Breaking News
Home / ಜಿಲ್ಲೆ / ಬೆಂಗಳೂರು / ಬೆಂಗಳೂರು : 2 ಪ್ರತ್ಯೇಕ ಪ್ರಕರಣಗಳಲ್ಲಿ ರೈಲಿಗೆ ಸಿಲುಕಿ ಇಬ್ಬರ ಸಾವು……….

ಬೆಂಗಳೂರು : 2 ಪ್ರತ್ಯೇಕ ಪ್ರಕರಣಗಳಲ್ಲಿ ರೈಲಿಗೆ ಸಿಲುಕಿ ಇಬ್ಬರ ಸಾವು……….

Spread the love

ಬೆಂಗಳೂರು, ಮೇ 19- ಯಶವಂತಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆ.

ಒಂದು ಪ್ರಕರಣದಲ್ಲಿ ಚಿಕ್ಕಬಾಣಾವಾರ- ಗೊಲ್ಲಹಳ್ಳಿ ರೈಲ್ವೆ ನಿಲ್ದಾಣಗಳ ಮಧ್ಯೆ ಹಾದು ಹೋಗುವ ರೈಲ್ವೆ ಹಳಿ ಬಳಿ ಸುಮಾರು 40 ವರ್ಷದಂತೆ ಕಾಣುವ ವ್ಯಕ್ತಿ ನಿನ್ನೆ ಮುಂಜಾನೆ ಯಾವುದೋ ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆ.

ಕೋಲುಮುಖ, ಸಾಧಾರಣ ಮೈಕಟ್ಟು ಹೊಂದಿರುವ ಈ ವ್ಯಕ್ತಿಯ ಹೆಸರು, ವಿಳಾಸ ತಿಳಿದುಬಂದಿಲ್ಲ. ಮೈಮೇಲೆ ಕಂದುಬಣ್ಣದ ರೆಡಿಮೇಡ್ ಪ್ಯಾಂಟು, ತುಂಬು ತೋಳಿನ ರೆಡಿಮೇಡ್ ಶರ್ಟ್ ಇದೆ.

ಮತ್ತೊಂದು ಪ್ರಕರಣದಲ್ಲಿ ಯಶವಂತಪುರ- ಚಿಕ್ಕಬಾಣಾವಾರ ರೈಲು ನಿಲ್ದಾಣಗಳ ಮಧ್ಯೆ ಕಮ್ಮಗೊಂಡನಹಳ್ಳಿಯ ರೈಲ್ವೆ ಹಳಿ ಬಳಿ ಸುಮಾರು 40-45 ವರ್ಷದಂತೆ ಕಾಣುವ ವ್ಯಕ್ತಿ ಇಂದು ಮುಂಜಾನೆ ರೈಲಿಗೆ ಸಿಕ್ಕಿ ಮೃತಪಟ್ಟಿದ್ದಾರೆ.

ಗೋಧಿಮೈಬಣ್ಣ, ಕೋಲುಮುಖ ಹೊಂದಿರುವ ಈ ವ್ಯಕ್ತಿಯ ಹೆಸರು, ವಿಳಾಸ ಪತ್ತೆಯಾಗಿಲ್ಲ. ಈತನ ಕತ್ತಿನಲ್ಲಿ ಹಳದಿ, ಹಸಿರು ಬಣ್ಣದ ದಾರ ಇದೆ. 5 ಅಡಿ ಎತ್ತರ ಇರುವ ಈ ವ್ಯಕ್ತಿ ಮೈಮೇಲೆ ಸಿಮೆಂಟ್ ಹಾಗೂ ನೀಲಿ ಬಣ್ಣದ ಟೀಶರ್ಟ್ ಇದೆ.ಬ್ಬರ ಮೃತದೇಹಗಳನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿಡಲಾಗಿದ್ದು, ವಾರಸುದಾರರು ಈ ಕೂಡಲೇ ಯಶವಂತಪುರ ರೈಲ್ವೆ ಪೊಲೀಸರನ್ನು ದೂರವಾಣಿ 9480802118ರಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಕೋರಲಾಗಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ