Breaking News

ನಾಯಿ ಅಟ್ಟಿಸಿಕೊಂಡು ಬಂದಿದ್ದ ಕಾಡಾನೆ ದಾಳಿಗೆ ಸಿಕ್ಕಿ ಬೆಂಗಳೂರು ಪ್ರವಾಸಿಗ ಬಲಿ

Spread the love

ಮಡಿಕೇರಿ: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ಕಾಡಾನೆ ದಾಳಿಗೆ ಬೆಂಗಳೂರು ಮೂಲದ ಪ್ರವಾಸಿಗನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.

ಸ್ಥಳೀಯ ಹೋಂ ಸ್ಟೇಗೆ ಪ್ರವಾಸಕ್ಕಾಗಿ ಆಗಮಿಸಿದ್ದ ಸುಮಾರು 40 ವರ್ಷದ ಮುರುಳಿಕೃಷ್ಣ ಎಂಬ ಪ್ರವಾಸಿಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಪ್ರವಾಸಿಗರು ತೆರಾಲು ಗ್ರಾಮದ ಹೋಂಸ್ಟೇ ಯಲ್ಲಿ ವಾಸ್ತವ್ಯ ಹೂಡಿದ್ದರು. ಶನಿವಾರ ಸಂಜೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ನಾಯಿಯನ್ನು ಅಟ್ಟಿಸಿಕೊಂಡು ಬಂದ ಕಾಡಾನೆ ಏಕಾಏಕಿ ಪ್ರವಾಸಿಗನ ಮೇಲೆ ದಾಳಿ ನಡೆಸಿದೆ ಎನ್ನಲಾಗಿದೆ.

ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಪ್ರವಾಸಿಗನನ್ನ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಿದ್ದಾರೆ. ಅಷ್ಟರಲ್ಲೇ ಆತ ಮೃತಪಟ್ಟಿದ್ದಾನೆ. ಘಟನೆಯಿಂದ ತೆರಾಲು ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪ್ರವಾಸಿಗರು ಹಾಗೂ ಸ್ಥಳೀಯರಲ್ಲಿ ಕಾಡಾನೆ ಸಂಚಾರದ ಬಗ್ಗೆ ಭಯದ ವಾತಾವರಣ ಮನೆಮಾಡಿದೆ.

ಇನ್ನೂ ಘಟನಾ ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಡಾನೆ ಯಾವ ಮಾರ್ಗದಿಂದ ಗ್ರಾಮಕ್ಕೆ ಬಂದಿ? ದಾಳಿ ಹೇಗೆ ಸಂಭವಿಸಿತು? ಎಂಬ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.

ತೆರಾಲು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಡಾನೆಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯವೂ ಕೇಳಿಬಂದಿದೆ. ಇದರೊಂದಿಗೆ ಹೋಂಸ್ಟೇಗಳಿಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆ ಬಗ್ಗೆಯೂ ಹೆಚ್ಚಿನ ಗಮನಹರಿಸಬೇಕೆಂಗ ಆಗ್ರಹವೂ ಕೇಳಿಬಂದಿದೆ.


Spread the love

About Laxminews 24x7

Check Also

2027ರ ಜನವರಿ ಅಂತ್ಯಕ್ಕೆ ವಿಮಾನಯಾನ – ಕೊನೆ ಹಂತದತ್ತ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ

Spread the loveವಿಜಯಪುರ: ಬಹುನಿರೀಕ್ಷಿತ ವಿಜಯಪುರ ವಿಮಾನ ನಿಲ್ದಾಣ ಕಾರ್ಯಾರಂಭಕ್ಕೆ ಮುಹೂರ್ತ ಕೂಡಿ ಬಂದಿದ್ದು, 2027ರ ವರ್ಷಾರಂಭವಾಗುತ್ತಿದ್ದಂತೆಯೇ ವಿಮಾನ ಹಾರಿಸುವ ಪ್ರಯತ್ನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ