Breaking News

ಬಸ್ ಟಿಕೆಟ್ ದರ ಹೆಚ್ಚಳದ ಸುಳಿವು ನೀಡಿದ ಬೈರತಿ ಸುರೇಶ್

Spread the love

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರ ಏರಿಕೆಯ ಸುಳಿವನ್ನು ಸಾರಿಗೆ ಸಚಿವ ಬೈರತಿ ಸುರೇಶ್  ನೀಡಿದ್ದಾರೆ.

ಈ ಕುರಿತು ‘ಪಬ್ಲಿಕ್ ಟಿವಿ’ ಜೊತೆ ಸಾರಿಗೆ ಸಚಿವ ಮಾತನಾಡಿ, ಕೇಂದ್ರ ಕಾರಣ ರಾಜ್ಯ ಕಾರಣ ಅಂತ ಮಾತಾಡಲ್ಲ. ಇಡೀ ದೇಶದಲ್ಲಿ ತೈಲ ದರ ಹೆಚ್ಚಾಗಿದೆ. ಅದಕ್ಕೆ ಅನುಪಾತವಾಗಿ ಟಿಕೆಟ್ ದರ ಹೆಚ್ಚಿಸುವ ಪ್ರಸ್ತಾವನೆ ಇದೆ. ಪ್ರಸ್ತಾವನೆ ಇನ್ನೂ ಪರಿಶೀಲನೆಯಲ್ಲಿದೆ. ಸಿಎಂ ಜತೆ ಮಾತಾಡ್ತೇವೆ, ಸರ್ಕಾರ ಏನು ತೀರ್ಮಾನ ತಗೊಳ್ಳುತ್ತೋ ಅದರ ಪ್ರಕಾರ ಹೆಚ್ಚಿಸಲಾಗುತ್ತೆ ಎಂದು ತಿಳಿಸಿದರು.

ಬಸ್ ಟಿಕೆಟ್ ದರ ಹೆಚ್ಚಳ ವಿರೋಧ ಮಾಡಲು ಇಲ್ಲಿ ಕಾರಣನೇ ಇಲ್ಲ. ಬಿಜೆಪಿಯವರಿಗೂ ತೈಲ ದರ ಹೆಚ್ಚಾಗಿರೋದು ಗೊತ್ತು. ನಮ್ಮ ಸಾರಿಗೆಯ ನಾಲ್ಕು ನಿಗಮಗಳೂ ನಷ್ಟದಲ್ಲಿ ನಡೀತಿವೆ. ಐದು ಸಾವಿರ ಕೋಟಿ ನಷ್ಟದಲ್ಲಿ ಸಾರಿಗೆ ನಿಗಮಗಳು ನಡೀತಿವೆ. ಅದನ್ನು ಸರಿದೂಗಿಸಬೇಕಲ್ಲ, ಸಿಬ್ಬಂದಿಗೂ ವೇತನ ಕೊಡಬೇಕಲ್ಲ
ಬಸ್‌ಗಳಿಗೆ ಡೀಸೆಲ್ ಹಾಕಿಸಬೇಕಲ್ಲ. ಚರ್ಚೆ ಮಾಡಿ ಟಿಕೆಟ್ ದರ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ವಿದ್ಯಾರ್ಥಿಗಳ ಪಾಸ್‌ಗೆ ಸಮಸ್ಯೆ ಏನೂ ಆಗ್ತಿಲ್ಲ. ಸ್ಟ್ರೀಮ್ ಲೈನ್ ಮಾಡಿ ಪಾಸ್ ವಿತರಣೆ ಮಾಡ್ತೇವೆ. ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಪಾಸ್ ಕೊಡ್ತೇವೆ ಎಂದು ತಿಳಿಸಿದರು.

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ವಿಪಕ್ಷಗಳು ರಾಜಕಾರಣ ಮಾಡಬಾರದು. ಏನೇ ಇದ್ರೂ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಬೇಕು. ಇತಿಹಾಸದಲ್ಲಿ ಯಾವಾಗಲಾದರೂ ಸಿಎಂ ಹಾಗೂ ಕೇಂದ್ರ ಸಚಿವ ಬಹಿರಂಗ ಚರ್ಚೆ ಮಾಡಿದ್ದಾರಾ? ಅಲ್ಲಿ ಹೋಗಿ ಚರ್ಚೆಗೆ ಬನ್ನಿ ಅನ್ನೋದು ಸರಿನಾ? ರಾಜ್ಯದ ಘನತೆಗೆ ಧಕ್ಕೆ ಆಗುತ್ತೆ ಇದರಿಂದ ಎಂದು ಟಾಂಗ್ ಕೊಟ್ಟರು.


Spread the love

About Laxminews 24x7

Check Also

ಪಾಲಿಕೆಯಲ್ಲಿ ಕರ್ನಾಟಕ ಪರ ಗೋತ್ತುವಳಿ ಮಂಡನೆಗೆ ಆಗ್ರಹಿಸಿ 101 ಈಡುಗಾಯಿ ಒಡೆದು ಪ್ರತಿಭಟನೆ

Spread the loveಬೆಳಗಾವಿ: ಬೆಳಗಾವಿ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕರಿಸಲು ಆಗ್ರಹಿಸಿ ಕಳೆದ ನೂರು ದಿನಗಳಿಂದ ನಡೆದ ಕನ್ನಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ