Breaking News
Home / ಜಿಲ್ಲೆ / ಬೆಂಗಳೂರು / ರಾಜ್ಯಾದ್ಯಂತ ಭಾನುವಾರ ಕರ್ಫ್ಯೂ – ಏನಿರುತ್ತೆ? ಏನಿರಲ್ಲ?
a view of Kempegowda Bus stand in Bengaluru on Wednesday during the lockdown with a few relaxation. -KPN ###

ರಾಜ್ಯಾದ್ಯಂತ ಭಾನುವಾರ ಕರ್ಫ್ಯೂ – ಏನಿರುತ್ತೆ? ಏನಿರಲ್ಲ?

Spread the love

ಬೆಂಗಳೂರು: ಸರ್ಕಾರ ಮೇ 31 ರವರೆಗೆ ಪ್ರತೀ ಭಾನುವಾರ ರಾಜ್ಯಾದ್ಯಂತ ಕಂಪ್ಲೀಟ್ ಲಾಕ್‍ಡೌನ್‍ಗೆ ಆದೇಶ ನೀಡಿದೆ. 4.0 ವಿನಾಯಿತಿ ಲಾಕ್‍ಡೌನ್‍ನ ನಡುವೆ ಮೊದಲ ಭಾನುವಾರ ಬಂದಿದ್ದು, ಇಂದು ಸಂಜೆಯಿಂದಲೇ ಕರ್ಫ್ಯೂ ಜಾರಿಯಲ್ಲಿರುತ್ತದೆ.

ಜನರು ಮನೆಯಿಂದ ಹೊರಗೆ ಬಾರದಂತೆ ತಡೆಯಲು ಪೊಲೀಸ್ ಇಲಾಖೆ ನಿಯಮಗಳನ್ನು ರೂಪಿಸಿಕೊಂಡಿದೆ. ಇಂದು ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆ ವರೆಗೆ ಕರ್ಫ್ಯೂ ಜಾರಿಯಲ್ಲಿ ಇರಲಿದ್ದು, ಸಂಪೂರ್ಣ ಲಾಕ್‍ಡೌನ್ ಇರಲಿದೆ.

ಹಾಗಾದರೆ ಭಾನುವಾರ ರಾಜ್ಯದಲ್ಲಿ ಏನೆಲ್ಲಾ ಇರಲಿವೆ. ಯಾವೆಲ್ಲಾ ಸೌಲಭ್ಯಗಳಿಗೆ ಮಾತ್ರ ಅವಕಾಶ ನೀಡಲಾಗುತ್ತೆ ಎಂಬುದನ್ನು ನೋಡೋದಾದರೆ:

ಭಾನುವಾರ ಏನಿರುತ್ತೆ
* ಹಣ್ಣು, ತರಕಾರಿ, ದಿನಸಿ, ಮಾಂಸದ ಅಂಗಡಿಗಳಿಗೆ ತೆರೆಯಲು ಅವಕಾಶ
* ಆಸ್ಪತ್ರೆಗಳು, ಮೆಡಿಕಲ್ ಸ್ಟೋರ್ಸ್, ಫಾರ್ಮಸಿ ಗಳಿಗೆ ಅವಕಾಶ
* ಡಾಕ್ಟರ್ಸ್, ನರ್ಸ್, ಆಂಬುಲೆನ್ಸ್, ಮಾಧ್ಯಮಗಳು ಓಡಾಟಕ್ಕೆ ಅವಕಾಶ
* ಡಯಾಲಿಸಿಸ್, ಅನಾರೋಗ್ಯ ಸಮಸ್ಯೆ ಇದ್ದವರು ಆಸ್ಪತ್ರೆಗೆ ತೆರಳಲು ಅನುಮತಿ
* ಗರ್ಭಿಣಿ ಸ್ತ್ರೀಯರು ಆಸ್ಪತ್ರೆಗೆ ತೆರಳಲು ಅನುಮತಿ
* ಮದುವೆ ಸಮಾರಂಭಗಳಿಗೆ ಷರತ್ತಿನ ಅನುಮತಿ

ಭಾನುವಾರ ಏನಿರಲ್ಲ?
* ಸಾರ್ವಜನಿಕ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ
* ಬಸ್ ಸಂಚಾರ ಇರಲ್ಲ
* ಅಗತ್ಯ ವಸ್ತುಗಳನ್ನ ಹೊರತು ಪಡಿಸಿ, ಉಳಿದ ಅಂಗಡಿ ಮುಂಗಟ್ಟುಗಳು ಬಂದ್
* ನಗರದ ಪ್ರಮುಖ ರಸ್ತೆಗಳು ಬ್ಯಾರಿಕೆಡ್‍ನಿಂದ ಕ್ಲೋಸ್
* ಬ್ಯೂಟಿ ಪಾರ್ಲರ್, ಸಲೂನ್, ಸ್ಪಾ, ಬಟ್ಟೆ ಅಂಗಡಿ, ಚಪ್ಪಲಿ ಅಂಗಡಿ ಮುಂಗಟ್ಟುಗಳು ಬಂದ್.
* ಗಾರ್ಮೆಂಟ್ಸ್ ಫ್ಯಾಕ್ಟರಿ ಸೇರಿದಂತೆ ಎಲ್ಲಾ ಕಾರ್ಖಾನೆಗಳು ಲಾಕ್
* ಖಾಸಗಿ ಕಂಪನಿಗಳೂ ಕೂಡ ಬಂದ್
* ಎಲ್ಲಾ ಪಾರ್ಕ್ ಗಳಿಗೂ ಬೀಗ ಬೀಳಲಿದ್ದು, ಜಾಗಿಂಗ್ ವಾಕಿಂಗ್ ಗೆ ಪರ್ಮೀಷನ್ ಇಲ್ಲ.
* ಚಿನ್ನದ ಅಂಗಡಿಗಳು ಕೂಡ ಕ್ಲೋಸ್ ಆಗಲಿವೆ
* ಆಟೋ, ಟ್ಯಾಕ್ಸಿ ಕ್ಯಾಬ್ ಗಳು ರಸ್ತೆಗೆ ಇಳಿಯುವಂತಿಲ್ಲ
* ಖಾಸಗಿ ವಾಹನ ಬಳಸಿ ಓಡಾಡುವ ಹಾಗಿಲ್ಲ
* ಬೇರೆ ಜಿಲ್ಲೆಗೆ ಹೋಗಲು ಅವಕಾಶವಿಲ್ಲ

ಪ್ರತಿದಿನ ತೆರೆಯುತ್ತಿದ್ದ ಬಾರ್‌ಗಳು ಭಾನುವಾರ ಕ್ಲೋಸ್ ಆಗಲಿವೆ. ಕಮೀಷನರೇಟ್ ವ್ಯಾಪ್ತಿಯಲ್ಲಿ ಕಮೀಷನರ್ ಮತ್ತು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಬಾರ್ ಕ್ಲೋಸ್ ಬಗ್ಗೆ ಆದೇಶ ಹೊರಡಿಸಲಿದ್ದಾರೆ. ಇಲ್ಲವಾದಲ್ಲಿ ರಾಜ್ಯ ಅಬಕಾರಿ ಆಯುಕ್ತರು ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ಆದೇಶ ಹೊರಡಿಸಲಿದ್ದಾರೆ.

ಇಂದು ರಾತ್ರಿ ಏಳು ಗಂಟೆಗೆ ಎಲ್ಲಾ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್‍ಗಳ ಸಂಚಾರ ಸ್ಟಾಪ್ ಆಗಲಿದ್ದು, ಭಾನುವಾರ ರೋಡಿಗೆ ಇಳಿಯೋದಿಲ್ಲ. ಸೋಮವಾರ ಬೆಳಗ್ಗೆ 7 ಗಂಟೆಗೆ ಯಥಾಸ್ಥಿತಿಯಂತೆ ಸಂಚಾರ ಆರಂಭವಾಗಲಿದೆ. ಸಿಲಿಕಾನ್ ಸಿಟಿ ಬೆಂಗಳೂರು ಮತ್ತು ರಾಜ್ಯಾದ್ಯಂತ ಭಾನುವಾರ ಸಂಪೂರ್ಣ ಲಾಕ್‍ಡೌನ್ ಇರಲಿದ್ದು, ಜನರು ಮನೆಯಿಂದ ಹೊರಬಾರದಂತೆ ಸರ್ಕಾರ ಎಚ್ಚರಿಕೆ ನೀಡಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ