Home / ಜಿಲ್ಲೆ / ಕೋಮು ಸೌಹಾರ್ದತೆ ಕದಡಲು ಯತ್ನಿಸಿದ ಎಂದು ಆರೋಪಿಸಿ ಗ್ರಾಮಸ್ಥರು ಯುವಕನಿಗೆ ಧರ್ಮದೇಟು ನೀಡಿದ್ದಾರೆ.

ಕೋಮು ಸೌಹಾರ್ದತೆ ಕದಡಲು ಯತ್ನಿಸಿದ ಎಂದು ಆರೋಪಿಸಿ ಗ್ರಾಮಸ್ಥರು ಯುವಕನಿಗೆ ಧರ್ಮದೇಟು ನೀಡಿದ್ದಾರೆ.

Spread the love

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ದೇಶನೂರು ಗ್ರಾಮದಲ್ಲಿನ ಯುವಕ ಕೋಮು ಸೌಹಾರ್ದತೆ ಕದಡಲು ಯತ್ನಿಸಿದ ಎಂದು ಆರೋಪಿಸಿ ಗ್ರಾಮಸ್ಥರು ಯುವಕನಿಗೆ ಧರ್ಮದೇಟು ನೀಡಿದ್ದಾರೆ.

ಇಲ್ಲಿನ ಮೀರಸಾಬ್ ಎಂಬ ಯುವಕ ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆ ಕದಡುವಂತಹ ವಿಡಿಯೋವಂದನ್ನು ಮಾಡುವ ಮೂಲಕ ಹರಿಬಿಟ್ಟಿದ್ದನು. ಆದ ಕಾರಣ ಗ್ರಾಮಸ್ಥರು, ಮುಖಂಡರು, ತಾಲ್ಲೂಕ ಪಂಚಾಯಿತಿ ಕಚೇರಿಯಲ್ಲಿ ಕೂಡಿಹಾಕಿ ಚಪ್ಪಲಿಯಿಂದ ಥಳಿಸಿದ್ದಾರೆ.

ಗ್ರಾಮ ಪಂಚಾಯಿತಿ ಅಧ್ಯಕ್ಷ ದೀಪಕ ಪಾಟೀಲ್, ಗ್ರಾಮದ ಮುಖಂಡರು ಯುವಕನನ್ನು ಕರೆದೊಯ್ದು ಥಳಿಸಿದ್ದಾರೆ. ಯುವಕನಿಂದ ಸಾಮಾಜಿಕ ಜಾಲತಾಣದಲ್ಲಿ ಇದ್ದಂತಹ ವಿಡಿಯೋವನ್ನು ಡಿಲಿಟ್ ಮಾಡಿಸಿದ್ದಾರೆ. ಈ ರೀತಿ ಮುಂದೆ ಮಾಡದಂತೆ ಬುದ್ದಿವಾದ ಹೇಳಿ ಕೈ ಬಿಟ್ಟಿದ್ದಾರೆ. ಯುವಕ ಸಮಾಜದ ಮುಖಂಡರಿಗೆ ಕ್ಷಮೇ ಯಾಚಿಸಿದ್ದಾನೆ.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ