Breaking News

ನಾನು ಬಿಜೆಪಿ ಕಚೇರಿಯಲ್ಲಿ ಕಸ ಗುಡಿಸಿಕೊಂಡು ಪಕ್ಷ ಸಂಘಟನೆ ಮಾಡಿಕೊಂಡು ಇರಲು ಸಿದ್ಧ

Spread the love

ಬೆಂಗಳೂರು, ಫೆ.2- ನನಗೆ ಸಚಿವ ಸ್ಥಾನ ಸಿಗದಿದ್ದರೂ ಪರವಾಗಿಲ್ಲ. ಆದರೆ ಹಿರಿಯವರಾದ ವಿಶ್ವನಾಥ್ ಅವರಿಗೆ ಮಂತ್ರಿಸ್ಥಾನ ಕೊಡಬೇಕೆಂದು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ನೀಡಿದ ಭರವಸೆಯಂತೆ ನಡೆದುಕೊಳ್ಳುತ್ತಾರೆ ಎಂಬ ವಿಶ್ವಾಸ ಈಗಲೂ ಇದೆ.

ಆದರೆ, ನನ್ನನ್ನು ಸಂಪುಟಕ್ಕೆ ತೆಗೆದುಕೊಳ್ಳುವುದಿಲ್ಲ ಎಂಬ ಮಾಹಿತಿ ಕೇಳಿ ನೋವಾಗುತ್ತಿದೆ ಎಂಬ ಅಸಮಾಧಾನ ವ್ಯಕ್ತಪಡಿಸಿದರು.ನಾವು ಎಲ್ಲವನ್ನು ತ್ಯಾಗ ಮಾಡಿ ಬಂದಿದ್ದೇವೆ. ಮುಖ್ಯಮಂತ್ರಿ ಬಳಿ ಇನ್ನೂ ಮಾತನಾಡಿಲ್ಲ. ಮತ್ತೆ ಮಾತನಾಡುತ್ತೇವೆ. ನನಗೆ ಮಂತ್ರಿಯಾಗುವ ಆಸೆ ಇಲ್ಲ. ಆದರೆ, ಯಡಿಯೂರಪ್ಪನವರು ಕೊಟ್ಟ ಮಾತು ಉಳಿಸಿಕೊಳ್ಳಬೇಕು
ನನಗೆ ಕೊಡದಿದ್ದರೂ ವಿಶ್ವನಾಥ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂಬುದು ನನ್ನ ಆಗ್ರಹವಾಗಿದೆ ಎಂದು ಅವರು ಹೇಳಿದರು. ನಾನು ಬಿಜೆಪಿ ಕಚೇರಿಯಲ್ಲಿ ಕಸ ಗುಡಿಸಿಕೊಂಡು ಪಕ್ಷ ಸಂಘಟನೆ ಮಾಡಿಕೊಂಡು ಇರಲು ಸಿದ್ಧ ಎಂದು ಕುಮಟಳ್ಳಿ ಹೇಳಿದರು.


Spread the love

About Laxminews 24x7

Check Also

1200 ರೈತರ ಆತ್ಮಹತ್ಯೆ: ಕಾಂಗ್ರೆಸ್ ಆಡಳಿತದಲ್ಲಿ ರೈತರ ಜೀವಕ್ಕಿಲ್ಲ ಬೆಲೆ- ಪ್ರಹ್ಲಾದ್ ಜೋಶಿ

Spread the love ಬೆಂಗಳೂರು ಜುಲೈ 26: ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ