Breaking News
Home / ಜಿಲ್ಲೆ / ಬಿಗ್ ಬಾಸ್ ಖ್ಯಾತಿಯ ಜಯಶ್ರೀ ರಾಮಯ್ಯ ನೇಣಿಗೆ ಶರಣು !

ಬಿಗ್ ಬಾಸ್ ಖ್ಯಾತಿಯ ಜಯಶ್ರೀ ರಾಮಯ್ಯ ನೇಣಿಗೆ ಶರಣು !

Spread the love

ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ಜಯಶ್ರೀ ರಾಮಯ್ಯ ನಿನ್ನೆ ರಾತ್ರಿ ಮಾಗಡಿ ರಸ್ತೆಯ ಪ್ರಗತಿ ಲೇಔಟ್ ನಲ್ಲಿರುವಂತ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

 

ಈ ಹಿಂದೆ ಫೇಸ್​ಬುಕ್​ ಪೋಸ್ಟ್​ ನಲ್ಲಿಯೂ ನಟಿ ಜಯಶ್ರೀ ರಾಮಯ್ಯ ತಮಗೆ ದಯಾಮರಣ ಕೊಡಿ ಅಂತಾ ಹಾಕಿಕೊಂಡಿದ್ದರು. ಆ ವೇಳೆಯೇ ಜಯಶ್ರೀ ರಾಮಯ್ಯ ಎಷ್ಟರ ಮಟ್ಟಿಗೆ ಅವರು ಖಿನ್ನತೆಗೆ ಒಳಗಾಗಿದ್ದಾರೆ ಅನ್ನೋದು ಭಾರೀ ಚರ್ಚೆಗೆ ಕಾರಣವಾಗಿತ್ತು.

 

ತಮ್ಮ ಫೇಸ್​​ಬುಕ್​​ನಲ್ಲಿ ಐ ಕ್ವಿಟ್, ನಾನು ಸಾಯ್ತಿನಿ ಅಂತ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಗೂ ವಿಡಿಯೋಗಳನ್ನೂ ಜಯಶ್ರೀ ಅವರು ಹಾಕಿಕೊಂಡಿದ್ದರು. ನನಗೆ ದಯಾ ಮರಣ ಕೊಡಿ ಅಂತ ಫೇಸ್​ಬುಕ್​ ಲೈವ್​ನಲ್ಲಿ ಮಾತನಾಡಿದ್ದರು. ನಂಗೆ ಸಾಯಲು ಬಿಡಿ ಅಂತ ಅಳಲು ತೋಡಿಕೊಂಡಿದ್ದರು.

 

ನನಗೆ ಯಾವುದೇ ಫೈನಾನ್ಶಿಯಲ್ ಎಕ್ಸ್​ಪೆಕ್ಟೇಶನ್ಸ್ ಇಲ್ಲ. ನನಗೆ ಬೇಕಾಗಿರೋದು ಸಾವು. ನಾನು ತುಂಬಾ ಡಿಪ್ರೆಷನ್​ನಲ್ಲಿದ್ದೀನಿ. ಫ್ಯಾಮಿಲಿ ಸಮಸ್ಯೆಯಿಂದ ನೊಂದಿದ್ದೀನಿ. ನನ್ನ ಜೀವನದಲ್ಲಿ ನಡೆಯಬಾರದ ಘಟನೆ ನಡೆದು ಹೋಗಿದೆ. ನನ್ನಿಂದ ಅದನ್ನು ಮರೆಯೋದಕ್ಕೆ ಆಗ್ತಿಲ್ಲ. ನಾನು ಲೂಸರ್, ನಾನು ಹುಚ್ಚಿ. ದಯವಿಟ್ಟು ಮರ್ಸಿ ಕಿಲ್ಲಿಂಗ್​ಗೆ ಅವಕಾಶ ಕೊಡಿ ಎಂದು ಕೇಳಿಕೊಂಡಿದ್ದರು.


Spread the love

About Laxminews 24x7

Check Also

ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Spread the love ಬೆನಕಟ್ಟಿ: ಗ್ರಾಮಕ್ಕೆ ಆಗಮಿಸಿದ ಮಾಜಿ ಕೇಂದ್ರ ಸಚಿವ ದಿ. ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ