Breaking News

ಕೊರೊನಾ ಮಾಹಾಮಾರಿ ಈದೀಗ ವಾರಿಯರ್ ಗಳನ್ನು ಕಾಡುತ್ತಿದ್ದು, ಬೆಂಗಳೂರು ಪೊಲೀಸರು ಆತಂಕಕ್ಕೀಡಾಗಿದ್ದಾರೆ.

Spread the love

ಬೆಂಗಳೂರು: ಕೊರೊನಾ ಮಾಹಾಮಾರಿ ಈದೀಗ ವಾರಿಯರ್ ಗಳನ್ನು ಕಾಡುತ್ತಿದ್ದು, ಬೆಂಗಳೂರು ಪೊಲೀಸರು ಆತಂಕಕ್ಕೀಡಾಗಿದ್ದಾರೆ.

ನಗರದಲ್ಲಿ ಕಳೆದ ಒಂದು ವಾರದಿಂದ ಐವರು ಪೊಲೀಸರಿಗೆ ಕೊರೊನಾ ಸೋಂಕು ತಗುಲಿದೆ. ಇದರ ಬೆನ್ನಲ್ಲೆ ಶುಕ್ರವಾರ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿನ ಅರೋಪಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಹಿಂದೆ ಕೂಡ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಆರೋಪಿಯೊಬ್ಬರಿಗೆ ಪಾಸಿಟಿವ್ ಬಂದಿತ್ತು. ಇದೀಗ ಮತ್ತೊಬ್ಬ ಆರೋಪಿಗೆ ಸೋಂಕು ತಗುಲಿದೆ.

ಒಂದು ಕಡೆ ಕಂಟೈನ್ಮೆಂಟ್ ಝೋನ್‍ಗಳಲ್ಲಿ ಕೆಲಸ ಮಾಡುವ ಪೊಲೀಸರಿಗೆ ಕೊರೊನಾ ಭಯ ಶುರುವಾಗಿದ್ದರೆ, ಮತ್ತೊಂದು ಕಡೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳಿಗೂ ಪಾಸಿಟಿವ್ ಬರುತ್ತಿದೆ. ಇದರಿಂದಾಗಿ ಪೊಲೀಸರು ಮತ್ತಷ್ಟು ಆತಂಕಕ್ಕೀಡಾಗಿದ್ದಾರೆ. ರಾಜ್ಯದಲ್ಲಿ ದಾಖಲೆಯ ಮಟ್ಟದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಶುಕ್ರವಾರ ಒಂದೇ ದಿನ 515 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಹೀಗಾಗಿ ಪೊಲೀಸರಿಗೆ ಮತ್ತಷ್ಟು ಭಯವನ್ನುಂಟು ಮಾಡಿದೆ


Spread the love

About Laxminews 24x7

Check Also

ಮುಖ್ಯಮಂತ್ರಿ ,ಉಪ ಮುಖ್ಯಮಂತ್ರಿ ಹಾಗೂ ಮಹದೇವಪ್ಪ ರವರ ನೇತೃತ್ವದಲ್ಲಿ ಒಳಮೀಸಲಾತಿ ಅನುಷ್ಠಾನವಾಗಲಿದೆ ವೀನಾ ಕಾರಣ ಗೊಂದಲಕ್ಕೆ ಒಳಗಾಗದಿರಿ ಆಹಾರ ಸಚಿವ:- ಕೆಹೆಚ್. ಮುನಿಯಪ್ಪ

Spread the loveಹಸಿರುಕ್ರಾಂತಿ ಹರಿಕಾರ, ರಾಷ್ಟ್ರ ನಾಯಕ, ಮಾಜಿ ಉಪ ಪ್ರಧಾನಿ ಹಾಗೂ ತಳ ಸಮುದಾಯಗಳ ಆಶಾಕಿರಣ ಡಾ. ಬಾಬು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ