Breaking News

ಕ್ವಾರಂಟೈನ್ ಮಾಡಲು ಬಂದ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗೆ ಯತ್ನ…………

Spread the love

ಬಳ್ಳಾರಿ: ಕ್ವಾರಂಟೈನ್ ಮಾಡಲು ಬಂದ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಸಿರಗುಪ್ಪ ತಾಲೂಕಿನ ನಾಡಂಗ ಗ್ರಾಮದಲ್ಲಿ ಘಟನೆ ನಡೆದಿದ್ದು, ಕಿಡಿಗೇಡಿಗಳು ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಆಂಧ್ರ ಗಡಿ ಭಾಗದಿಂದ ವಲಸೆ ಬಂದ ಕಾರ್ಮಿಕರನ್ನು ಕ್ವಾರಂಟೈನ್ ಮಾಡಲು ಆಶಾ ಕಾರ್ಯಕರ್ತೆಯರು ಮುಂದಾದಗ ಹಲ್ಲೆಗೆ ಯತ್ನಿಸಿದ್ದಾರೆ. ಉದ್ದೇಶ ಪೂರಕವಾಗಿ ಕ್ವಾರಂಟೈನ್ ಮಾಡುತಿದ್ದಾರೆ ಎಂದು ಆರೋಪಿಸಿ ಕೊರೊನಾ ವಾರಿಯರಸ್ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.

ಆಂಧ್ರ ಪ್ರದೇಶದ ಗುಂಟೂರು ಹಾಗೂ ಪ್ರಕಾಶಂ ಜಿಲ್ಲೆಯಿಂದ ಕಾರ್ಮಿಕರು ವಲಸೆ ಬಂದಿದ್ದರು. ಮುಂಜಾಗ್ರತಾ ಕ್ರಮವಾಗಿ ಕಾರ್ಮಿಕರ ಮಾಹಿತಿ ಪಡೆದು, ಕ್ವಾರಂಟೈನ್ ಮಾಡಲು ಕೊರೊನಾ ವಾರಿಯರ್ಸ್ ಮುಂದಾಗಿದ್ದಾರೆ. ಇಷ್ಟಕ್ಕೆ ನಾಡಂಗ ಗ್ರಾಮದ ಕಲೆ ಜನರು ಅವರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾರೆ.


Spread the love

About Laxminews 24x7

Check Also

ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ 15 ದಿನಗಳಲ್ಲಿ ಐವರು ಬಾಣಂತಿಯರು ಸಾವು

Spread the loveಬಳ್ಳಾರಿ, ನವೆಂಬರ್ 28: ಬಳ್ಳಾರಿ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಬಿಮ್ಸ್ ಆಸ್ಪತ್ರೆಯಲ್ಲಿ 15 ದಿನಗಳಲ್ಲಿ ಒಟ್ಟು ಐವರು ಬಾಣಂತಿಯರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ