Breaking News

ಬೆಳಗಾವಿ:…ಜವಳಿ ಸಚಿವ ಪಾಟೀಲ್ ತವರಿನಲ್ಲೇ ವಾರದಲ್ಲಿ ಮೂವರು ನೇಕಾರರು ಆತ್ಮಹತ್ಯೆ

Spread the love

ಬೆಳಗಾವಿ: ಜವಳಿ ಸಚಿವ ಶ್ರೀಮಂತ ಪಾಟೀಲ್ ತವರು ಜಿಲ್ಲೆಯಲ್ಲೇ ನೇಕಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಲಬಾಧೆ ತಡೆಯಲಾರದೆ ವಾರದಲ್ಲಿ ಮೂವರು ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜಿಲ್ಲೆಯ ಬೆಳಗಾವಿ ನಗರದ ವಡಗಾಂವ ನಿವಾಸಿ ಸುಜಿತ್ ಉಪರಿ (38), ಹುಕ್ಕೇರಿ ತಾಲೂಕಿನ ಆನಂದಪುರ ನಿವಾಸಿ ಶಂಕರ (60), ವಡಗಾಂವ ನಿವಾಸಿ ಸುವರ್ಣ ಕಾಮ್ಕರ್ (47) ಆತ್ಮಹತ್ಯೆಗೆ ಶರಣಾದ ನೇಕಾರರು. ಕೊರೊನಾ ನಡುವೆ ಕೆಲಸವಿಲ್ಲದೇ ಕುಟುಂಬ ಸಾಗಿಸಲಾಗದೆ, ಸಾಲದ ಕಿರುಕುಳಕ್ಕೆ ಬೇಸತ್ತು ನೇಕಾರರು ಆತ್ಮಹತ್ಯೆಯತ್ತ ಮುಖ ಮಾಡುತ್ತಿದ್ದಾರೆ.

ಅದರಲ್ಲೂ ಜವಳಿ ಸಚಿವ ಶ್ರೀಮಂತ ಪಾಟೀಲ್ ತರವರಲ್ಲೇ ಈ ರೀತಿಯಾದರೂ ಸಾಂತ್ವನ ಹೇಳಬೇಕಿದ್ದ ಸಚಿವರೇ ನಾಪತ್ತೆಯಾಗಿದ್ದಾರೆ. ಜವಳಿ ಸಚಿವರಾಗಿ ಆಯ್ಕೆಯಾದ ಬಳಿಕ ಜಿಲ್ಲೆಯಲ್ಲಿ ಶ್ರೀಮಂತ ಪಾಟೀಲ್ ಒಂದೇ ಒಂದು ಸಭೆ ಕೂಡ ಮಾಡಿಲ್ಲ. ಜೊತೆಗೆ ಒಂದೇ ವಾರದಲ್ಲಿ ಮೂರು ಜನ ಆತ್ಮಹತ್ಯೆ ಮಾಡಿಕೊಂಡರೂ ಜಿಲ್ಲೆಗೆ ಶ್ರೀಮಂತ ಪಾಟೀಲ್ ಬಂದಿಲ್ಲ. ಹೀಗಾಗಿ ಶ್ರೀಮಂತ ಪಾಟೀಲ್ ವಿರುದ್ಧ ನೇಕಾರರ ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ