ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಹೈಕೋರ್ಟ್ನಿಂದ ದೊಡ್ಡ ಸಮಾಧಾನ ದೊರೆತಿದೆ.
ಸಚಿವ ದಿನೇಶ್ ಗುಂಡೂರಾವ್ ಅವರ ವಿರುದ್ಧ ನೀಡಿದ್ದ ವಿವಾದಾತ್ಮಕ ಹೇಳಿಕೆ ಹಾಗೂ ಪ್ರಚೋದನಕಾರಿ ಭಾಷಣಗಳಿಗೆ ಸಂಬಂಧಿಸಿದಂತೆ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ನಾಲ್ಕು ಕ್ರಿಮಿನಲ್ ಪ್ರಕರಣಗಳನ್ನು ಹೈಕೋರ್ಟ್ ಶುಕ್ರವಾರ ರದ್ದುಪಡಿಸಿ ಆದೇಶ ಹೊರಡಿಸಿದೆ. ತಮ್ಮ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಹಾಗೂ ಕೆಳ ನ್ಯಾಯಾಲಯಗಳಲ್ಲಿ ನಡೆಯುತ್ತಿದ್ದ ವಿಚಾರಣಾ ಪ್ರಕ್ರಿಯೆಗಳನ್ನು ರದ್ದುಗೊಳಿಸುವಂತೆ ಕೋರಿ ಯತ್ನಾಳ್ ಸಲ್ಲಿಸಿದ್ದ ಅರ್ಜಿಗಳನ್ನುನ್ಯಾಯಮೂರ್ತಿ ಎಂ.
ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಪುರಸ್ಕಕರಿಸಿ ಎಲ್ಲಾ ಪ್ರಕರಣವನ್ನು ರದ್ದುಗೊಳಿಸಿದೆ.
Laxmi News 24×7