Breaking News
Home / ಜಿಲ್ಲೆ / ‘ಸಾಲ ತೀರಿಸಬೇಕು, ಬಾಡಿಗೆ ಕಟ್ಟಬೇಕು, ಕೆಲಸಗಾರರಿಗೆ ಸಂಬಳ ನೀಡಬೇಕು‘: ನಮಗೂ ಎಣ್ಣೆ ಮಾರಲು ಅವಕಾಶ ಕೊಡಿ ಎಂದು ಸಿಎಂಗೆ ಬಾರ್​ ಮಾಲೀಕರ ಮನವಿ

‘ಸಾಲ ತೀರಿಸಬೇಕು, ಬಾಡಿಗೆ ಕಟ್ಟಬೇಕು, ಕೆಲಸಗಾರರಿಗೆ ಸಂಬಳ ನೀಡಬೇಕು‘: ನಮಗೂ ಎಣ್ಣೆ ಮಾರಲು ಅವಕಾಶ ಕೊಡಿ ಎಂದು ಸಿಎಂಗೆ ಬಾರ್​ ಮಾಲೀಕರ ಮನವಿ

Spread the love

ಬೆಂಗಳೂರು: ಕೊರೋನಾ ಲಾಕ್​ಡೌನ್​​ ನಡುವೆಯೇ ಕೊನೆಗೂ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಎರಡು ದಿನಗಳಿಂದ ಮಹಿಳೆಯರು ಮತ್ತು ಪುರುಷರು ಎನ್ನದೇ ಎಲ್ಲಾ ವಯೋಮಾನದವರು ಬೆಳಿಗ್ಗೆ 7 ಗಂಟೆಯಿಂದಲೇ ವೈನ್ ಸ್ಟೋರ್​​ಗಳು, ಎಂಆರ್​​ಪಿ ಎಣ್ಣೆ ಅಂಗಡಿಗಳ ಮುಂದೆ ನಿಂತು ಮದ್ಯ ಖರೀದಿ ಮಾಡುತ್ತಿದ್ದಾರೆ. ಕೊರೋನಾ ವೈರಸ್​​ ಕಾರಣ ಮದ್ಯಪ್ರಿಯರು ಸರತಿ ಸಾಲಿನಲ್ಲಿ ನಿಂತು ಸರ್ಕಾರದ ನಿಯಮಗಳನ್ನು ಪಾಲಿಸುತ್ತಿರುವುದು ನೋಡುತ್ತಿದ್ದೇವೆ.

ಹೀಗಿರುವಾಗ ರಾಜ್ಯದಲ್ಲಿ ಎಂಆರ್​​ಪಿ ಹಾಗೂ ಎಂಎಸ್​ಐಎಲ್ ಮಳಿಗೆಗಳಲ್ಲಿ ಮಾತ್ರ ಮದ್ಯ ಮಾರಾಟ ಮಾಡಲು ಅವಕಾಶ ನೀಡಿರುವ ಸಿಎಂ ಬಿಎಸ್​ ಯಡಿಯೂರಪ್ಪ ನಡೆಗೆ ಬಾರ್​ ಅಂಡ್​ ರೆಸ್ಟೋರೆಂಟ್​​​ ಮಾಲೀಕರು ವಿರೋಧ ವ್ಯಕ್ತಪಡಿಸಿದ್ದಾರೆ. ರಾಜ್ಯದ ಸುಮಾರು 4700 ಮದ್ಯಮಾರಾಟ ಮಳಿಗೆಗಳಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಬಾರ್​​ ಮತ್ತು ರೆಸ್ಟೋರೆಂಟ್​ಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡದಿರುವುದು ಯಾಕೇ? ಎಂದು ಪ್ರಶ್ನಿಸಿದ್ಧಾರೆ.

ನಾವು ಔಟ್‌ಲೆಟ್​​ಗಳಿಗಿಂತಲೂ ಹೆಚ್ಚಿಗೆ ಟ್ಯಾಕ್ಸ್ ಕಟ್ಟುತ್ತೇವೆ. ನಮಗೂ ಸಾಮಾಜಿಕ‌ ಅಂತರದಲ್ಲೇ ವ್ಯಾಪಾರಕ್ಕೆ ಅವಕಾಶ ಕೊಡಿ. ಹೋಟೆಲ್​​ನಲ್ಲಿ ಈಗಾಗಲೆ ಕೇವಲ ಪಾರ್ಸಲ್​ಗೆ ಮಾತ್ರ ಅವಕಾಶ ನೀಡಿದ್ದೀರಿ. ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಆದೇಶಿಸಿ ಎಸಿ ಬಳಕೆ ಮಾಡದೇ ವ್ಯಾಪಾರಕ್ಕೆ ಅವಕಾಶ ಕೊಡಿ ಎಂದು ಒತ್ತಾಯಿಸಿದ್ದಾರೆ ಬಾರ್​ ಅಂಡ್​​ ರೆಸ್ಟೋರೆಂಟ್​ ಮಾಲೀಕರು.

ಬಾರ್ ಅಂಡ್ ರೆಸ್ಟೋರೆಂಟ್ ಶೇ.60ರಷ್ಟು ಇವೆ. ಒಂದೂವರೆ ತಿಂಗಳಿಂದ ಬಾಗಿಲು ಹಾಕಿದ್ದೇವೆ. ಬಾಡಿಕೆ ಕಟ್ಟಬೇಕು, ಸಾಲ ಮಾಡಿದ್ದೇವೆ ಬ್ಯಾಂಕ್​​ಗಳಿಗೆ ಇಎಂಐ ಕಟ್ಟಬೇಕು. ಕೆಲಸಗಾರರಿಗೆ ಸಂಬಳ ಕೊಡಬೇಕು. ನಷ್ಟ ಅನುಭವಿಸಿದ್ದೇವೆ. ನಮಗೂ ಎಣ್ಣೆ ವ್ಯಾಪಾರಕ್ಕೆ ಅವಕಾಶ ಕೊಡಿ ಎಂದು ಸಿಎಂ ಬಿ.ಎಸ್​ ಯಡಿಯೂರಪ್ಪರನ್ನು ನಿಯೋಗ ಭೇಟಿ ಮಾಡಿ ಮನವಿ ಮಾಡಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ