Breaking News

ಇಂದು ಬರಲಿದೆ ಪಾದರಾಯನಪುರ ಪುಂಡರ ಬಂಧಿಸಿದ್ದ ಪೊಲೀಸರ ಕೊರೊನಾ ಪರೀಕ್ಷಾ ವರದಿ ……..

Spread the love

ಬೆಂಗಳೂರು, ಏ. 27: ಪಾದರಾಯನಪುರ ಗಲಭೆ ಪ್ರಕರಣ ಆರೋಪಿಗಳ ಪತ್ತೆ ಕಾರ್ಯದಲ್ಲಿ ತೊಡಗಿದ್ದ ಪೊಲೀಸ್ ಸಿಬ್ಬಂದಿಯ ಕೋವಿಡ್ ಸೋಂಕಿನ ಪರೀಕ್ಷಾ ವರದಿ ಇವತ್ತು ಬರಲಿದೆ. ಪರೀಕ್ಷೆಗೆ ಒಳಪಟ್ಟಿರುವ ಸಿಬ್ಬಂದಿ ಕುರಿತು ಗೃಹ ಇಲಾಖೆ ಕೂಡ ಆತಂಕದಲ್ಲಿದೆ. ಕಳೆದ ಏಪ್ರಿಲ್ 19 ರಂದು ಕೊರೊನಾ ವೈರಸ್ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ ಪಾದರಾಯನಪುರ ಪುಂಡರನನ್ನು ಕ್ವಾರಂಟೈನ್‌ಗೆ ಕರೆದೊಯ್ಯಲು ಬಂದಿದ್ದಾಗ ಹಲ್ಲೆ ನಡೆದಿತ್ತು.

ಬಳಿಕ ಹೆಚ್ಚಿನ ಪೊಲೀಸ್ ಸಿಬ್ಬಂದಿ ಮೂಲಕ ಶಂಕಿತರನ್ನು ವಶಕ್ಕೆ ಪಡೆದು ರಾಮನಗರ ಜೈಲಿಗೆ ಸ್ಥಳಾಂತರ ಮಾಡಿದ್ದಾಗ 5 ಪುಂಡರಲ್ಲಿ ಸೋಂಕು ಪತ್ತೆಯಾಗಿದೆ. ಪಾದರಾಯನಪುರದಲ್ಲಿ ಈವರೆಗೆ ಒಟ್ಟು 25 ಜನರಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಕಿಡಿಗೇಡಿಗಳ ಪತ್ತೆಗೆ ಶ್ರಮಿಸಿದ್ದ ಪಶ್ಚಿಮ, ಕೇಂದ್ರ, ಉತ್ತರ ವಿಭಾಗ ಹಾಗೂ ಸಿಸಿಬಿ ಪೊಲೀಸರಿಗೆ ಕೋವಿಡ್-19 ಪರೀಕ್ಷೆ ಮಾಡಲಾಗಿದೆ. ಮೈಸೂರು ರಸ್ತೆಯ ಸಿಎಆರ್ ಮೈದಾನದಲ್ಲಿ ಕೋವಿಡ್-19 ಪರೀಕ್ಷೆಗೊಳಪಟ್ಟಿದ್ದ 186 ಪೊಲೀಸರು. ಸೋಂಕಿತರ ಸಂಪರ್ಕಕ್ಕೆ ಬಂದಿರುವ ಸಾಧ್ಯತೆಯಿರುವ ಎಲ್ಲ ಸಿಬ್ಬಂದಿಯ ಮಾದರಿ ಸಂಗ್ರಹ ಮಾಡಲಾಗಿತ್ತು.

ಹೀಗಾಗಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ 186ಕ್ಕೂ ಹೆಚ್ಚು ಪೊಲೀಸರಿಗೆ ಕೂಡ ಕೊರೊನಾ ವೈರಸ್ ತಪಾಸಣೆಗೆ ಥ್ರೋಟ್ ಸ್ವಾಬ್ ಪರೀಕ್ಷೆಗೆ ಒಳಪಡಿಸಲಾಗಿದೆ. ಪೊಲೀಸರಿಗೆ ಮಾಡಲಾಗಿದ್ದ ಕೊರೊನ ತಪಾಸಣೆಯ ವರದಿ ಇವತ್ತು ಬರಲಿದೆ. ಹೀಗಾಗಿ ಪೊಲೀಸ್ ಸಿಬ್ಬಂದಿ ಕೂಡ ಸ್ವಲ್ಪ ಆತಂಕದಲ್ಲಿದ್ದಾರೆ

ಅದೇ ಸಂದರ್ಭದಲ್ಲಿ 83 ಆರೋಪಿಗಳನ್ನು ಚಾಮರಾಜಪೇಟೆಯ ಸಿಸಿಬಿ ಕಚೇರಿಯಲ್ಲಿ ವಿಚಾರಣೆ ನಡೆಸಲಾಗಿತ್ತು. ಹೀಗಾಗಿ ಸಿಸಿಬಿ ಪೊಲೀಸರು ಕೂಡ ಪರೀಕ್ಷೆಗೆ ಒಳಗಾಗಿದ್ದಾರೆ.


Spread the love

About Laxminews 24x7

Check Also

ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅಪರ್ಣಾ ಅವರು ಮೃತರಾಗಿದ್ದಾರೆ. ಕ್ಯಾನ್ಸರ್​​ನಿಂದ ಬಳಲುತ್ತಿದ್ದ ಅವರು ಇಂದು (ಜುಲೈ 11) ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. #AparnaVastarey #Aparna #Death

Spread the loveಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅಪರ್ಣಾ ಅವರು ಮೃತರಾಗಿದ್ದಾರೆ. ಕ್ಯಾನ್ಸರ್​​ನಿಂದ ಬಳಲುತ್ತಿದ್ದ ಅವರು ಇಂದು (ಜುಲೈ 11) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ