Breaking News

ರೈತರ ಜಮೀನುಗಳಿಗೆ ಭೇಟಿ ನೀಡಿ ಉದ್ಯೋಗಖಾತ್ರಿ ಯೋಜನೆಯ ವಿವಿಧ ಪ್ರಯೋಜನಗಳ ಕುರಿತು ಮನವರಿಕೆ ಮೂಡಿಸುವ ಕಾರ್ಯ ನಡೆಸಿದ್ದಾರೆ.

Spread the love

ಬಾಗಲಕೋಟೆ: ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಗಂಗೂಬಾಯಿ ಮಾನಕರ್ ರೈತರ ಜಮೀನುಗಳಿಗೆ ಭೇಟಿ ನೀಡಿ ಉದ್ಯೋಗಖಾತ್ರಿ ಯೋಜನೆಯ ವಿವಿಧ ಪ್ರಯೋಜನಗಳ ಕುರಿತು ಮನವರಿಕೆ ಮೂಡಿಸುವ ಕಾರ್ಯ ನಡೆಸಿದ್ದಾರೆ.

ಉದ್ಯೋಗ ಖಾತ್ರಿ ಯೋಜನೆ ಅಡಿ ಕೇವಲ ಗ್ರಾಮದಲ್ಲಿ ರಸ್ತೆ, ಕೆರೆ, ಸೇತುವೆ ನಿರ್ಮಾಣ ಮಾಡುವುದಕ್ಕೆ ಅಷ್ಟೇ ಸಿಮೀತವಲ್ಲ. ರೈತರು ತಮ್ಮ ಜಮೀನಿನಲ್ಲಿ ಕೆಲಸ ಮಾಡುವುದಕ್ಕೂ ಬಳಕೆ ಮಾಡಿಕೊಳ್ಳಬಹುದು. ಈ ಬಗ್ಗೆ ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗಂಗೂಬಾಯಿ ಮಾನಕರ್ ರೈತರ ಜಮೀನುಗಳಿಗೆ ಭೇಟಿ ನೀಡಿ, ಜಾಗೃತಿ ಮೂಡಿಸುವ ಕಾರ್ಯ ನಡೆಸಿದ್ದಾರೆ.

ಸಿಇಓ ಗಂಗೂಬಾಯಿ ಮಾನಕರ್ ತೋಟಗಾರಿಕೆ ಬೆಳೆಗಳನ್ನು ಬೆಳೆಸುವ ಜೊತೆಗೆ ಹೂವು ಬಿಡುವ ಸಸಿಗಳನ್ನು ರೈತರು ತಮ್ಮ ಜಮೀನಿನಲ್ಲಿ ನಡೆಸುವುದಕ್ಕೆ ಉದ್ಯೋಗ ಖಾತ್ರಿ ಯೋಜನೆಯಲ್ಲಿ ವೇತನ ನೀಡಲಾಗುವುದು. ಇದು ಅಲ್ಲದೆ ತೋಟಗಾರಿಕೆ ಬೆಳೆಗಳಾದ ದಾಳಿಂಬೆ, ಪೇರಲೆ, ಲಿಂಬು ಸೇರಿದಂತೆ ಇತರ ಹಣ್ಣುಗಳ ಸಸಿಗಳನ್ನು ನಡೆಸುವುದಕ್ಕೆ ದಿನಗೂಲಿಯಂತೆ ಉದ್ಯೋಗ ಖಾತ್ರಿ ಯೋಜನೆ ಉಪಯೋಗ ತೆಗೆದುಕೊಳ್ಳಬಹುದು ಎಂಬುದನ್ನು ತೋರಿಸಿಕೊಟ್ಟರು.

ಈಗಾಗಲೇ ಉದ್ಯೋಗ ಖಾತ್ರಿಯ ಯೋಜನೆಯಲ್ಲಿ ಉಪಯೋಗ ಪಡೆದುಕೊಂಡಿರುವ ಕೆಲ ರೈತರ ಜಮೀನುಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು, ರೈತರೊಂದಿಗೆ ಸಂವಾದ ನಡೆಸಿ ಮಾಹಿತಿ ನೀಡಿದರು.


Spread the love

About Laxminews 24x7

Check Also

1200 ರೈತರ ಆತ್ಮಹತ್ಯೆ: ಕಾಂಗ್ರೆಸ್ ಆಡಳಿತದಲ್ಲಿ ರೈತರ ಜೀವಕ್ಕಿಲ್ಲ ಬೆಲೆ- ಪ್ರಹ್ಲಾದ್ ಜೋಶಿ

Spread the love ಬೆಂಗಳೂರು ಜುಲೈ 26: ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ