Breaking News
Home / ಜಿಲ್ಲೆ / ಅಧಿಕಾರ, ಹಣದ ಹೊಳೆ ಹರಿಸಿ ಬಿಜೆಪಿ ಗೆದ್ದಿದೆ: ಸಿದ್ದರಾಮಯ್ಯ

ಅಧಿಕಾರ, ಹಣದ ಹೊಳೆ ಹರಿಸಿ ಬಿಜೆಪಿ ಗೆದ್ದಿದೆ: ಸಿದ್ದರಾಮಯ್ಯ

Spread the love

ಬಾಗಲಕೋಟೆ: ರಾಜ್ಯದ ಶಿರಾ ಮತ್ತು ಆರ್.ಆರ್. ನಗರ ಎರಡೂ ಕಡೆ ಬಿಜೆಪಿ ಗೆದ್ದಿದೆ. ನಾವು ಎರಡು ಕಡೆ ಸೋತಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಸಾಮಾನ್ಯ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಬಾದಾಮಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿರಾದಲ್ಲಿ ಗೆಲ್ಲುವ ನಿರೀಕ್ಷೆ ಇತ್ತು. ಆರ್.ಆರ್.ನಗರದಲ್ಲಿ ಒಳ್ಳೆಯ ಸ್ಪರ್ಧೆ ನೀಡುತ್ತೇವೆ ಎಂದು ಕೊಂಡಿದ್ದೆವು. ಆದರೆ ಜನರ ತೀರ್ಪನ್ನು ನಾವು ಒಪ್ಪಿಕೊಂಡಿದ್ದೇವೆ ಎಂದರು.
ಸರಕಾರದಲ್ಲಿರುವವರು ಚುನಾವಣೆಯನ್ನು ನಿಷ್ಪಕ್ಷಪಾತವಾಗಿ, ಮುಕ್ತವಾಗಿ ನಡೆಸುವುದು ಅವರ ಜವಾಬ್ದಾರಿ. ನನಗೆ ಇರುವ ಮಾಹಿತಿಯ ಪ್ರಕಾರ, ಬಿಜೆಪಿ ಅಧಿಕಾರ ದುರುಪಯೋಗ ಮಾಡಿಕೊಂಡಿದೆ. ಎರಡು ಕಡೆ ಹಣದ ಹೊಳೆ ಹರಿಸಿದೆ ಎಂದು ಆರೋಪಿಸಿದರು.
ಏನೆ ಇರಲಿ ಬಿಜೆಪಿಗೆ ಜನ ಮತ ಕೊಟ್ಟಿರುವುದು ತೀರ್ಪು. ಆ ತೀರ್ಪನ್ನು ನಾವು ಒಪ್ಪಿಕೊಂಡಿದ್ದೇವೆ ಎಂದ ಅವರು ಅಭ್ಯರ್ಥಿ ಆಯ್ಕೆಯಲ್ಲಿ ಯಾವುದೇ ಗೊಂದಲವಾಗಿಲ್ಲ. ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ ನಡೆದಿತ್ತು ಎಂದು ಹೇಳಿದರು.
ಆರ್ ಆರ್ ನಗರ ಅಭ್ಯರ್ಥಿ ಆಯ್ಕೆ ವಿಳಂಭವಾಯ್ತು. ವಿದ್ಯಾವಂತ ಹೆಣ್ಣುಮಗಳಿಗೆ ಕಣಕ್ಕಿಳಿಸಿದ್ದೆವು. ಅಧಿಕಾರ, ಹಣದ ಬೆಂಬಲ, ಸರಕಾರ ಇರುವುದರಿಂದ ಅವರಿಗೆ ಅನುಕೂಲವಾಗಿವೆ. ಉಪಚುನಾವಣೆ ಆಗಿರೋದರಿಂದ ಅವರಿಗೇನು ದೊಡ್ಡ ಶಕ್ತಿ ಬರೋದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಲೀಡ್ ಬಂದಿತ್ತು. ಜೊತೆಗೆ ಹಣದ ಪ್ರಭಾವದಿಂದ ನಮ್ಮ ಪಕ್ಷದ ಅಭ್ಯರ್ಥಿಗಳು ಸೋತಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷ ಅವನತಿಯತ್ತ ಸಾಗುತ್ತಿದೆ ಎನ್ನಲು ಇಂದಿನ ಫಲಿತಾಂಶ ನಿದರ್ಶನ: ಬಿ.ಸಿ.ಪಾಟೀಲ್
ಆರ್ ಆರ್ ನಗರದಲ್ಲಿ ಜೆಡಿಎಸ್ ಬಿಜೆಪಿ ಹೊಂದಾಣಿಕೆ ಮಾಡಿಕೊಂಡ ರೀತಿ ಕಾಣಿಸುತ್ತದೆ. ಜೆಡಿಎಸ್‍ನವರು ದುರ್ಬಲ ಅಭ್ಯರ್ಥಿಯನ್ನು ಬೇಕೆಂದೆ ಹಾಕಿದ್ದಾರೆ ಎಂದರು.
ಯಡಿಯೂರಪ್ಪ ಬದಲಾವಣೆ: ಉಪಚುನಾವಣೆ ಬಳಿಕ ಬಿಎಸ್‍ವೈ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ತುತ್ತಾರೆ ಎಂದು ಮತ್ತೊಮ್ಮೆ ಪ್ರತಿಪಾದಿಸಿದ ಅವರು, ನಾನು ಈಗಲೂ ಹಾಗೆ ಹೇಳುತ್ತೇನೆ. ನನಗೆ ಈಗಲೂ ಮಾಹಿತಿ ಇದೆ. ಚುನಾವಣೆ ಬಳಿಕ ಯಡಿಯೂರಪ್ಪನವರನ್ನು ಬದಲಾವಣೆ ಮಾಡುತ್ತಾರೆ ಎಂದರು.
ಸಂಸದ ಪ್ರತಾಪ ಸಿಂಹ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ನಾನು ಪ್ರತಾಪ ಸಿಂಹನಿಗೆ ಪ್ರತಿಕ್ರಿಯೆ ನೀಡಲ್ಲ. ಪ್ರತಾಪ ಸಿಂಹಗೆ ಇನ್ನು ರಾಜಕೀಯ ಪ್ರೌಢಿಮೆ ಇಲ್ಲ ಎಂದು ಟೀಕಿಸಿದರು.
ಉಪ ಚುನಾವಣೆಯ ಸೋಲಿನ ಹೊಣೆ ಡಿಕೆಶಿವಕುಮಾರ್ ಯಾಕೆ ಹೊರಬೇಕು. ಯಾರು ಅಧ್ಯಕ್ಷರಾದರೂ ಅಷ್ಟೇ ಇದು ಬೈ ಎಲೆಕ್ಷನ್. 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಗೆಲ್ಲತ್ತೇವೆ ಎಂದು ಹೇಳಿದರು.
ಬಿಹಾರ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದ ಅವರು, ಬೆಳಗ್ಗೆ ಮಹಾಘಟಬಂಧನ ಮುನ್ನಡೆಯಲ್ಲಿತ್ತು. ಕ್ರಮೇಣ ಬಿಜೆಪಿ ಮುನ್ನಡೆ ಸಾಧಿಸಿದೆ. ಇನ್ನೂ ಮತ ಏಣಿಕೆ ನಡೆಯುತ್ತಿದೆ. ಅಂತಿಮವಾಗಿ ಏನಾಗುತ್ತದೆಯೋ ನೋಡಬೇಕು ಎಂದರು.
ಎಲ್ಲಾ ಸಮೀಕ್ಷೆಗಳು ಮಹಾಘಟಬಂಧನ ಗೆಲ್ಲುತ್ತೆ ಎಂದಿತ್ತು. ಇದರ ಬಗ್ಗೆ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. 40 ಸ್ಥಾನ ಲೀಡ್ ಇದ್ದಿದ್ದು, ಇದ್ದಕ್ಕಿದ್ದಂತೆ ಎನ್‍ಡಿಎಲೀಡ್ ಬಂದಿದೆ. ಹೀಗಾಗಿ ಅನುಮಾನ ಬರಲ್ವಾ? ಇವಿಎಂ ಮಶೀನ್ ಬಗ್ಗೆ ಏನು ಗೊತ್ತಿಲ್ಲ. ಕಾಂಗ್ರೆಸ್, ಉಳಿದ ಪಕ್ಷಗಳ ನಾಯಕರು ಆ ಬಗ್ಗೆ ಮಾತನಾಡುತ್ತಾರೆ ಎಂದು ಹೇಳಿದರು.


Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ