Breaking News

ಬೆಳಗಾವಿಯಲ್ಲಿ ಕೊರೊನಾ ಭೀತಿ ನಡುವೆ ಡೆಂಗ್ಯೂಗೆ ಬಾಲಕ ಬಲಿ

Spread the love

ಬೆಳಗಾವಿ, ಜುಲೈ 6: ಕೊರೊನಾ ವೈರಸ್ ಭೀತಿ ನಡುವೆಯೇ ಬೆಳಗಾವಿಯಲ್ಲಿ ಡೆಂಗ್ಯೂ ಪ್ರಕರಣ ಕಾಣಿಸಿಕೊಂಡಿದೆ. ಬೆಳಗಾವಿಯ ವಡಗಾವಿಯ ವಿಷ್ಣು ಗಲ್ಲಿ ನಿವಾಸಿ, 12 ವರ್ಷದ ಬಾಲಕ ಡೆಂಗ್ಯೂಗೆ ಬಲಿಯಾದ್ದಾನೆ
ವರದ್ ಕಿರಣ್ ಪಾಟೀಲ್ (12) ಡೆಂಗ್ಯೂಗೆ ಬಲಿಯಾದ ಬಾಲಕ. ಕೆಎಲ್‌ಎಸ್ ಶಾಲೆಯ ಆರನೇ ತರಗತಿ ವಿದ್ಯಾರ್ಥಿಯಾಗಿದ್ದ ವರದ ಕಳೆದ ಕೆಲವು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ, ನಿನ್ನೆ ಜುಲೈ 5ರಂದು ಸಾವನ್ನಪ್ಪಿದ್ದಾನೆ
ಕೊರೊನಾ ವೈರಸ್ ನಿಂದಾಗಿ ಈಗಾಗಲೇ ಆಸ್ಪತ್ರೆಯಲ್ಲಿ ರೋಗಿಗಳ ಪ್ರವೇಶ ನಿಂತಿದೆ.
ಇದೀಗ ಕಾಣಿಸಿಕೊಂಡಿರುವ ಡೆಂಗ್ಯೂ ಪ್ರಕರಣದ ಕುರಿತು ಪಾಲಿಕೆಯ ಆರೋಗ್ಯ ವಿಭಾಗದ ಕಾರ್ಯವೈಖರಿಯನ್ನು ನಾಗರಿಕರು ಪ್ರಶ್ನಿಸಿದ್ದಾರೆ.

 

ಜಿಲ್ಲಾ ಆರೋಗ್ಯ ಇಲಾಖೆ ಪ್ರಸ್ತುತ ಕೊರೊನಾ ಸೋಂಕಿನತ್ತ ಗಮನ ಹರಿಸುತ್ತಿದ್ದು, ಪಾಲಿಕೆ ಮತ್ತು ಆರೋಗ್ಯ ಇಲಾಖೆ ಡೆಂಗ್ಯೂ ಮುಂತಾದ ಕಾಯಿಲೆಗಳನ್ನು ನಿರ್ಲಕ್ಷಿಸಿದೆ ಎಂದು ಜನರು ದೂರುತ್ತಿದ್ದಾರೆ.


Spread the love

About Laxminews 24x7

Check Also

ಕುಟುಂಬ ಸಮೇತರಾಗಿ ಬೆಳ್ಳಂಬೆಳಗ್ಗೆ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದ ಡಿಕೆಶಿ

Spread the love ಬೆಂಗಳೂರು: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ, ನಂಬಿಕೆ ಹೊಂದಿರುವ ಸಿಎಂ ಡಿ.ಕೆ ಶಿವಕುಮಾರ್‌  ಅವರು ರಾಜ್ಯದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ