Breaking News

BREAKING NEWS: ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಗೆ ಕೊಲೆ ಬೆದರಿಕೆ

Spread the love

ಬೆಂಗಳೂರು: ಶ್ರೀರಾಮಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ( Sri Ram Sene founder president Pramod Muthalik ) ಅವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಬಂದಿರುವುದಾಗಿ ತಿಳಿದು ಬಂದಿದೆ.

ನಮ್ಮ ಪಕ್ಷದ ಕಾರ್ಯಕರ್ತರಿಂದ ಹಣ ಸಂಗ್ರಹಿಸಿದರೆ ಬಿಜೆಪಿಯವರಿಗೇನು ನೋವು – ಡಿ.ಕೆ. ಶಿವಕುಮಾರ್ ಪ್ರಶ್ನೆ

ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಿನ್ನೆ ರಾತ್ರಿ ನಾಲ್ಕು ನಂಬರ್ ಗಳಿಂದ ನನಗೆ ಜೀವ ಬೆದರಿಕೆ ಕರೆಗಳು ಬಂದಿವೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿದ್ದಾಗ ಕೊಲೆ ಬೆದರಿಕೆ ಕರೆಗಳು ( Death threat call ) ಬಂದಿದ್ದಾವೆ ಎಂದು ತಿಳಿಸಿದ್ದಾರೆ.

ಕೊಲೆ ಬೆದರಿಕೆ ಹಾಕಿದಂತವರು ಉರ್ದು ಮಿಶ್ರಿತ ಮಂಗಳೂರು ಭಾಷೆಯಲ್ಲಿ ಮಾತನಾಡುತ್ತಿದ್ದರು. ಇಂದು ಬೆಳಿಗ್ಗೆಯೂ ಕೊಲೆ ಬೆದರಿಕೆ ಕರೆ ಬಂದಿವೆ. ಈ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ ಎಂದರು.

ಈ ತರದ ಕೊಲೆ ಬೆದರಿಕೆ ಎಷ್ಟೋ ಬಂದಿದ್ದಾವೆ. ನಾನು ಕೊಲೆ ಬೆದರಿಕೆಗೆ ಹೆದರೋದಿಲ್ಲ. ಪೊಲೀಸರಿಗೆ ದೂರು ನೀಡಿದ್ದು, ತನಿಖೆ ನಡೆಸಿ ಬೆದರಿಕೆ ಹಾಕಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.


Spread the love

About Laxminews 24x7

Check Also

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ: ಹೆಚ್‌ಡಿಕೆ

Spread the loveಬೆಂಗಳೂರು: ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್  ಶಾಸಕರನ್ನ ಆಪರೇಷನ್ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ