Breaking News

ಹೆರಿಗೆ ಆಸ್ಪತ್ರೆ ವೈದ್ಯರ ಎಡವಟ್ಟಿಗೆ ಇಡೀ ಗ್ರಾಮಕ್ಕೆ ಗಂಡಾಂತರ.. ಎಲ್ಲಿ?

Spread the love

ಬೆಳಗಾವಿ: ಚಿಕ್ಕೋಡಿ ಹೆರಿಗೆ ಆಸ್ಪತ್ರೆಯ ಸಿಬ್ಬಂದಿಯಿಂದ ಆದ ಮಹಾ ಎಡವಟ್ಟಿಗೆ ಇಡೀ ಗ್ರಾಮವೊಂದು ಆತಂಕಕ್ಕೆ ಒಳಗಾಗಿದೆ. ಬಾಣಂತಿಗೆ ಸೋಂಕು ಇರುವುದನ್ನು ಹೇಳದೇ ಆಸ್ಪತ್ರೆ ಸಿಬ್ಬಂದಿ ಡಿಸ್ಚಾರ್ಜ್‌ ಮಾಡಿದ್ದಾರೆ. ಇದರಿಂದ ಈಗ ಇಡೀ ಬಾವನಸೌಂದತ್ತಿ ಗ್ರಾಮಕ್ಕೆ ಗಂಡಾಂತರ ಎದುರಾಗಿದೆ.

ಕಳೆದ ಮೂರು ದಿನಗಳ ಹಿಂದೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಹೆರಿಗೆ ಆಸ್ಪತ್ರೆಯಲ್ಲಿ ಮಹಿಳೆಗೆ ಹೆರಿಗೆಯಾಗಿತ್ತು. ಹೆರಿಗೆಯಾದ ಬಳಿಕ ಬಾಣಂತಿಗೆ ಸೋಂಕಿರುವುದು ಹೇಳದೆ ವೈದ್ಯರು ಆಕೆಯನ್ನು ಮನೆಗೆ ಕಳುಹಿಸಿದ್ದರು. ನಿನ್ನೆ ಸಂಜೆ ಗ್ರಾಮವನ್ನ ಸೀಲ್​ಡೌನ್ ಮಾಡಲು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.

ಚಿಕ್ಕೋಡಿ ಹೆರಿಗೆ ಆಸ್ಪತ್ರೆ ಸಿಬ್ಬಂದಿಗಳ ವಿರುದ್ಧ ಗ್ರಾಮಸ್ಥರು, ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೈದ್ಯರ ಬೇಜವಾಬ್ದಾರಿಯಿಂದ ರಾಯಬಾಗ ತಾಲೂಕು ಬಾವನಸೌಂದತ್ತಿ ಗ್ರಾಮದ ಜನರಿಗೆ ಆತಂಕ ಉಂಟಾಗಿದೆ.

ಕೊರೊನಾ ರೋಗ ಲಕ್ಷಣಗಳು ಇಲ್ಲ ಅಂತಾ ಬಾಣಂತಿಯನ್ನ ಮನೆಗೆ ಕಳುಹಿಸಿದ್ದಾರೆ. ನಾವು ಬಾಣಂತಿಯನ್ನ ಊರಿಗೆ ಕರೆದುಕೊಂಡು ಬರುವ ಮುನ್ನ ವೈದ್ಯರು ವಿಷಯ ತಿಳಿಸಿದ್ದರೆ ಬಾಣಂತಿಗೆ ಬೇರೆ ಕಡೆ ವ್ಯವಸ್ಥೆ ಮಾಡುತ್ತಿದ್ದೆವು. ಈಗ ಬಾಣಂತಿ ನೋಡಲು ಮನೆಗೆ ಭೇಟಿ ನೀಡಿದ ಸಂಬಂಧಿಕರಿಗೂ ಸೋಂಕು ತಗುಲುವ ಆತಂಕವಿದೆ ಎಂದು ಕುಟುಂಬಸ್ಥರು ಕಿಡಿಕಾರಿದ್ದಾರೆ.


Spread the love

About Laxminews 24x7

Check Also

ರಾಯಚೂರು, ಕೊಪ್ಪಳ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಪ್ರವೇಶ ಪತ್ರ ಡೌನ್‌ಲೋಡ್‌ಗೆ ಸಲಹೆ: ಕೆಇಎ

Spread the loveಬೆಂಗಳೂರು: ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್‌ ಹುದ್ದೆಗೆ ಅರ್ಜಿ ಸಲ್ಲಿಸಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯ ಕೇಂದ್ರಗಳನ್ನು ಪರೀಕ್ಷೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ