಪಿದೆ

Spread the love

ಮಂಗಳೂರು: ಕ್ವಾರಂಟೈನ್ ನಲ್ಲಿದ್ದ ಗರ್ಭಿಣಿಗೆ ಸೂಕ್ತ ಚಿಕಿತ್ಸೆ ಸಿಗದ ಪರಿಣಾಮ ಹೊಟ್ಟೆಯಲ್ಲೇ ಮಗು ಸಾವನ್ನಪ್ಪಿದೆ ಎಂಬ ಆರೋಪವೊಂದು ವೈದ್ಯರ ವಿರುದ್ಧ ಕೇಳಿಬಂದಿದೆ.

ಮೇ 12ರಂದು ದುಬೈನಿಂದ ಗರ್ಭಿಣಿ ಏರ್ ಲಿಫ್ಟ್ ಆಗಿದ್ದರು. ಮಂಗಳೂರು ವಿಮಾನ ನಿಲ್ದಾಣದಿಂದ ಆಕೆಯನ್ನು ಹೊಟೇಲ್ ಕ್ವಾರಂಟೈನ್ ಆಗಿದ್ದರು. ಮರುದಿನ ನಡೆದ ತಪಾಸಣೆಯಲ್ಲಿ ಕೊರೊನಾ ನೆಗೆಟಿವ್ ಬಂದಿತ್ತು. ಆದರೂ ಗರ್ಭಿಣಿಗೆ ಚಿಕಿತ್ಸೆ ನೀಡಲು ವೈದ್ಯರು ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ.

ಗರ್ಭಿಣಿಯ ಆರೋಗ್ಯ ತಪಾಸಣೆ ವಿಚಾರದಲ್ಲಿ ವೈದ್ಯರು ನಿರ್ಲಕ್ಷ್ಯ ವಹಿಸಿದ್ದು, ವರದಿ ನೆಗೆಟಿವ್ ಬಂದರೂ ಗರ್ಭಿಣಿಗೆ ಹೋಂ ಕ್ವಾರಂಟೈನ್ ಸಿಗಲಿಲ್ಲ. ಇಷ್ಟು ಮಾತ್ರವಲ್ಲದೆ ಮಂಗಳೂರಿನ ಕೆಲ ಖಾಸಗಿ ಆಸ್ಪತ್ರೆ ವೈದ್ಯರು ಕೂಡ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ ಎಂಬ ಆರೋಪವೂ ಕೇಳಿಬರುತ್ತಿದೆ.

ಒಟ್ಟಿನಲ್ಲಿ ಎರಡನೇ ಟೆಸ್ಟ್ ನಲ್ಲಿ ಕೋವಿಡ್ ನೆಗೆಟಿವ್ ಬಂದರೂ ಚಿಕಿತ್ಸೆ ಸಿಗದೇ ಮಗು ಸಾವನ್ನಪ್ಪಿದೆ. ಇದಕ್ಕೆ ವೈದ್ಯರೇ ನೇರ ಹೊಣೆ ಎಂದು ಮಹಿಳೆಯ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ದೇವಸ್ಥಾನದ ನವರಾತ್ರಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾದ ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯಿದ್ದೀನ್ ಬಾವಾಗೆ ಮುಂಬೈನಿಂದ ಬೆದರಿಕೆ ಕರೆ ಬಂದಿದೆ.

Spread the loveಮಂಗಳೂರು: ದೇವಸ್ಥಾನದ ನವರಾತ್ರಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾದ ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯಿದ್ದೀನ್ ಬಾವಾಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ