Breaking News
Home / ಜಿಲ್ಲೆ / ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದ ಸುರೇಶ ಅಂಗಡಿ ಅವರ ಸಮಾಧಿ ನಿರ್ಮಾಣ ಕಾರ್ಯದಲ್ಲಿ ಕೈ ಜೋಡಿಸಿ

ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದ ಸುರೇಶ ಅಂಗಡಿ ಅವರ ಸಮಾಧಿ ನಿರ್ಮಾಣ ಕಾರ್ಯದಲ್ಲಿ ಕೈ ಜೋಡಿಸಿ

Spread the love

ಬೆಳಗಾವಿ: ನವದೆಹಲಿಯ ದ್ವಾರಕಾ ನಗರದಲ್ಲಿರುವ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ಕೇಂದ್ರ ಸಚಿವರಾಗಿದ್ದ ದಿ| ಸುರೇಶ ಅಂಗಡಿ ಅವರ ಸಮಾಧಿ ಸ್ಥಳದಲ್ಲಿ ನಿರ್ಮಿಸಲಾದ ಅಂಗಡಿ ಅವರ ಪ್ರತಿಮೆಯನ್ನು ಬೆಳಗಾವಿ ಲೋಕಸಭಾ ಸದಸ್ಯೆ ಮಂಗಲಾ ಅಂಗಡಿ ಮಂಗಳವಾರ ಕುಟುಂಬದ ಸದಸ್ಯರ ಉಪಸ್ಥಿತಿಯಲ್ಲಿ ಅನಾವರಣಗೊಳಿಸಿ ನಮನ ಸಲ್ಲಿಸಿದರು.

ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದ ಸುರೇಶ ಅಂಗಡಿ ಅವರ ಸಮಾಧಿ ನಿರ್ಮಾಣ ಕಾರ್ಯದಲ್ಲಿ ಕೈ ಜೋಡಿಸಿ ಎಲ್ಲ ರೀತಿಯ ಸಹಕಾರ ನೀಡಿದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಅಂತಾರಾಷ್ಟ್ರೀಯ ಬಸವ ಸಮಿತಿ ಸದಸ್ಯರಿಗೆ ಸಂಸದೆ ಮಂಗಲಾ ಅಂಗಡಿ ಕೃತಜ್ಞತೆ ಸಲ್ಲಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ ಕಟೀಲ್‌, ಕೇಂದ್ರ ಸಚಿವರಾದ ನಾರಾಯಣಸ್ವಾಮಿ, ಭಗವಂತ ಖೂಬಾ, ಸಂಸದರಾದ ಸದಾನಂದಗೌಡ, ಪ್ರತಾಪ ಸಿಂಹ, ಬಿ.ವೈ.ರಾಘವೆಂದ್ರ, ಪಿ.ಸಿ.ಗದ್ದಿಗೌಡರ, ಮುನಿಸ್ವಾಮಿ, ಈರಣ್ಣ ಕಡಾಡಿ, ಅಣ್ಣಾಸಾಹೇಬ ಜೊಲ್ಲೆ, ಉಮೇಶ ಜಾಧವ, ಶಾಸಕ ರಮೇಶ ಜಾರಕಿಹೊಳಿ ಹಾಜರಿದ್ದು ನಮನ ಸಲ್ಲಿಸಿದರು.


Spread the love

About Laxminews 24x7

Check Also

ಪಾನಿಪುರಿ ಮಾರುವ ಜ್ಯೂನೀಯರ್ ಮೋದಿ; ಮೋದಿ ತರಾನೇ..ಆದ್ರೆ ಅಲ್ಲ!

Spread the loveನವದೆಹಲಿ: ಗುಜರಾತ್‌ನ ಪಾನಿ ಪುರಿ ಮಾರಾಟಗಾರ ಅನಿಲ್ ಭಾಯಿ ಠಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಾಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ