ಬೆಳಗಾವಿ: : ಇತ್ತೀಚಿಗೆ ದ್ವಿಚಕ್ರ ವಾಹನದ ಅಪಘಾತದಲ್ಲಿ ಗಾಯಗೊಂಡು ತನ್ನ ಎರಡು ಕಾಲುಗಳಿಗೆ ಪೆಟ್ಟಾಗಿದ್ದಕ್ಕೆ ಮನನೊಂದು ತಮ್ಮ ಹೊಲದಲ್ಲಿ ಬೆಂಕಿ ಹಚ್ಚಿಕೊಂಡು ವ್ಯಕ್ತಿಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಹೊನಗಾ ಗ್ರಾಮದಲ್ಲಿ ಶನಿವಾರ ನಡೆದಿದೆ.
ಬಾಳಾರಾಮ ಯಲ್ಲಪ್ಪಾ ಆನಂದಾಚೆ (52) ಮೃತ ವ್ಯಕ್ತಿ. ಶನಿವಾರ ಮದ್ಯಾಹ್ನ ತಮ್ಮ ಹೊಲಕ್ಕೆ ಹೋಗಿದ್ದ ಬಾಳಾರಾಮ ಯರು ಇಲ್ಲದ ಸಮಯದಲ್ಲಿ ಮೈಮೇಲೆ ಸೀಮೆ ಹಾಕಿಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪತ್ನಿ ಕಾಕತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಘಟನೆ ಸ್ಥಳಕ್ಕೆ ಕಾಕತಿ ಪಿಎಸ್ಐ ಅವಿವಾಶ ಯರಗೊಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.