ಬೆಳಗಾವಿ- ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ* ಅವರು ದಿನಾಂಕ 02.05.2020, ಶನಿವಾರದಂದು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿರುವ ಕಿಣಯೇ ಡ್ಯಾಂ ಕಾಮಗಾರಿಯನ್ನು ವೀಕ್ಷಿಸಲಿದ್ದಾರೆ.
ಮದ್ಯಾಹ್ನ 12-00 ಘಂಟೆಗೆ
ನೀರಾವರಿ ಇಲಾಖೆ ಮತ್ತು ಕ.ನೀ.ನಿ.ನಿ.ದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದದ್ದಾರೆ.
ಜಲಸಂಪನ್ಮೂಲ ಸಚಿವರಾದ ಬಳಿಕ ಲಕ್ಷ್ಮೀ ಹೆಬ್ಬಾಳಕರ ಪ್ರತಿನಿಧಿಸುತ್ತಿರುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಿಣಿಯೇ ಡ್ಯಾಂ ಕಾಮಗಾರಿ ಬಹುತೇಕ ಮುಕ್ತಾಯವಾಗಿದ್ದು,ಜಲಾಶಯದ ಎಡದಂಡೆ ಮತ್ತು ಬಲದಂಡೆ ಕಾಮಗಾರಿಗಳು ನಡೆಯುತ್ತಿವೆ.
ಬೆಳಗಾವಿ ನಗರದ ಸುಮಾರು 20 ಕಿ ಮೀ ಅಂತರದಲ್ಲಿರುವ ಕಿಣೆಯೇ ಜಲಾಶಯ ಈ ಭಾಗದ ರೈತರ ಜೀವನಾಡಿಯಾಗಿದ್ದು ಕಾಲುವೆ ಕಾಮಗಾರಿಗಳ ಗುಣಮಟ್ಟವನ್ನು ಸಚಿವ ರಮೇಶ್ ಜಾರಕಿಹೊಳಿ ಪರಶೀಲನೆ ಮಾಡಲಿದ್ದಾರೆ
ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂಧರ್ಭದಲ್ಲಿ ಉಪಸ್ಥಿತ ರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.