Breaking News

ಎಲ್ಲ ಗ್ರಾಮ ಪಂಚಾಯತಗಳು ಈ ಯೋಜನೆಯನ್ನು ಸದ್ಬಳಕೆ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಗ್ರಾಮ ಪಂಚಾಯತಿಗಳಲ್ಲಿ ತೋಟದ ರಸ್ತೆ ಕಾಮಗಾರಿಗಳನ್ನು ನರೇಗಾ ಯೋಜನೆಯಡಿ ಕೈಗೊಳ್ಳಲು ಅನುಮತಿ ನೀಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳನ್ನು ಇತ್ತೀಚೆಗೆ ಕೋರಿದ್ದರು ಎಂಬುದು ಉಲ್ಲೇಖಾರ್ಹ.

 

*ಎಲ್ಲ ಗ್ರಾಮ ಪಂಚಾಯತಿಗಳು ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಿ :* ನರೇಗಾ ಯೋಜನೆಯಡಿ ತೋಟದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಈಗಾಗಲೇ ಸರ್ಕಾರ ಆದೇಶಿಸಿದ್ದು, ಎಲ್ಲ ಗ್ರಾಮ ಪಂಚಾಯತಿಗಳು ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.

ಇಲ್ಲಿಯವರೆಗೆ ನರೇಗಾ ಯೋಜನೆಯಡಿ ತೋಟದ ರಸ್ತೆಗಳ ನಿರ್ಮಾಣಕ್ಕೆ ಅನುಮತಿ ನೀಡಿರಲಿಲ್ಲಾ. ಇತ್ತೀಚೆಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕಿನ ತೋಟದ ರಸ್ತೆಗಳನ್ನು ನರೇಗಾ ಯೋಜನೆಗೆ ಒಳಪಡಿಸಿ ಕಾಮಗಾರಿಗೆ ಅನುಮತಿ ನೀಡುವಂತೆ ಕೋರಿಕೊಂಡಿದ್ದೆ. ಅದರಂತೆ ಮುಖ್ಯಮಂತ್ರಿಗಳು ಈ ಕಾಮಗಾರಿ ನಿರ್ವಹಿಸಲು ಅನುಮತಿ ನೀಡಿದ್ದಾರೆ. ಆದ್ದರಿಂದ ಎಲ್ಲ ಗ್ರಾಮ ಪಂಚಾಯತ ಸದಸ್ಯರುಗಳು ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ರೈತಾಪಿ ವರ್ಗಕ್ಕೆ ಅನುಕೂಲ ಮಾಡಿಕೊಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸೂಚನೆ ನೀಡಿದ್ದಾರೆ.


Spread the love

About Laxminews 24x7

Check Also

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ: ಹೆಚ್‌ಡಿಕೆ

Spread the loveಬೆಂಗಳೂರು: ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್  ಶಾಸಕರನ್ನ ಆಪರೇಷನ್ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ