Breaking News
Home / ರಾಜ್ಯ / ಜೂನ್ 8 ರಿಂದ ದೇವಾಲಯ, ಮಸೀದಿ, ಚರ್ಚ್ ಓಪನ್ – ಷರತ್ತುಗಳು ಅನ್ವಯ

ಜೂನ್ 8 ರಿಂದ ದೇವಾಲಯ, ಮಸೀದಿ, ಚರ್ಚ್ ಓಪನ್ – ಷರತ್ತುಗಳು ಅನ್ವಯ

Spread the love

ಬೆಂಗಳೂರು: ಕೇಂದ್ರ ಸರ್ಕಾರ ಜೂನ್ 30 ವರೆಗೂ ಲಾಕ್‍ಡೌನ್ ವಿಸ್ತರಣೆ ಮಾಡಿದ್ದು, ಹಲವು ವಿನಾಯಿತಿಗಳನ್ನು ನೀಡಿ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ಮಾರ್ಗಸೂಚಿ ಅನ್ವಯ ಜೂನ್ 8 ರಿಂದ ದೇವಸ್ಥಾನಗಳು, ಚರ್ಚ್, ಮಸೀದಿಗಳು ಸೇರಿದಂತೆ ಧಾರ್ಮಿಕ ಸ್ಥಳಗಳನ್ನ ತೆರೆಯಲು ಅವಕಾಶ ನೀಡಲಾಗಿದೆ.

ರಾಜ್ಯ ಸರ್ಕಾರ ಆದೇಶ ನೀಡಿದ ಹಿನ್ನೆಲೆಯಲ್ಲಿ ಜೂನ್ 1ಕ್ಕೆ ದೇವಾಲಯ ತೆರೆಯಲು ದೇವಾಲಯಗಳ ಸಿಬ್ಬಂದಿ ಸಿದ್ಧವಾಗಿದ್ದರು. ದೇವಸ್ಥಾನಗಳನ್ನ ಸ್ವಚ್ಛ ಮಾಡಿ ಅರ್ಚಕರು ಕೂಡ ಸಿದ್ಧರಾಗಿದ್ದರು. ಆದರೆ ಜೂನ್ 1 ಅಲ್ಲ ಜೂನ್ 8 ರಿಂದ ದೇವಾಲಯಗಳನ್ನು ಓಪನ್ ಮಾಡುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ಈ ವಾರವೇ ಸರ್ಕಾರ ಮಾರ್ಗಸೂಚಿ ಪ್ರಕಟಿಸಲಿದೆ. ಮಸೀದಿ, ಮಂದಿರ, ಚರ್ಚ್‍ಗೆ ಬರುವವರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿರಲಿದೆ.

ಷರತ್ತುಗಳು ಏನಿರಬಹುದು?
* ಪ್ರತಿದಿನ ದೇವಾಲಯದ ಒಳಗೆ, ಹೊರಗೆ ಸ್ಯಾನಿಟೈಸರ್ ಸಿಂಪಡಣೆ ಮಾಡಬೇಕು
* ಭಕ್ತರು ಸಾಮಾಜಿಕ ಅಂತರ ಕಾಪಾಡಿ ಕೊಳ್ಳುವಂತೆ ನೋಡಿಕೊಳ್ಳಬೇಕು
* ಪ್ರತಿಯೊಬ್ಬರಿಗೂ ಥರ್ಮಲ್ ಸ್ಯ್ಕಾನಿಂಗ್ ಮಾಡಬೇಕು
* ದೇವಸ್ಥಾನದ ಆವರಣದಲ್ಲಿ ಸ್ವಚ್ಛತೆ ಕಾಪಡಬೇಕು
* ಜನರನ್ನ ನಿಯಂತ್ರಿಸಲು ಹೆಚ್ಚಿನ ಸಿಬ್ಬಂದಿ ಬೇಕಾದ್ರೆ ದೇವಸ್ಥಾನದ ಖರ್ಚಿನಲ್ಲಿ ನೇಮಕಾತಿ ಮಾಡಿಕೊಳ್ಳಬೇಕು
* ದೇವಸ್ಥಾನಗಳನ್ನು ತೆರೆಯಲು ಸಮಯ ನಿಗದಿ ಸಾಧ್ಯತೆ
* ಅರ್ಚಕರು, ಸಿಬ್ಬಂದಿ ಅಗತ್ಯಕ್ಕಿಂತ ಹೆಚ್ಚಿಗಿದ್ದರೆ, ಶೇ.50 ರಷ್ಟು ಹಾಜರಿ
* ಭಕ್ತರು ಕೊಡುವ ಕಾಣಿಕೆ, ಹರಕೆ ವಸ್ತು, ಹೂ ಹಣ್ಣು ಸ್ವೀಕಾರಕ್ಕೆ ಪ್ರತ್ಯೇಕ ಸ್ಥಳ
* ದಿನಕ್ಕೆ ಎರಡರಿಂದ ಮೂರು ಸಲ ಇಡೀ ದೇವಸ್ಥಾನ ಸ್ಯಾನಿಟೈಸ್

ಮಸೀದಿಯಲ್ಲಿ ಷರತ್ತುಗಳು ಏನಿರಬಹುದು?
* ಮುಸ್ಲಿಂ ಬಾಂಧವರು ಸಾಧ್ಯವಾದಷ್ಟು ಮನೆಗಳಲ್ಲೇ ವಝೂ ಅಂದ್ರೆ ಮುಖ ಕೈ ಕಾಲು ಶುಚಿಗೊಳಿಸಿ ಮಸೀದಿಗೆ ಬರಬೇಕು
* ಮಸೀದಿಗಳಲ್ಲಿ ಕೈಕಾಲು ಶುಚಿಗೊಳಿಸುವ ಕೊಳವನ್ನು ಮುಚ್ಚಬೇಕು. ಅದರ ಬದಲು ಟ್ಯಾಪ್ ಬಳಸಬೇಕು
* ಮಸೀದಿಗಳಲ್ಲಿ ಒಂದೇ ಆಗಮನ, ನಿರ್ಗಮನ ದ್ವಾರ ಇರಬೇಕು
* ಪ್ರತಿ ಪ್ರಾರ್ಥನೆ ಮುನ್ನ ಮಸೀದಿಯ ಹಾಲ್ ಅನ್ನು ಶುಚಿಗೊಳಿಸಬೇಕು
* ಮಸೀದಿಗೆ ಬರುವ ಪ್ರತಿಯೊಬ್ಬರನ್ನು ಥರ್ಮಲ್ ಸ್ಕ್ರೀನಿಂಗ್ ಗೆ ಒಳಪಡಿಸಬೇಕು

* ಪ್ರಾರ್ಥನೆ ವೇಳೆ 1 ರಿಂದ 2 ಮೀಟರ್ ಅಂತರ ಕಾಯಬೇಕು
* ಪ್ರತಿ ವ್ಯಕ್ತಿ ತನ್ನ ಸ್ವಂತ ಪ್ರಾರ್ಥನಾ ಚಾಪೆಯನ್ನು ತರಬೇಕು
* ಫರ್ಜ್ ನಮಾಜನ್ನು 10-15 ನಿಮಷಕ್ಕೆ ಸೀಮಿತಗೊಳಿಸಬೇಕು
* ನಮಾಜ್ ಮಾಡಲು ಅತಿ ಹೆಚ್ಚು ಜನರಿದ್ದರೆ, ಎರಡು ಜಮಾತ್‍ಗೆ ವ್ಯವಸ್ಥೆ ಕಲ್ಪಿಸಬೇಕು


* ಸುನ್ನತ್ ಮತ್ತು ನಫೀಸ್ ಪ್ರಾರ್ಥನೆಯನ್ನು ಮನೆಯಲ್ಲೇ ಮಾಡಬೇಕು
* ಶುಕ್ರವಾರದ ಪ್ರಾರ್ಥನೆ 15-20 ನಿಮಿಷಕ್ಕೆ ಸೀಮಿತವಾಗಿರಬೇಕು
* ಮಸೀದಿ, ದರ್ಗಾಗಳ ಬಳಿ ಭಿಕ್ಷಾಟನೆಗೆ ನಿಷೇಧ
* ಮಸೀದಿ ಬಳಿ ಪ್ರಸಾದ ಹಂಚುವುದಕ್ಕೆ ನಿರ್ಬಂಧ
* ದರ್ಗಾದಲ್ಲಿನ ಸಮಾಧಿಗಳೆದುರು ಕೂತು ಪ್ರಾರ್ಥನೆ ಮಾಡಬಾರದು
* ಆಲಿಂಗನ, ಹಸ್ತಲಾಘವಕ್ಕೆ ನಿರ್ಬಂಧ

ಚರ್ಚ್ ತೆರೆಯಲು ಷರತ್ತು ಏನಿರಬಹುದು?
* ಚರ್ಚ್‍ನಲ್ಲಿ ಭಕ್ತರ ಸಂಖ್ಯೆಗೆ ಮಿತಿ ಹೇರಿಕೆ ಸಾಧ್ಯತೆ
* ಪ್ರಾರ್ಥನೆ ವೇಳೆ ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯ
* ಇನ್ನೂ ದಿನದ ನಿರ್ದಿಷ್ಟ ಸಮಯಗಳಲ್ಲಿ ಮಾತ್ರ ಚರ್ಚ್ ತೆರೆಯಲು ಅವಕಾಶ ಸಾಧ್ಯತೆ
* ಪ್ರಾರ್ಥನೆ ಬಳಿಕ ಚರ್ಚ್ ಒಳಗೆ ಸ್ವಚ್ಛಗೊಳಿಸೋದು ಕಡ್ಡಾಯ
* ಯಾವುದೇ ಕಾರಣಕ್ಕೂ ಜನಜಾತ್ರೆ ಆಗದಂತೆ ಕಟ್ಟುನಿಟ್ಟಿನ ಕ್ರಮ


Spread the love

About Laxminews 24x7

Check Also

ಬೆಂ.ಗ್ರಾದಲ್ಲಿ ಕಾಂಗ್ರೆಸ್​ನಿಂದ ಗ್ಯಾರಂಟಿ ಕಾರ್ಡ್​​ ಹಂಚಿಕೆ ಆರೋಪ; BJP-JDS ಕಾರ್ಯಕರ್ತರ ಮೇಲೆ ಹಲ್ಲೆ!

Spread the love ರಾಮನಗರ: ಬೆಂಗಳೂರು ಗ್ರಾಮಾಂತರದ (Bengaluru Rural) ರಾಮನಗರದಲ್ಲಿ (Ramanagara) ಕಾಂಗ್ರೆಸ್ ಕಾರ್ಯಕರ್ತರು, ಡಿಸಿಎಂ ಡಿಕೆ ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ