Breaking News

ಕೊರೊನಾ ಬರುತ್ತೆ ಕೆಲಸಕ್ಕೆ ಹೋಗ್ಬೇಡ ಅಂದಿದ್ದಕ್ಕೆ ಆಶಾ ಕಾರ್ಯಕರ್ತೆ ಆತ್ಮಹತ್ಯೆ………..

Spread the love

ಬೆಂಗಳೂರು: ಕೊರೊನಾ ಬರುತ್ತೆ ಕೆಲಸಕ್ಕೆ ಹೋಗಬೇಡ ಎಂದು ಅಣ್ಣ ಬೈದಿದ್ದಕ್ಕೆ ಆಶಾ ಕಾರ್ಯಕರ್ತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಸವಿತಾ(27) ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಪಾವಗಡ ಮೂಲದ ಸವಿತಾ ನಗರದಲ್ಲಿ ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದರು. ಯಲಹಂಕದ ಮಾರುತಿ ನಗರದ ಅಣ್ಣನ ಮನೆಯಲ್ಲಿ ವಾಸವಾಗಿದ್ದರು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗಂಡನಿಂದ ದೂರವಾಗಿ, ಅಣ್ಣನ ಮನೆಯಲ್ಲೇ ವಾಸಿಸುತ್ತಿದ್ದರು. ಅಣ್ಣನ ಮನೆಯಿಂದಲೇ ಕೆಲಸಕ್ಕೆ ಹೋಗುತ್ತಿದ್ದರು ಎನ್ನಲಾಗಿದೆ.

ಕೊರೊನಾ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಕೆಲಸಕ್ಕೆ ಹೋಗಬೇಡ ಎಂದು ಅಣ್ಣ ಬೈದಿದ್ದನಂತೆ. ಹೀಗಾಗಿ ಕಳೆದ ಹತ್ತು ದಿನಗಳಿಂದ ಸವಿತಾ ಕೆಲಸಕ್ಕೆ ಹೋಗಿರಲಿಲ್ಲ. ಅಲ್ಲದೆ ಅಣ್ಣನ ಬೈಗುಳಕ್ಕೆ ಬೇಸತ್ತು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಕರಣದ ಕುರಿತು ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ