Breaking News

ಮಹಾ ಸಿಎಂ ಉದ್ಧವ್ ಠಾಕ್ರೆ ಟ್ವೀಟ್ ಖಂಡಿಸಿ..ಬೆಳಗಾವಿಯಲ್ಲಿ ಉದ್ಧವ್ ಭಾವಚಿತ್ರಕ್ಕೆ ಚಪ್ಪಲಿ ಸೇವೆ..!

Spread the love

ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರೋವರೆಗೂ ಹೋರಾಡೋಣ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿವಾದಾತ್ಮಕ ಟ್ವೀಟ್ ಮಾಡುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಲ್ಲದೇ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ರಾಜ್ಯಾಧ್ಯಂತ ವಿವಿಧ ಕನ್ನಡ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿವೆ. ಅದೇ ರೀತಿ ಬೆಳಗಾವಿಯಲ್ಲಿಯೂ ಕನ್ನಡಪರ ಸಂಘಟನೆಗಳು ಉದ್ಧವ್ ಠಾಕ್ರೆ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿವೆ.

ಗಡಿ ವಿಚಾರದಲ್ಲಿ ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸವನ್ನು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮಾಡಿದ್ದಾರೆ. ಸಧ್ಯ ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಮರಾಠಿ ಭಾμÉ ಮತ್ತು ಸಂಸ್ಕøತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುತ್ತೇವೆ ಎಂದು ಉದ್ಧವ್ ಠಾಕ್ರೆ ಉದ್ಧಟತನ ಟ್ವೀಟ್ ಮಾಡಿದ್ದನ್ನು ಖಂಡಿಸಿ ಸೋಮವಾರ ಬೆಳಗಾವಿಯ ರಾಣಿಚನ್ನಮ್ಮಾಜಿ ವೃತ್ತದಲ್ಲಿ ಕರವೇ ಶಿವರಾಮೇಗೌಡ ಬಣದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು, ಬಳಿಕ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಜವಾಬ್ದಾರಿಯುತ ಸ್ಥಾನದಲ್ಲಿರುವ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಗಡಿ ವಿಚಾರದಲ್ಲಿ ವಿನಾಕಾರಣ ಗೊಂದಲ ಮೂಡಿಸುವ ಟ್ವೀಟ್ ಮಾಡಿದ್ದು ಸಧ್ಯ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ. ಅಲ್ಲದೇ ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಉದ್ಧವ್ ಠಾಕ್ರೆ ಹೇಳಿಕೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.

Spread the loveಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ