ಬೆಳಗಾವಿಯಲ್ಲಿ ಮಟ್ಕಾ ಅಡ್ಡೆ ಮೇಲೆ ದಾಳಿ: ನಾಲ್ವರ ಬಂಧನ
ಬೆಳಗಾವಿ : ಅಷ್ಟೇ ಗ್ರಾಮದಲ್ಲಿನ ಮಟಕಾ ಅಡ್ಡೆ ಮೇಲೆ ಮಾರಿಹಾಳ ಠಾಣೆ ಪೊಲೀಸರು ನಿನ್ನೆ ತಡರಾತ್ರಿ ದಾಳಿ ನಡೆಸಿ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಅಷ್ಟೇ ಗ್ರಾಮದ ನಿವಾಸಿಗಳಾದ ಲಕ್ಷ್ಮಣ ನಾಯಕ್, ರಾಜು ಕಾಕತಿ, ರಮೇಶ ಗುರುನಾಥ ದೊಡಮನಿ, ಸುಧಾಕರ ನಂದಗಡಕರ ಬಂಧಿತರು. ಮಾರಿಹಾಳ ಠಾಣೆ ಪೊಲೀಸರು ಖಚಿತ ಮಾಹಿತಿ ಆದಾರದ ಮೇಲೆ ಡಿಸಿಪಿ ವಿಕ್ರಂ ಆಮಟೆ ನೇತೃತ್ವದ ತಂಡ ದಾಳಿ ನಡೆಸಿ, ನಾಲ್ವರು ಆರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ.
ಅವರಿಂದ ರೂ. 8220 ನಗದು ಹಣ, 3 ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದಾರೆ. ಓಸಿ ಬುಕ್ಕಿಗಳಾದ ಅಶೋಕ ನಾಯಕ, ನಿತೀನ್ ಪೆಡ್ನೆಕರ ಇವರ ಮೇಲೆಯೂ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.