Breaking News
Home / ಜಿಲ್ಲೆ / ಶಿವಮೊಗ್ಗ / ಶಿವಮೊಗ್ಗದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಎಫ್ ಐಆರ್ ,ಇನ್ಸ್ಪೆಕ್ಟರ್ ನನ್ನು ಅಮಾನತುಗೊಳಿಸಿ: ಡಿಕೆಶಿ ಆಗ್ರಹ

ಶಿವಮೊಗ್ಗದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಎಫ್ ಐಆರ್ ,ಇನ್ಸ್ಪೆಕ್ಟರ್ ನನ್ನು ಅಮಾನತುಗೊಳಿಸಿ: ಡಿಕೆಶಿ ಆಗ್ರಹ

Spread the love

ಬೆಂಗಳೂರು: ಶಿವಮೊಗ್ಗದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಎಫ್ ಐಆರ್ ದಾಖಲಿಸಿರುವ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡುವಂತೆ ಒತ್ತಾಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿಎಂ ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.
ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ  ಬಿಜೆಪಿ ಕಾರ್ಯಕರ್ತನೊಬ್ಬ ನೀಡಿರುವ ಸುಳ್ಳು ದೂರು ಆಧರಿಸಿ ಸೋನಿಯಾಗಾಂಧಿ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಪೊಲೀಸ್ ಅಧಿಕಾರಿ ತನ್ನ ಅಧಿಕಾರ‌ ದುರುಪಯೋಗಪಡಿಸಿಕೊಂಡು ಎಫ್​​ಐಆರ್ ದಾಖಲಿಸಿದ್ದಾರೆ. ಕೂಡಲೇ ಆ ಅಧಿಕಾರಿಯನ್ನ ಅಮಾನತು ಮಾಡಬೇಕು ಎಂದು ಶಿವಕುಮಾರ್ ಒತ್ತಾಯಿಸಿದ್ದಾರೆ.
ಸಿಎಂಗೆ ಮಾತ್ರವಲ್ಲದೇ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮತ್ತು ಶಿವಮೊಗ್ಗ ಎಸ್.ಪಿಗೂ ಡಿ.ಕೆ.ಶಿವಕುಮಾರ್ ಪತ್ರ ಬರೆದಿದ್ದಾರೆ.

Spread the love

About Laxminews 24x7

Check Also

ನಾಳೆಯಿಂದಲೇ ರಾಜ್ಯಾದ್ಯಂತ ಪ್ರವಾಸ: B.S.Y.

Spread the love ಶಿವಮೊಗ್ಗ: ನಾನು ಚುನಾವಣೆಗೆ ನಿಲ್ಲುವುದಿಲ್ಲವೆಂದು ಹೇಳಿದ್ದೇನೆ. ಆದರೆ, ರಾಜ್ಯದ ಉದ್ದಗಲಕ್ಕೂ ಓಡಾಡಿ ಪಕ್ಷ ಬಲಪಡಿಸಿ ಅಧಿಕಾರಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ