Home / ಜಿಲ್ಲೆ / ಬೆಳಗಾವಿ / ಕೊನೆಗೂ ಜಿಲ್ಲಾಧಿಕಾರಿ ಹಿರೇ ಬಾಗೇವಾಡಿ ಗ್ರಾಮಕ್ಕೆ ಭೇಟಿ

ಕೊನೆಗೂ ಜಿಲ್ಲಾಧಿಕಾರಿ ಹಿರೇ ಬಾಗೇವಾಡಿ ಗ್ರಾಮಕ್ಕೆ ಭೇಟಿ

Spread the love

ಬೆಳಗಾವಿ -: ಕೊರೋನಾ ಸಂಕಷ್ಟದಿಂದ ನಲುಗಿಹೋಗಿ ತಿಂಗಳುಗಳೇ ಕಳೆದರೂ ಹಿರೇಬಾಗೇವಾಡಿ ಗ್ರಾಮಕ್ಕೆ ಭೇಟಿ ನೀಡದೆ ಜನರ ಆಕ್ರೋಶಕ್ಕೆ ಗುರಿಯಾಗಿದ್ದ ಬೆಳಗಾವಿ ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಳ್ಳಿ ಅವರನ್ನು ಗ್ರಾಮಕ್ಕೆ ಕರೆತರುವಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಯಶಸ್ವಿಯಾಗಿದ್ದಾರೆ.
ಕೋವಿಡ್ -19 ಬೆಳಗಾವಿ ಜಿಲ್ಲಾ ಉಸ್ತುವಾರಿ ಅಧಿಕಾರಿ ರಾಜೇಂದ್ರ ಚೋಳನ್ ಅವರೊಂದಿಗೆ ನಿನ್ನೆ ಸುದೀರ್ಘ ಚರ್ಚೆ ನಡೆಸಿದ್ದ ಲಕ್ಷ್ಮಿ ಹೆಬ್ಬಾಳಕರ್, ಹಿರೇಬಾಗೇವಾಡಿ ಜನರು ಪಡುತ್ತಿರುವ ಪಾಡನ್ನು ವಿವರಿಸಿದ್ದರು. ಜಿಲ್ಲಾಡಳಿತ ನಿರೀಕ್ಷಿತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ, ವಿಶೇಷವಾಗಿ, ಕೇವಲ 18 ಕಿಮೀ ಅಂತರದಲ್ಲಿದ್ದರೂ ಜಿಲ್ಲಾಧಿಕಾರಿಗಳು ಇಲ್ಲಿಯವರೆಗೂ ಗ್ರಾಮಕ್ಕೆ ಭೇಟಿ ನೀಡದಿರುವದನ್ನೂ ಸೂಚ್ಯವಾಗಿ ಗಮನಕ್ಕೆ ತಂದು ಅಸಮಾಧಾನ ತೋರಿಸಿದ್ದರು.
ಹಿರೇಬಾಗೇವಾಡಿಯಲ್ಲೂ ಗ್ರಾಮಸ್ಥರು ಜಿಲ್ಲಾಧಿಕಾರಿ ಗ್ರಾಮಕ್ಕೆ ಭೇಟಿ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು.
ಇದೆಲ್ಲದರ ಪರಿಣಾಮವಾಗಿ ಶುಕ್ರವಾರ ಬೊಮ್ಮನಳ್ಳಿ ಗ್ರಾಮಕ್ಕೆ ಎಂಟ್ರಿ ಕೊಟ್ಟರು. ಅಲ್ಲದೆ ಲಕ್ಷ್ಮಿ ಹೆಬ್ಬಾಳಕರ್ ಮುಂದಿಟ್ಟ ಎಲ್ಲ ಬೇಡಿಕೆಗಳನ್ನೂ ಈಡೇರಿಸುವುದಾಗಿ ಜನರಿಗೆ ಭರವಸೆ ನೀಡಿದರು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ