Breaking News

ಬಂಡೆ ತಬ್ಬಿ ಬೆಂಗಳೂರಿಗರ ಪ್ರತಿಭಟನೆ – ಲಾಲ್‌ಬಾಗ್‌ ಉಳಿಸಲು ಬೃಹತ್‌ ಅಭಿಯಾನ

Spread the love

ಬೆಂಗಳೂರು: ಉದ್ಯಾನವನಗಳ ಶೇ.5ರಷ್ಟು ಜಾಗವನ್ನು ಅನ್ಯ ಉದ್ದೇಶಗಳಿಗೆ ಬಳಸಲು ಅವಕಾಶ ಕಲ್ಪಿಸುವ ಸರ್ಕಾರದ ಕಾಯ್ದೆ ತಿದ್ದುಪಡಿಗೆ ಬೆಂಗಳೂರಿನಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಐತಿಹಾಸಿಕ ಲಾಲ್‌ಬಾಗ್‌  ಮೇಲೂ ಸರ್ಕಾರದ ಕಣ್ಣು ಬಿದ್ದಿದೆ ಎಂದು ಆರೋಪಿಸಿ ನಾಗರಿಕರು ಇಂದು ಪ್ರತಿಭಟನೆ ನಡೆಸುತ್ತಿದ್ದಾರೆ.

‘WALK IN LALBAGH, WALK FOR LALBAGH’ ಎಂಬ ಘೋಷಣೆಯೊಂದಿಗೆ ಇಂದು ಲಾಲ್‌ಬಾಗ್‌ನಲ್ಲಿ ಬೃಹತ್ ವಾಕಿಂಗ್‌ ಅಭಿಯಾನ ನಡೆಯುತ್ತಿದೆ. ಪರಿಸರವಾದಿ ಯಲ್ಲಪ್ಪ ರೆಡ್ಡಿ ಹಾಗೂ ಸಂಸದ ತೇಜಸ್ವಿ ಸೂರ್ಯ (Tejasvi Surya) ಅವರ ಮುಂದಾಳತ್ವದಲ್ಲಿ ನಡೆದ ಅಭಿಯಾನದಲ್ಲಿ ನೂರಾರು ಬೆಂಗಳೂರಿಗರು, ವಾಯುವಿಹಾರಿಗಳು, ವಿವಿಧ ಎನ್‌ಜಿಒಗಳು ಹಾಗೂ ನಾಗರಿಕರು ಭಾಗವಹಿಸಿದರು.

ಸರ್ಕಾರದ ನಿರ್ಧಾರವನ್ನು ವಿರೋಧಿಸಿದ ಪ್ರತಿಭಟನಾಕಾರರು ಲಾಲ್‌ಬಾಗ್‌ನ ಬಂಡೆಕಲ್ಲುಗಳನ್ನು ತಬ್ಬಿಕೊಂಡು ಮಾನವ ಸರಪಳಿ ರಚಿಸಿ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಕೆಲವರು ಬಂಡೆಗಳ ಮೇಲೆ ಕುಳಿತು ಸರ್ಕಾರದ ಕಾಯ್ದೆ ತಿದ್ದುಪಡಿಯನ್ನು ಹಿಂಪಡೆಯುವಂತೆ ಒತ್ತಾಯಿಸಿದರು.

ಅಭಿಯಾನದಲ್ಲಿ ಚಲನಚಿತ್ರ ನಟಿ ಸುಧಾ ಬೆಳವಾಡಿ, ನಟಿ ಸಂಯುಕ್ತ, ಪ್ರಣೀತಾ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದರಾದ ಡಾ. ಮಂಜುನಾಥ್, ಪಿ.ಸಿ. ಮೋಹನ್, ತೇಜಸ್ವಿ ಸೂರ್ಯ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದರು.

ಲಾಲ್‌ಬಾಗ್‌ನ ಪರಿಸರ ಮತ್ತು ಹಸಿರು ವಲಯವನ್ನು ಯಾವುದೇ ಕಾರಣಕ್ಕೂ ದುರ್ಬಳಕೆ ಮಾಡಬಾರದು. ಪಾರ್ಕ್‌ ಜಾಗದ ಶೇ.5ರಷ್ಟು ಬಳಕೆಗೆ ಅವಕಾಶ ನೀಡುವ ತಿದ್ದುಪಡಿ ಬೇಡ, ಲಾಲ್‌ಬಾಗ್‌ನಲ್ಲಿ ಯಾವುದೇ ಟನಲ್‌ ಯೋಜನೆಯೂ ಬೇಡ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಲಾಲ್‌ಬಾಗ್‌ ಉಳಿಯಬೇಕು, ಬೆಂಗಳೂರಿನ ಹಸಿರು ಉಳಿಯಬೇಕು ಎಂಬ ಸಂದೇಶದೊಂದಿಗೆ ನಡೆದ ಅಭಿಯಾನ ಇದೀಗ ಸರ್ಕಾರದ ಕಾಯ್ದೆ ತಿದ್ದುಪಡಿ ವಿಚಾರದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.


Spread the love

About Laxminews 24x7

Check Also

KPSC ಬಗ್ಗೆ ಸಾರ್ವಜನಿಕರಿಗೆ ಅಸಹ್ಯಕರ ಭಾವನೆ ಮೂಡಿದೆ: ಹೆಚ್‌ಡಿಕೆ

Spread the loveಬೆಂಗಳೂರು: ಕೆಪಿಎಸ್‌ಸಿ  ಬಗ್ಗೆ ಸಾರ್ವಜನಿಕರಿಗೆ ಅಸಹ್ಯಕರ ಭಾವನೆ ಮೂಡಿದೆ, ಈ ಸಂಸ್ಥೆ ಬೇಕಾ ಎಂದು ಜನ ಕೇಳುತ್ತಿದ್ದಾರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ