Breaking News
Home / ಜಿಲ್ಲೆ / ಕುವೈತ್‍ನಿಂದ ಬೆಂಗಳೂರಿಗೆ ಬಂದಿಳಿದ 80 ಪ್ರಯಾಣಿಕರು………….

ಕುವೈತ್‍ನಿಂದ ಬೆಂಗಳೂರಿಗೆ ಬಂದಿಳಿದ 80 ಪ್ರಯಾಣಿಕರು………….

Spread the love

ಬೆಂಗಳೂರು, ಜೂ.3- ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ ಕುವೈತ್ ನಿಂದ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 25ನೇ ಏರ್ ಇಂಡಿಯಾ ವಿಮಾನದಲ್ಲಿ 80 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ.

ನಿನ್ನೆ ಸಂಜೆ 5 ಗಂಟೆಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಒಟ್ಟು 80 ಮಂದಿ ಪ್ರಯಾಣಿಕರಲ್ಲಿ 64 ಪುರುಷರು ಮತ್ತು 16 ಮಹಿಳೆಯರು ಇದ್ದಾರೆ. ಈ ಎಲ್ಲಾ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾರಲ್ಲೂ ಕೊರೋನಾ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ.

ಪ್ರಯಾಣಿಕರು 7 ದಿನಗಳು ಹಜ್ ಭವನದಲ್ಲಿ ಸಾಂಸ್ಥಿಕ ಸಂಪರ್ಕ ತಡೆಯನ್ನು ಪೂರ್ಣಗೊಳಿಸಿದ ಬಳಿಕ, ರೋಗ ಲಕ್ಷಣಗಳು ಕಂಡು ಬಂದಂತಹ ವ್ಯಕ್ತಿಗಳನ್ನು ಬೆಂಗಳೂರಿನ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಕಳುಹಿಸಿಕೊಡಲಾಗುವುದು ಹಾಗೂ ರೋಗ ಲಕ್ಷಣ ರಹಿತ ವ್ಯಕ್ತಿಗಳು ಏಳು ದಿನಗಳ ಹೋಂ ಕ್ವಾರಂಟೈನ್‍ಗೆ ವ್ಯವಸ್ಥೆ ಮಾಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.ಪ್ರಯಾಣಿಕರು 7 ದಿನಗಳು ಹಜ್ ಭವನದಲ್ಲಿ ಸಾಂಸ್ಥಿಕ ಸಂಪರ್ಕ ತಡೆಯನ್ನು ಪೂರ್ಣಗೊಳಿಸಿದ ಬಳಿಕ, ರೋಗ ಲಕ್ಷಣಗಳು ಕಂಡು ಬಂದಂತಹ ವ್ಯಕ್ತಿಗಳನ್ನು ಬೆಂಗಳೂರಿನ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಕಳುಹಿಸಿಕೊಡಲಾಗುವುದು ಹಾಗೂ ರೋಗ ಲಕ್ಷಣ ರಹಿತ ವ್ಯಕ್ತಿಗಳು ಏಳು ದಿನಗಳ ಹೋಂ ಕ್ವಾರಂಟೈನ್‍ಗೆ ವ್ಯವಸ್ಥೆ ಮಾಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.

 


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ