ಬೆಳಗಾವಿ: ತಾಲೂಕಾ ಕೃಷಿ ಹುಟ್ಟುವಳಿ ಮಾರಾಟ ಸಹಕಾರಿ ಸಮಿತಿ(ಟಿಎಪಿಎಂಎಸ್) ದಿಂದ ಎಂಪಿಎಂಸಿಯ ನಿರ್ದೇಶಕ ಒಂದು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಾರಿಹಾಳದ ಆಶಿಫ್ ಮುಲ್ಲಾ 9 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ.
ಪ್ರತಿ ಸ್ಪರ್ಧಿ ಶಿವನಗೌಡ ಪಾಟೀಲ್ 6 ಮತಗಳ ಪಡೆದು ಪರಾಭವಗೊಂಡಿದ್ದಾರೆ. ಚುನಾವಣಾಧಿಕಾರಿಯಾಗಿ ಎಂ.ಎಸ್. ಗೌಡಪ್ಪಗೋಳ ಅವರು ಕಾರ್ಯನಿರ್ವಹಿಸಿದರು.
ಚುನಾವಣೆ ಗೆಲುವಿಗೆ ಕಾರಣರಾದ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಟಿಎಪಿಎಂಎಸ್ ನೂತನ ನಿರ್ದೇಶಕ ಆಶಿಕ್ ಮುಲ್ಲಾ ಅಭಿನಂದನೆ ಸಲ್ಲಿಸಿದರು.