Breaking News
Home / ಜಿಲ್ಲೆ / ರಾಜ್ಯಸಭೆಗೆ ಚುನಾವಣೆ : ಈವರೆಗೂ ಸಲ್ಲಿಕೆಯಾಗಿಲ್ಲ ಯಾವುದೇ ನಾಮಪತ್ರ …………

ರಾಜ್ಯಸಭೆಗೆ ಚುನಾವಣೆ : ಈವರೆಗೂ ಸಲ್ಲಿಕೆಯಾಗಿಲ್ಲ ಯಾವುದೇ ನಾಮಪತ್ರ …………

Spread the love

ಬೆಂಗಳೂರು,ಜೂ.4-ರಾಜ್ಯ ವಿಧಾನಸಬೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಈವರೆಗೂ ಯಾವುದೇ ನಾಮಪತ್ರಗಳು ಸಲ್ಲಿಕೆಯಾಗಿಲ್ಲ. ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಈಗಾಗಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ.

10 ಜನ ಶಾಸಕರ ಸಹಿಯೊಂದಿಗೆ ಮೀಸಲಾತಿ ವ್ಯಾಪ್ತಿಯಡಿ ಬರುವ ಅಭ್ಯರ್ಥಿಗಳು 5 ಸಾವಿರ, ಸಾಮಾನ್ಯ ವರ್ಗದ ಅಭ್ಯರ್ಥಿಗಳು 10 ಸಾವಿರ ರೂ. ಠೇವಣಿಯೊಂದಿಗೆ ನಾಮಪತ್ರ ಸಲ್ಲಿಸಬಹುದು. ಆದರೆ ಈವರೆಗೂ ಯಾವ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿಲ್ಲ.  

ಪ್ರತಿಯೊಬ್ಬ ಅಭ್ಯರ್ಥಿಯೂ ನಾಲ್ಕು 4 ನಾಮಪತ್ರಗಳನ್ನು ಸಲ್ಲಿಸಬಹುದು. ಇಂದಿನವರೆಗೆ ಸುಮಾರು 30 ಮಂದಿ ನಾಮಪತ್ರಗಳ ಅರ್ಜಿಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಆದರೆ ಯಾರೂ ಅರ್ಜಿಯನ್ನು ಸಲ್ಲಿಸಿಲ್ಲ.

ಪ್ರತಿಯೊಬ್ಬ ಅಭ್ಯರ್ಥಿಗಳ ಗೆಲುವಿಗೆ 45 ಮತಗಳ ಅಗತ್ಯವಿದೆ. ಹಾಗೆ ನೋಡಿದರೆ ಆಡಳಿತಾರೂಢ ಬಿಜೆಪಿ ಎರಡು ಸ್ಥಾನಗಳನ್ನು ನಿರಾಯಸವಾಗಿ ಗೆಲ್ಲಬಹುದು. ಕಾಂಗ್ರೆಸ್ 1 ಸ್ಥಾನ ಗೆಲ್ಲುವ ಅವಕಾಶವಿದೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿಯಾಗಿ ಪಕ್ಷೇತರರು ಮತ್ತು ಬಿಜೆಪಿಯ ಕೆಲ ಮತಗಳನ್ನು ಸೆಳೆದರೆ ಮತ್ತೊಂದು ಸ್ಥಾನವನ್ನು ಗೆಲ್ಲಬಹುದಾಗಿದೆ ಅಥವಾ ಬಿಜೆಪಿಯೇ 3ನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಮತ್ತಷ್ಟು ರಾಜಕೀಯ ಚಟುವಟಿಕೆಗಳು ನಡೆಯಲಿವೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ